AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನತಾ ದಳದ ಹೆಸರನ್ನು ಕಮಲ ದಳ ಎಂದು ಬದಲಿಸಿಕೊಂಡರೆ ಒಳಿತು: ಜೆಡಿಎಸ್​ಗೆ ಕಾಂಗ್ರೆಸ್ ಟಾಂಗ್

ಲೋಕಸಭೆ ಚುನಾವಣೆ ಹಿನ್ನೆಲೆ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಮಾತುಕತೆ ನಡೆಯುತ್ತಿದೆ. ಈ ವಿಚಾರವಾಗಿ ಬಹುತೇಕ ಬಿಜೆಪಿ-ಜೆಡಿಎಸ್ ನಾಯಕರು ಸಹಮತ ಸೂಚಿಸಿದರೆ, ಇತ್ತ ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷ ಟೀಕಿಸುತ್ತಿದೆ. ಜನತಾ ದಳ ಎಂಬ ಹೆಸರನ್ನು ಕಮಲ ದಳ ಎಂದು ಬದಲಿಸಿಕೊಂಡರೆ ಒಳಿತು ಎಂದು ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.

ಜನತಾ ದಳದ ಹೆಸರನ್ನು ಕಮಲ ದಳ ಎಂದು ಬದಲಿಸಿಕೊಂಡರೆ ಒಳಿತು: ಜೆಡಿಎಸ್​ಗೆ ಕಾಂಗ್ರೆಸ್ ಟಾಂಗ್
ಬಿಜೆಪಿ-ಜೆಡಿಎಸ್, ಕಾಂಗ್ರೆಸ್
ಪ್ರಸನ್ನ ಗಾಂವ್ಕರ್​
| Edited By: Rakesh Nayak Manchi|

Updated on: Sep 11, 2023 | 1:45 PM

Share

ಬೆಂಗಳೂರು, ಸೆ.11: ಲೋಕಸಭೆ ಚುನಾವಣೆ ಹಿನ್ನೆಲೆ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ (BJP JDS Alliance) ಮಾತುಕತೆ ನಡೆಯುತ್ತಿದೆ. ಈ ವಿಚಾರವಾಗಿ ಬಹುತೇಕ ಬಿಜೆಪಿ-ಜೆಡಿಎಸ್ ನಾಯಕರು ಸಹಮತ ಸೂಚಿಸಿದರೆ, ಇತ್ತ ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ (Congress) ಪಕ್ಷ ಟೀಕಿಸುತ್ತಿದೆ. ಜನತಾ ದಳ ಎಂಬ ಹೆಸರನ್ನು ಕಮಲ ದಳ ಎಂದು ಬದಲಿಸಿಕೊಂಡರೆ ಒಳಿತು ಎಂದು ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.

“ಚುನಾವಣೆಯಲ್ಲಿ ಸೋತರೆ ಪಕ್ಷ ವಿಸರ್ಜಿಸುತ್ತೇನೆ ಎಂದಿದ್ದರು, ಆದರೆ ಈಗ “ಜಾತ್ಯಾತೀತತೆ”ಯನ್ನು ವಿಸರ್ಜಿಸಲು ಹೊರಟಿದ್ದಾರೆ. ಜನತಾ ದಳ ಎಂಬ ಹೆಸರನ್ನು “ಕಮಲ ದಳ” ಎಂದು ಬದಲಿಸಿಕೊಂಡರೆ ಒಳಿತು” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಮೈತ್ರಿ ಸರ್ಕಾರ ರಚಿಸಲು ಜೆಡಿಎಸ್ ನೊಂದಿಗೆ ಸ್ನೇಹ ಬೆಳೆಸುವಾಗ ಕಾಂಗ್ರೆಸ್ ಅಸಹಾಯಕ ಸ್ಥಿತಿಯಲ್ಲಿರಲಿಲ್ಲವೇ? ಬಸವರಾಜ ಬೊಮ್ಮಾಯಿ

“ಇತ್ತ ಬಿಜೆಪಿ ಜೆಡಿಎಸ್ ಪಕ್ಷವನ್ನು ಫ್ಯಾಮಿಲಿ ಪಾರ್ಟಿ ಟೀಕಿಸುತ್ತಿತ್ತು, ಈಗ ಅದೇ ಫ್ಯಾಮಿಲಿಗೆ ನಾಲ್ಕು ಸೀಟು ಬಿಟ್ಟು ಹೊಂದಾಣಿಕೆ ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡು ಅಲ್ಲವೇ” ಎಂದು ಬಿಜೆಪಿ ಪಕ್ಷಕ್ಕೆ ಕಾಂಗ್ರೆಸ್ ಟಾಂಗ್ ನೀಡಿದೆ.

“ಬಿಜೆಪಿ ಜೆಡಿಎಸ್ ಮೈತ್ರಿ ಹೇಗಿದೆ ಅಂದರೆ ನಡು ನೀರಲ್ಲಿ ಮುಳುಗುತ್ತಿರುವ ಇಬ್ಬರು ಒಬ್ಬರನೊಬ್ಬರು ಕೈ ಹಿಡಿದು ಆಸರೆ ಪಡೆಯುವಂತೆ..! ಪರಸ್ಪರ ಕೈ ಹಿಡಿದು ಇಬ್ಬರೂ ಮುಳುಗಿ ತಳ ಸೇರುವುದು ಖಂಡಿತ. ಮುಳುಗುವವರು ಹುಲ್ಲು ಕಡ್ಡಿಯ ಆಸರೆಯನ್ನಾದರೂ ಪಡೆಯಬೇಕು, ಅದು ಬಿಟ್ಟು ಮತ್ತೊಬ್ಬ ಮುಳುಗುತ್ತಿರುವವರ ಆಸರೆ ಪಡೆದರೆ ಬದುಕಲು ಸಾಧ್ಯವೇ?!” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ