AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಆಹ್ವಾನಕ್ಕೆ ಕಾಯುತ್ತಿರುವ ಕುಮಾರಸ್ವಾಮಿ, ಗಣೇಶ ಹಬ್ಬಕ್ಕೂ ಮುನ್ನವೇ BJP-JDS ಮೈತ್ರಿ ಅಧಿಕೃತ ಘೋಷಣೆ ಸಾಧ್ಯತೆ

BJP-JDS alliance: ಬಿಜೆಪಿ-ಜೆಡಿಎಸ್ ಮೈತ್ರಿ ಖಚಿತವಾಗಿದೆ. ಈ ಬಗ್ಗೆ ಖುದ್ದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರು ಖಚಿತಪಡಿಸಿದ್ದಾರೆ. ಆದ್ರೆ, ಸೀಟು ಹಂಚಿಕೆ ನಿರ್ಧಾರಗಳನ್ನು ಪುತ್ರ, ಮಾಜಿ ಸಿಎಂ ಕುಮಾರಸ್ವಾಮಿ ತೆಗೆದುಕೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿದ್ದರು. ಇದರ ಬೆನ್ನಲ್ಲೇ ಇದೀಗ ಕುಮಾರಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಉತ್ಸುಕರಾಗಿದ್ದು, ಸಮಯ ನಿಗದಿಯ ನಿರೀಕ್ಷೆಯಲ್ಲಿದ್ದಾರೆ.

ಮೋದಿ ಆಹ್ವಾನಕ್ಕೆ ಕಾಯುತ್ತಿರುವ ಕುಮಾರಸ್ವಾಮಿ, ಗಣೇಶ ಹಬ್ಬಕ್ಕೂ ಮುನ್ನವೇ BJP-JDS ಮೈತ್ರಿ ಅಧಿಕೃತ ಘೋಷಣೆ ಸಾಧ್ಯತೆ
ನಳಿನ್ ಕುಮಾರ್ ಕಟೀಲ್-ಹೆಚ್​ಡಿ ಕುಮಾರಸ್ವಾಮಿ
TV9 Web
| Edited By: |

Updated on: Sep 12, 2023 | 3:20 PM

Share

ಬೆಂಗಳೂರು, (ಸೆಪ್ಟೆಂಬರ್ 12): ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Loksabha Elections 2024) ಬಿಜೆಪಿ ಹಾಗೂ ಜೆಡಿಎಸ್​ ಮೈತ್ರಿ (BJP-JDS alliance) ಫೈನಲ್​ ಆಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಜೊತೆ ಮಾತನಾಡಿರುವುದು ನಿಜ ಎಂದು ಸ್ವತಃ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ (HD Devegowda) ಒಪ್ಪಿಕೊಂಡಿದ್ದಾರೆ. ಆದ್ರೆ, ಸೀಟು ಹಂಚಿಕೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಸೀಟು ಹಂಚಿಕೆ ಬಗ್ಗೆ ಮೋದಿ ಜೊತೆ ಕುಮಾರಸ್ವಾಮಿ ಮಾತಾಡುತ್ತಾರೆ ಎಂದು ಪುತ್ರನ ಹೆಗಲ ಮೇಲೆ ಹಾಕಿದ್ದಾರೆ. ಇದರ ಬೆನ್ನಲ್ಲೇ ಇದೀಗ ಹೆಚ್​ಡಿ ಕುಮಾರಸ್ವಾಮಿ ಪ್ರಧಾನಿ ಮೋದಿ ಆಹ್ವಾನಕ್ಕೆ ಕಾಯುತ್ತಿದ್ದಾರೆ.

ಹೌದು.. ಕುಮಾರಸ್ವಾಮಿ ಅವರು ಇಂದು(ಸೆಪ್ಟೆಂಬರ್ 12) ದೆಹಲಿಗೆ ತೆರಳಬೇಕಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರಿಂದ ಇನ್ನೂ ಕರೆ ಬಾರದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ದಿಲ್ಲಿಗೆ ಹೋಗದೇ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದಾರೆ. ಮೋದಿಯಿಂದ ಆಹ್ವಾನ ಬಂದ ಕೂಡಲೇ ಕುಮಾರಸ್ವಾಮಿ ದೆಹಲಿಗೆ ತೆಳಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಜನತಾ ದಳದ ಹೆಸರನ್ನು ಕಮಲ ದಳ ಎಂದು ಬದಲಿಸಿಕೊಂಡರೆ ಒಳಿತು: ಜೆಡಿಎಸ್​ಗೆ ಕಾಂಗ್ರೆಸ್ ಟಾಂಗ್

ಗಣೇಶ ಹಬ್ಬಕ್ಕೂ ಮುನ್ನವೇ ಅಧಿಕೃತ ಘೋಷಣೆ?

ಈಗಾಗಲೇ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಅವರು ಮೈತ್ರಿ ಬಗ್ಗೆ ದೂರವಾಣಿ ಮೂಲಕ ಬಿಜೆಪಿ ವರಿಷ್ಠರ ಜತೆ ಚರ್ಚಿಸಿದ್ದಾರೆ. ಇದೀಗ ಖುದ್ದು ಮುಖಾಮುಖಿಯಾಗಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ಒಂದೇ ಬಾಕಿ ಇದೆ. ಇದೇ ಶುಕ್ರವಾರ ದೇವೇಗೌಡ, ಕುಮಾರಸ್ವಾಮಿ ದೆಹಲಿಗೆ ತೆರಳಿ ಅಂತಿಮ ಸುತ್ತಿನ ಮಾತುಕತೆ ನಡೆಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ನಾಳೆ(ಸೆಪ್ಟೆರಂಬರ್ 13) ದೆಹಲಿಗೆ ತೆರಳುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಎಲ್ಲವೂ ಅಂದುಕೊಂಡತೆ ಯಶಸ್ವಿಯಾದರೆ ಗಣೇಶ ಹಬ್ಬಕ್ಕೂ ಮುನ್ನವೇ ದೆಹಲಿಯಲ್ಲೇ ಉಭಯ ನಾಯಕರು ಮೈತ್ರಿ ಘೋಷಣೆ ಮಾಡಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇನ್ನೊಂದೆಡೆ ಬಿಜೆಪಿಯೊಂದಿಗಿನ ಮೈತ್ರಿ ಬಗ್ಗೆ ಜೆಡಿಎಸ್​ನಲ್ಲೇ ಆಕ್ಷೇಪಗಳು ವ್ಯಕ್ತವಾಗುತ್ತಿವೆ. ಕೆಲ ಶಾಸಕರು ಈ ಮೈತ್ರಿಗೆ ಪರೋಕ್ಷ ವಿರೋಧ ವ್ಯಕ್ತಪಡಿಸಿದ್ದಾರೆ. ಹಾಗೇ ಅಲ್ಪಸಂಖ್ಯಾತ ಸಮುದಾಯದ ಮುಖಂಡರನ್ನು ಹೇಗೆ ನಿಭಾಯಿಸುತ್ತಾರೆ ಎನ್ನುವುದೇ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ