AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ-ಜೆಡಿಎಸ್ ಮೈತ್ರಿ: ಕಾಂಗ್ರೆಸ್​ಗೆ ನಡುಕ ಶುರು ಎಂದ ಹೆಚ್​ಡಿ ಕುಮಾರಸ್ವಾಮಿ

ಲೋಕಸಭೆ ಚುನಾವಣೆ ಹಿನ್ನೆಲೆ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಮಾತುಕತೆ ನಡೆಯುತ್ತಿದೆ. ಇದು ಇನ್ನೂ ಪ್ರಾಥಮಿಕ ಹಂತದಲ್ಲಿದೆ ಎನ್ನಲಾಗುತ್ತಿದ್ದು, ಕಾರ್ಯಕರ್ತರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲು ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಸೂಚಿಸಿದ್ದಾರೆ. ಹೀಗಾಗಿ ನಾಳೆ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಯುವ ಸಾಧ್ಯತೆ ಇದೆ.

ಬಿಜೆಪಿ-ಜೆಡಿಎಸ್ ಮೈತ್ರಿ: ಕಾಂಗ್ರೆಸ್​ಗೆ ನಡುಕ ಶುರು ಎಂದ ಹೆಚ್​ಡಿ ಕುಮಾರಸ್ವಾಮಿ
ಹೆಚ್​​ಡಿ ಕುಮಾರಸ್ವಾಮಿ
Follow us
TV9 Web
| Updated By: Rakesh Nayak Manchi

Updated on: Sep 09, 2023 | 2:38 PM

ಬೆಂಗಳೂರು, ಸೆ.9: ಲೋಕಸಭೆ ಚುನಾವಣೆ ಹಿನ್ನೆಲೆ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ (BJP-JDS Alliance) ಮಾತುಕತೆ ನಡೆಯುತ್ತಿದ್ದು, ಇದು ಇನ್ನೂ ಪ್ರಾಥಮಿಕ ಹಂತದಲ್ಲಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (H.D.Kumaraswamy), ಪ್ರಸಕ್ತ ಬೆಳವಣಿಗೆ ಪ್ರಾಥಮಿಕ ಹಂತದಲ್ಲಿದೆ ಇದೆ ಅಷ್ಟೇ. ನಾಳೆ ಕಾರ್ಯಕರ್ತರ ಸಭೆ ಮಾಡಲು ದೇವೇಗೌಡರು ಹೇಳಿದ್ದರು. ಹೀಗಾಗಿ ಕಾರ್ಯಕರ್ತರ ಅಭಿಪ್ರಾಯ ಕೇಳಬೇಕು ಅಲ್ವಾ? ಎಂದು ಪ್ರಶ್ನಿಸಿದರು.

ಇಲ್ಲಿ ಕೊಟ್ಟು ತೆಗೆದುಕೊಳ್ಳುವುದು ಅಲ್ಲ, ವಿಶ್ವಾಸ, ಗೌರವ ಮುಖ್ಯ. ಗೌರವ, ವಿಶ್ವಾಸವನ್ನು ಮೊದಲು ಸರಿಪಡಿಸಿಕೊಳ್ಳಬೇಕು ಎಂದು ಹೇಳಿದ ಕುಮಾರಸ್ವಾಮಿ, ಮೈತ್ರಿ ವಿಚಾರವಾಗಿ ಉತ್ತರ ನೀಡುವ ಕಾಲ ಇನ್ನೂ ದೂರ ಇದೆ. ಯಾವುದೇ ರಾಜಕಾರಣಿಗೂ ಹತಾಶೆ ಎಂಬುದು ಬರಲ್ಲ. ಇಲ್ಲಿ ಹತಾಶೆ ಆಗುತ್ತಿರುವುದು, ನಡುಕ ಆಗಿರುವುದು ಕಾಂಗ್ರೆಸ್​ ಪಕ್ಷಕ್ಕೆ ಮಾತ್ರ ಎಂದರು.

ಇದನ್ನೂ ಓದಿ: ಮಿಷನ್ 28: ಬಿಜೆಪಿ, ಜೆಡಿಎಸ್ ನಡುವೆ​ ಮೈತ್ರಿ ಮಾತುಕತೆ; ಯಾರು ಏನಂದ್ರು?

ಮೈತ್ರಿ ವಿಚಾರವಾಗಿ ದೆಹಲಿಗೆ ಹೋಗುವ ಬಗ್ಗೆ ಇನ್ನೂ ನಿಗದಿಯಾಗಿಲ್ಲ. ರಾಜ್ಯದ ಹಿತದೃಷ್ಟಿಯಿಂದ ಕೆಲವು ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಮೈತ್ರಿ ಬಗ್ಗೆ ನನಗೆ ಯಾವುದೇ ಆತುರ ಇಲ್ಲ ಎದು ಬೆಂಗಳೂರಿನಲ್ಲಿ ಕುಮಾರಸ್ವಾಮಿ ಹೇಳಿದರು.

ಲೂಟಿ ಮಾಡಿದ ಹಣದಲ್ಲಿ ಮತ್ತೆ ಜನರನ್ನು ಕೊಂಡುಕೊಳ್ಳಲು ಯೋಚಿಸಿದ್ದಾರೆ. ನಾನು ಇಂದು ದೊಡ್ಡವರ ಜೊತೆ ರಾಜಕೀಯ ಮಾತಾಡಲು ಬಂದಿಲ್ಲ. ಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಸಾದ ತೆಗೆದುಕೊಂಡು ಹೋಗಲು ತಂಗಿ ಕರೆದಿದ್ದಳು ಅದಕ್ಕೆ ಬಂದಿದ್ದೆ. ದೆಹಲಿಗೆ ಹೋಗುವುದು ಇನ್ನೂ ಸಮಯ ನಿಗದಿಯಾಗಿಲ್ಲ. ದೇವೇಗೌಡರು ಒಪ್ಪಿದ್ದಾರೋ ಒಪ್ಪಿಲ್ಲವೋ ಮುಂದೆ ಗೊತ್ತಾಗುತ್ತದೆ. ಜನ ಬೇಸತ್ತಿರುವುದರಿಂದ ಕೆಲವು ನಿರ್ಣಯ ಮಾಡಬೇಕಾಗುತ್ತದೆ, ಮಾಡೋಣ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​