AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಗಟ್ಟಿಯಾಗಿರಬೇಕಂತೆ, ಪ್ರಧಾನಿ ಬಹಳ ವೀಕ್ ಆಗಿರಬೇಕಂತೆ ಅಬ್ಬಾ: ಸಿದ್ದರಾಮಯ್ಯಗೆ ದೇವೇಗೌಡ ವ್ಯಂಗ್ಯಾಸ್ತ್ರ

BJP JDS Coordination Meeting: ಜೆಡಿಎಸ್ ಬಿಜೆಪಿ ಸಮನ್ವಯ ಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡ ಸಿಎಂ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ್ದಲ್ಲದೆ, ಕಾಂಗ್ರೆಸ್​ ಪಕ್ಷವನ್ನು ಸೋಲಿಸಲು ಹಳೆಯದನ್ನೆಲ್ಲ ಮರೆತು ಒಂದಾಗೋಣ ಎಂದು ಕರೆ ನೀಡಿದರು. ಅಲ್ಲದೆ, ಚುನಾವಣೆಯಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸಲಿದೆ ಎಂದು ಆರೋಪಿಸಿದರು.

ಸಿಎಂ ಗಟ್ಟಿಯಾಗಿರಬೇಕಂತೆ, ಪ್ರಧಾನಿ ಬಹಳ ವೀಕ್ ಆಗಿರಬೇಕಂತೆ ಅಬ್ಬಾ: ಸಿದ್ದರಾಮಯ್ಯಗೆ ದೇವೇಗೌಡ ವ್ಯಂಗ್ಯಾಸ್ತ್ರ
ಬಿಜೆಪಿ ಜೆಡಿಎಸ್ ಸಮನ್ವಯ ಸಭೆಯಲ್ಲಿ ದೇವೇಗೌಡ, ಯಡಿಯೂರಪ್ಪ, ಕುಮಾರಸ್ವಾಮಿ
ಕಿರಣ್​ ಹನಿಯಡ್ಕ
| Edited By: |

Updated on: Mar 29, 2024 | 2:28 PM

Share

ಬೆಂಗಳೂರು, ಮಾರ್ಚ್​ 29: ‘ಒಂದು ರಾಜ್ಯದ ಸಿಎಂ ಗಟ್ಟಿಯಾಗಿರಬೇಕಂತೆ, ದೇಶದ ಪ್ರಧಾನಿ ಬಹಳ ವೀಕ್ ಆಗಿರಬೇಕಂತೆ, ಅಬ್ಬಾ!’ ಹೀಗೆಂದು ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ವ್ಯಂಗ್ಯವಾಡಿದ್ದು ಮತ್ಯಾರೂ ಅಲ್ಲ. ಜೆಡಿಸ್ (JDS) ವರಿಷ್ಠ, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು (HD Deve Gowda). ಬಿಜೆಪಿ ಜೆಡಿಎಸ್ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ವಿರುದ್ಧ ಈಗ ಸಿದ್ದರಾಮಯ್ಯ ಸರ್ಕಾರದವರು ಕೋರ್ಟಿಗೆ ಹೋಗಿದ್ದಾರೆ. ರೈತರ ಸಾಲದ ಮೇಲೆ ಬಡ್ಡಿ ಮನ್ನಾ ಮಾಡಿ ಎಂದಾಗ ಅಂದಿನ ಯುಪಿಎ ಸರ್ಕಾರದ ಪ್ರಧಾನಿ ಮನಮೋಹನ್ ಸಿಂಗ್ ಆಗದು ಎಂದಿದ್ದರು. ಇದೆಲ್ಲಾ ಗೊತ್ತಿದ್ದರೂ ಸಿದ್ದರಾಮಯ್ಯನವರೇ ಕೋರ್ಟಿಗೆ ಅರ್ಜಿ ಹಾಕುತ್ತೀರಾ ಎಂದು ಪ್ರಶ್ನಿಸಿದರು. ಅಲ್ಲದೆ, ಸ್ಟ್ರಾಂಗೆಸ್ಟ್ ಮುಖ್ಯಮಂತ್ರಿ, ವೀಕೆಸ್ಟ್ ಪ್ರಧಾನಮಂತ್ರಿ ಎನ್ನುವ ಮುಖ್ಯಮಂತ್ರಿ ನಮ್ಮ ರಾಜ್ಯದಲ್ಲಿದ್ದಾರೆ. ಆ ಮಹಾನುಭಾವರಿಗೆ, ನಮೋ ನಮಃ ಎಂದು ಕುಹಕವಾಡಿದರು.

ನನಗೆ ಬಂದು ಪ್ರಚಾರ ಭಾಷಣ ಮಾಡುವ ಶಕ್ತಿ ಇದೆ. ಬೆಂಗಳೂರು ಗ್ರಾಮಾಂತರದ ಉಸ್ತುವಾರಿ ಆರ್. ಅಶೋಕ್‌ಗೆ ನೀಡಿ. ಒಬ್ಬ ಸಾಮಾನ್ಯ ಕಾರ್ಯಕರ್ತರನ್ನೂ ಬಿಡದೇ ಹೋರಾಟ ಮಾಡೋಣ ಎಂದು ದೇವೇಗೌಡರು ಬಿಜೆಪಿ, ಜೆಡಿಎಸ್ ನಾಯಕರು, ಕಾರ್ಯಕರ್ತರಿಗೆ ಕರೆ ನೀಡಿದರು.

ಹಣದ ಹೊಳೆ ಹರಿಸಬಹುದು ಕಾಂಗ್ರೆಸ್: ದೇವೇಗೌಡ

ರಾಜ್ಯದ ಹಲವು ಕ್ಷೇತ್ರಗಳಲ್ಲಿ ನಮ್ಮ ಪರ ವಾತಾವರಣ ಇದೆ. ಕೆಲಸ ಮಾಡಿ ಎಲ್ಲಾ ಕ್ಷೇತ್ರಗಳನ್ನೂ ಗೆಲ್ಲಿಸಿ, ಹಳೆಯದನ್ನು ಮರೆಯಿರಿ. ಕಾಂಗ್ರೆಸ್ ಬಳಿ ಸಂಪನ್ಮೂಲ ಹೆಚ್ಚಾಗಿದೆ. ಅವರು ಸಂಪನ್ಮೂಲ ಸಂಗ್ರಹ ಮಾಡಿದ್ದೇ ಅಕ್ರಮ ಮಾರ್ಗದಲ್ಲಿ. ಕಾಂಗ್ರೆಸ್​ನವರು ಬೇರೆ ರಾಜ್ಯಗಳಿಗೂ ಹಣ ಸಾಗಿಸಿದರು. ಕಾಂಗ್ರೆಸ್​ ಈ ಚುನಾವಣೆಯಲ್ಲಿ ಹಣದ ಹೊಳೆ ಹರಿಸಬಹುದು. ಹಣ ಸುರಿಯುವ ಕಾಂಗ್ರೆಸ್ ಪಕ್ಷ ಸೋಲಿಸುವುದು ಸುಲಭವಲ್ಲ. ನಾಯಕರು ಎಲ್ಲಾ ಮಾಹಿತಿಯನ್ನು ಬಿಜೆಪಿ ವರಿಷ್ಠರಿಗೆ ನೀಡುತ್ತಿದ್ದಾರೆ ಎಂದು ದೇವೇಗೌಡ ಹೇಳಿದರು.

ಇದನ್ನೂ ಓದಿ: ದೇವೇಗೌಡರ ಆಶೀರ್ವಾದ ಆನೆ ಬಲ ತಂದಿದೆ: ಬಿಜೆಪಿ ಜೆಡಿಎಸ್ ಸಮನ್ವಯ ಸಭೆ ಬಳಿಕ ವಿಜಯೇಂದ್ರ ಹರ್ಷ

ಎರಡೂ ಪಕ್ಷದಲ್ಲಿ ಸಮನ್ವಯ ಸಾಧಿಸಬೇಕು. ಹಿಂದೆ ಆದಂತಹ ವಿಚಾರಗಳನ್ನೆಲ್ಲ ಮರೆತು ನಾವೆಲ್ಲರೂ ಒಂದಾಗಬೇಕಿದೆ ಎಂದು ಅವರು ಹೇಳಿದರು.

ಬಳಿಕ ‘ಟಿವಿ9’ಗೆ ಹೇಳಿಕೆ ನೀಡಿರುವ ದೇವೇಗೌಡರು, ಬಿಜೆಪಿ ಮತ್ತು ಜೆಡಿಎಸ್ ನಡುವೆ ಇದ್ದ ವ್ಯತ್ಯಾಸಗಳನ್ನು ಎಲ್ಲರೂ ಮರೆತು ಐಕ್ಯತೆಯಿಂದ ಕೆಲಸ ಮಾಡಬೇಕೆಂದೂ, 28ಕ್ಕೆ 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಬೇಕು ಎಂದು ಸಂದೇಶ ಕೊಟ್ಟಿದ್ದೇವೆ. ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಿರುವ ಕಾಂಗ್ರೆಸ್ ಗೆ ಉತ್ತರ ಕೊಟ್ಟಿದ್ದೇನೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಒಂದೇ ಒಂದು ಭಿನ್ನಾಭಿಪ್ರಾಯ ಬಾರದಂತೆ ನೋಡಿಕೊಂಡು ಕೆಲಸ ಮಾಡಬೇಕೆಂದು ಕಾರ್ಯಕರ್ತರಿಗೆ ಸಂದೇಶ ಕೊಟ್ಟಿದ್ದೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?