Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಆಹ್ವಾನಕ್ಕೆ ಕಾಯುತ್ತಿರುವ ಕುಮಾರಸ್ವಾಮಿ, ಗಣೇಶ ಹಬ್ಬಕ್ಕೂ ಮುನ್ನವೇ BJP-JDS ಮೈತ್ರಿ ಅಧಿಕೃತ ಘೋಷಣೆ ಸಾಧ್ಯತೆ

BJP-JDS alliance: ಬಿಜೆಪಿ-ಜೆಡಿಎಸ್ ಮೈತ್ರಿ ಖಚಿತವಾಗಿದೆ. ಈ ಬಗ್ಗೆ ಖುದ್ದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರು ಖಚಿತಪಡಿಸಿದ್ದಾರೆ. ಆದ್ರೆ, ಸೀಟು ಹಂಚಿಕೆ ನಿರ್ಧಾರಗಳನ್ನು ಪುತ್ರ, ಮಾಜಿ ಸಿಎಂ ಕುಮಾರಸ್ವಾಮಿ ತೆಗೆದುಕೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿದ್ದರು. ಇದರ ಬೆನ್ನಲ್ಲೇ ಇದೀಗ ಕುಮಾರಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಉತ್ಸುಕರಾಗಿದ್ದು, ಸಮಯ ನಿಗದಿಯ ನಿರೀಕ್ಷೆಯಲ್ಲಿದ್ದಾರೆ.

ಮೋದಿ ಆಹ್ವಾನಕ್ಕೆ ಕಾಯುತ್ತಿರುವ ಕುಮಾರಸ್ವಾಮಿ, ಗಣೇಶ ಹಬ್ಬಕ್ಕೂ ಮುನ್ನವೇ BJP-JDS ಮೈತ್ರಿ ಅಧಿಕೃತ ಘೋಷಣೆ ಸಾಧ್ಯತೆ
ನಳಿನ್ ಕುಮಾರ್ ಕಟೀಲ್-ಹೆಚ್​ಡಿ ಕುಮಾರಸ್ವಾಮಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Sep 12, 2023 | 3:20 PM

ಬೆಂಗಳೂರು, (ಸೆಪ್ಟೆಂಬರ್ 12): ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Loksabha Elections 2024) ಬಿಜೆಪಿ ಹಾಗೂ ಜೆಡಿಎಸ್​ ಮೈತ್ರಿ (BJP-JDS alliance) ಫೈನಲ್​ ಆಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಜೊತೆ ಮಾತನಾಡಿರುವುದು ನಿಜ ಎಂದು ಸ್ವತಃ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ (HD Devegowda) ಒಪ್ಪಿಕೊಂಡಿದ್ದಾರೆ. ಆದ್ರೆ, ಸೀಟು ಹಂಚಿಕೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಸೀಟು ಹಂಚಿಕೆ ಬಗ್ಗೆ ಮೋದಿ ಜೊತೆ ಕುಮಾರಸ್ವಾಮಿ ಮಾತಾಡುತ್ತಾರೆ ಎಂದು ಪುತ್ರನ ಹೆಗಲ ಮೇಲೆ ಹಾಕಿದ್ದಾರೆ. ಇದರ ಬೆನ್ನಲ್ಲೇ ಇದೀಗ ಹೆಚ್​ಡಿ ಕುಮಾರಸ್ವಾಮಿ ಪ್ರಧಾನಿ ಮೋದಿ ಆಹ್ವಾನಕ್ಕೆ ಕಾಯುತ್ತಿದ್ದಾರೆ.

ಹೌದು.. ಕುಮಾರಸ್ವಾಮಿ ಅವರು ಇಂದು(ಸೆಪ್ಟೆಂಬರ್ 12) ದೆಹಲಿಗೆ ತೆರಳಬೇಕಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರಿಂದ ಇನ್ನೂ ಕರೆ ಬಾರದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ದಿಲ್ಲಿಗೆ ಹೋಗದೇ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದಾರೆ. ಮೋದಿಯಿಂದ ಆಹ್ವಾನ ಬಂದ ಕೂಡಲೇ ಕುಮಾರಸ್ವಾಮಿ ದೆಹಲಿಗೆ ತೆಳಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಜನತಾ ದಳದ ಹೆಸರನ್ನು ಕಮಲ ದಳ ಎಂದು ಬದಲಿಸಿಕೊಂಡರೆ ಒಳಿತು: ಜೆಡಿಎಸ್​ಗೆ ಕಾಂಗ್ರೆಸ್ ಟಾಂಗ್

ಗಣೇಶ ಹಬ್ಬಕ್ಕೂ ಮುನ್ನವೇ ಅಧಿಕೃತ ಘೋಷಣೆ?

ಈಗಾಗಲೇ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಅವರು ಮೈತ್ರಿ ಬಗ್ಗೆ ದೂರವಾಣಿ ಮೂಲಕ ಬಿಜೆಪಿ ವರಿಷ್ಠರ ಜತೆ ಚರ್ಚಿಸಿದ್ದಾರೆ. ಇದೀಗ ಖುದ್ದು ಮುಖಾಮುಖಿಯಾಗಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ಒಂದೇ ಬಾಕಿ ಇದೆ. ಇದೇ ಶುಕ್ರವಾರ ದೇವೇಗೌಡ, ಕುಮಾರಸ್ವಾಮಿ ದೆಹಲಿಗೆ ತೆರಳಿ ಅಂತಿಮ ಸುತ್ತಿನ ಮಾತುಕತೆ ನಡೆಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ನಾಳೆ(ಸೆಪ್ಟೆರಂಬರ್ 13) ದೆಹಲಿಗೆ ತೆರಳುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಎಲ್ಲವೂ ಅಂದುಕೊಂಡತೆ ಯಶಸ್ವಿಯಾದರೆ ಗಣೇಶ ಹಬ್ಬಕ್ಕೂ ಮುನ್ನವೇ ದೆಹಲಿಯಲ್ಲೇ ಉಭಯ ನಾಯಕರು ಮೈತ್ರಿ ಘೋಷಣೆ ಮಾಡಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇನ್ನೊಂದೆಡೆ ಬಿಜೆಪಿಯೊಂದಿಗಿನ ಮೈತ್ರಿ ಬಗ್ಗೆ ಜೆಡಿಎಸ್​ನಲ್ಲೇ ಆಕ್ಷೇಪಗಳು ವ್ಯಕ್ತವಾಗುತ್ತಿವೆ. ಕೆಲ ಶಾಸಕರು ಈ ಮೈತ್ರಿಗೆ ಪರೋಕ್ಷ ವಿರೋಧ ವ್ಯಕ್ತಪಡಿಸಿದ್ದಾರೆ. ಹಾಗೇ ಅಲ್ಪಸಂಖ್ಯಾತ ಸಮುದಾಯದ ಮುಖಂಡರನ್ನು ಹೇಗೆ ನಿಭಾಯಿಸುತ್ತಾರೆ ಎನ್ನುವುದೇ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!