ಜನತಾ ದಳದ ಹೆಸರನ್ನು ಕಮಲ ದಳ ಎಂದು ಬದಲಿಸಿಕೊಂಡರೆ ಒಳಿತು: ಜೆಡಿಎಸ್​ಗೆ ಕಾಂಗ್ರೆಸ್ ಟಾಂಗ್

ಲೋಕಸಭೆ ಚುನಾವಣೆ ಹಿನ್ನೆಲೆ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಮಾತುಕತೆ ನಡೆಯುತ್ತಿದೆ. ಈ ವಿಚಾರವಾಗಿ ಬಹುತೇಕ ಬಿಜೆಪಿ-ಜೆಡಿಎಸ್ ನಾಯಕರು ಸಹಮತ ಸೂಚಿಸಿದರೆ, ಇತ್ತ ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷ ಟೀಕಿಸುತ್ತಿದೆ. ಜನತಾ ದಳ ಎಂಬ ಹೆಸರನ್ನು ಕಮಲ ದಳ ಎಂದು ಬದಲಿಸಿಕೊಂಡರೆ ಒಳಿತು ಎಂದು ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.

ಜನತಾ ದಳದ ಹೆಸರನ್ನು ಕಮಲ ದಳ ಎಂದು ಬದಲಿಸಿಕೊಂಡರೆ ಒಳಿತು: ಜೆಡಿಎಸ್​ಗೆ ಕಾಂಗ್ರೆಸ್ ಟಾಂಗ್
ಬಿಜೆಪಿ-ಜೆಡಿಎಸ್, ಕಾಂಗ್ರೆಸ್
Edited By: Rakesh Nayak Manchi

Updated on: Sep 11, 2023 | 1:45 PM

ಬೆಂಗಳೂರು, ಸೆ.11: ಲೋಕಸಭೆ ಚುನಾವಣೆ ಹಿನ್ನೆಲೆ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ (BJP JDS Alliance) ಮಾತುಕತೆ ನಡೆಯುತ್ತಿದೆ. ಈ ವಿಚಾರವಾಗಿ ಬಹುತೇಕ ಬಿಜೆಪಿ-ಜೆಡಿಎಸ್ ನಾಯಕರು ಸಹಮತ ಸೂಚಿಸಿದರೆ, ಇತ್ತ ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ (Congress) ಪಕ್ಷ ಟೀಕಿಸುತ್ತಿದೆ. ಜನತಾ ದಳ ಎಂಬ ಹೆಸರನ್ನು ಕಮಲ ದಳ ಎಂದು ಬದಲಿಸಿಕೊಂಡರೆ ಒಳಿತು ಎಂದು ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.

“ಚುನಾವಣೆಯಲ್ಲಿ ಸೋತರೆ ಪಕ್ಷ ವಿಸರ್ಜಿಸುತ್ತೇನೆ ಎಂದಿದ್ದರು, ಆದರೆ ಈಗ “ಜಾತ್ಯಾತೀತತೆ”ಯನ್ನು ವಿಸರ್ಜಿಸಲು ಹೊರಟಿದ್ದಾರೆ. ಜನತಾ ದಳ ಎಂಬ ಹೆಸರನ್ನು “ಕಮಲ ದಳ” ಎಂದು ಬದಲಿಸಿಕೊಂಡರೆ ಒಳಿತು” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಮೈತ್ರಿ ಸರ್ಕಾರ ರಚಿಸಲು ಜೆಡಿಎಸ್ ನೊಂದಿಗೆ ಸ್ನೇಹ ಬೆಳೆಸುವಾಗ ಕಾಂಗ್ರೆಸ್ ಅಸಹಾಯಕ ಸ್ಥಿತಿಯಲ್ಲಿರಲಿಲ್ಲವೇ? ಬಸವರಾಜ ಬೊಮ್ಮಾಯಿ

“ಇತ್ತ ಬಿಜೆಪಿ ಜೆಡಿಎಸ್ ಪಕ್ಷವನ್ನು ಫ್ಯಾಮಿಲಿ ಪಾರ್ಟಿ ಟೀಕಿಸುತ್ತಿತ್ತು, ಈಗ ಅದೇ ಫ್ಯಾಮಿಲಿಗೆ ನಾಲ್ಕು ಸೀಟು ಬಿಟ್ಟು ಹೊಂದಾಣಿಕೆ ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡು ಅಲ್ಲವೇ” ಎಂದು ಬಿಜೆಪಿ ಪಕ್ಷಕ್ಕೆ ಕಾಂಗ್ರೆಸ್ ಟಾಂಗ್ ನೀಡಿದೆ.

“ಬಿಜೆಪಿ ಜೆಡಿಎಸ್ ಮೈತ್ರಿ ಹೇಗಿದೆ ಅಂದರೆ ನಡು ನೀರಲ್ಲಿ ಮುಳುಗುತ್ತಿರುವ ಇಬ್ಬರು ಒಬ್ಬರನೊಬ್ಬರು ಕೈ ಹಿಡಿದು ಆಸರೆ ಪಡೆಯುವಂತೆ..! ಪರಸ್ಪರ ಕೈ ಹಿಡಿದು ಇಬ್ಬರೂ ಮುಳುಗಿ ತಳ ಸೇರುವುದು ಖಂಡಿತ. ಮುಳುಗುವವರು ಹುಲ್ಲು ಕಡ್ಡಿಯ ಆಸರೆಯನ್ನಾದರೂ ಪಡೆಯಬೇಕು, ಅದು ಬಿಟ್ಟು ಮತ್ತೊಬ್ಬ ಮುಳುಗುತ್ತಿರುವವರ ಆಸರೆ ಪಡೆದರೆ ಬದುಕಲು ಸಾಧ್ಯವೇ?!” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us