AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆಗೆ ಬಿಜೆಪಿ, ಜೆಡಿಎಸ್ ಸೀಟು ಹಂಚಿಕೆ: ದೆಹಲಿಗೆ ತೆರಳಲಿರುವ ಹೆಚ್​ಡಿ ಕುಮಾರಸ್ವಾಮಿ

BJP, JDS seat sharing: ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜತೆ ಸೀಟು ಹಂಚಿಕೆ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆ ಮಾತುಕತೆ ನಡೆಸಲು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ ಇಂದು (ಡಿ. 20) ಸಂಜೆ ದೆಹಲಿಗೆ ತೆರಳಲಿದ್ದಾರೆ.

ಲೋಕಸಭೆ ಚುನಾವಣೆಗೆ ಬಿಜೆಪಿ, ಜೆಡಿಎಸ್ ಸೀಟು ಹಂಚಿಕೆ: ದೆಹಲಿಗೆ ತೆರಳಲಿರುವ ಹೆಚ್​ಡಿ ಕುಮಾರಸ್ವಾಮಿ
ಅಮಿತ್ ಶಾ & ಕುಮಾರಸ್ವಾಮಿ (ಸಂಗ್ರಹ ಚಿತ್ರ)
ಸುನಿಲ್​ ಎಮ್​ ಹೆಚ್​
| Edited By: |

Updated on:Dec 20, 2023 | 1:57 PM

Share

ಬೆಂಗಳೂರು, ಡಿಸೆಂಬರ್ 20: ಮುಂಬರುವ ಲೋಕಸಭೆ ಚುನಾವಣೆಗೆ (Lok Sabha Elections) ಕರ್ನಾಟಕದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಬಿಜೆಪಿ ಜತೆ ಮಾತುಕತೆ ನಡೆಸಲು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಇಂದು (ಬುಧವಾರ) ಸಂಜೆ ದೆಹಲಿಗೆ ತೆರಳಲಿದ್ದಾರೆ. 5 ರಿಂದ 7 ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಕುಮಾರಸ್ವಾಮಿ ಒಲವು ಹೊಂದಿದ್ದಾರೆ ಎನ್ನಲಾಗಿದೆ.

ಏಳು ಕ್ಷೇತ್ರಗಳನ್ನು ಜಡಿಎಸ್​ಗೆ ನೀಡಬೇಕೆಂದು ಕುಮಾರಸ್ವಾಮಿ ಬೇಡಿಕೆ ಇಡುವ ಸಾಧ್ಯತೆ ಇದೆ. ಕನಿಷ್ಠ 5 ಕ್ಷೇತ್ರಕ್ಕೆ ಪಟ್ಟುಹಿಡಿಯುವ ಸಾಧ್ಯತೆ ಇದೆ. ಮಂಡ್ಯ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸೇರಿ ಏಳು ಕ್ಷೇತ್ರದ‌ ಮೇಲೆ ಜೆಡಿಎಸ್ ಒಲವು ಹೊಂದಿದೆ ಎನ್ನಲಾಗಿದೆ.

ಕುಮಾರಸ್ವಾಮಿ ಅವರು ಇಂದು ರಾತ್ರಿ ಅಥವಾ ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ನಿರೀಕ್ಷೆ ಇದೆ.

2019ರಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 28 ಕ್ಷೇತ್ರಗಳ ಪೈಕಿ 25ರಲ್ಲಿ ಗೆಲುವು ಸಾಧಿಸಿತ್ತು. ಆದರೆ ಈ ಬಾರಿ ಗೆದ್ದೇ ಗೆಲ್ಲುವ 15ರಿಂದ 18 ಕ್ಷೇತ್ರಗಳ ಬಗ್ಗೆ ಮಾತ್ರ ಬಿಜೆಪಿ ಹೆಚ್ಚಿನ ಒತ್ತು ನೀಡಲು ತೀರ್ಮಾನಿಸಿದೆ ಎನ್ನಲಾಗಿದೆ. ಇನ್ನುಳಿದ ಕ್ಷೇತ್ರಗಳನ್ನು ಜೆಡಿಎಸ್​ಗೆ ಬಿಟ್ಟು ಕೊಡುವ ಲೆಕ್ಕಾಚಾರಗಳು ನಡೆದಿವೆ ಎಂದು ಮೂಲಗಳು ಈ ಹಿಂದೆ ತಿಳಿಸಿದ್ದವು.

ಇದನ್ನೂ ಓದಿ: ಕೊಬ್ಬರಿಗೆ ಬೆಂಬಲ ಬೆಲೆ ಆಗ್ರಹಿಸಿ ಜೆಡಿಎಸ್​​ನಿಂದ ಬೃಹತ್ ಪ್ರತಿಭಟನೆ: 120 ಕಿಮೀ ಪಾದಯಾತ್ರೆಗೆ ಕುಮಾರಸ್ವಾಮಿ ಸಿದ್ಧತೆ

ಈ ಮಧ್ಯೆ, ಖುದ್ದು ಕುಮಾರಸ್ವಾಮಿ ಅವರನ್ನೇ ಲೋಕಸಭಾ ಕಣಕ್ಕಿಳಿಸಿ ಕೇಂದ್ರ ಸಚಿವ ಮಾಡುವ ಬಗ್ಗೆ ಬಿಜೆಪಿ ಆಫರ್ ನೀಡಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ, ಈ ಕುರಿತು ಬಿಜೆಪಿ ಆಗಲೀ ಜೆಡಿಎಸ್ ಆಗಲೀ ಈವರೆಗೆ ಅಧಿಕೃತ ಹೇಳಿಕೆ ನೀಡಿಲ್ಲ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:18 am, Wed, 20 December 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು