AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಕಾಸ್​ ನೋಟಿಸ್​ ಬೆನ್ನಲ್ಲೇ ಯತ್ನಾಳ್​ ಬಣ ದೆಹಲಿಗೆ: ಕುತೂಹಲ ಮೂಡಿಸಿದ ಭೇಟಿ

ಕರ್ನಾಟಕ ಬಿಜೆಪಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಬಿವೈ ವಿಜಯೇಂದ್ರ ನಡುವಿನ ಬಿಕ್ಕಟ್ಟು ತೀವ್ರಗೊಂಡಿದೆ. ಯತ್ನಾಳ್ ಅವರು ದೆಹಲಿಗೆ ತೆರಳಿದ್ದು, ಪಕ್ಷದ ಹೈಕಮಾಂಡ್‌ಗೆ ವಕ್ಫ್‌ ಸಂಬಂಧಿತ ವರದಿಯನ್ನು ಸಲ್ಲಿಸುವುದು ಉದ್ದೇಶ ಎನ್ನಲಾಗಿದೆ. ವಿಜಯೇಂದ್ರ ಬಣ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತಿದೆ. ಈ ವಿವಾದದಿಂದಾಗಿ ಪಕ್ಷದ ಒಳಜಗಳ ಮತ್ತಷ್ಟು ತೀವ್ರಗೊಂಡಿದೆ.

ಶೋಕಾಸ್​ ನೋಟಿಸ್​ ಬೆನ್ನಲ್ಲೇ ಯತ್ನಾಳ್​ ಬಣ ದೆಹಲಿಗೆ: ಕುತೂಹಲ ಮೂಡಿಸಿದ ಭೇಟಿ
ಬಸನಗೌಡ ಪಾಟೀಲ್​ ಯತ್ನಾಳ್​ ಬಣ
ವಿವೇಕ ಬಿರಾದಾರ
|

Updated on:Dec 02, 2024 | 12:01 PM

Share

ಬೆಂಗಳೂರು, ಡಿಸೆಂಬರ್​ 02: ಕರ್ನಾಟಕ ಬಿಜೆಪಿಯಲ್ಲಿ (BJP) ಎರಡು ಬಣಗಳಾಗಿವೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರದ್ದು ಒಂದು ಬಣವಾದರೆ, ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಅವರದ್ದೂ ಒಂದು ಬಣವಾಗಿದೆ. ಎರಡೂ ಬಣಗಳ ನಾಯಕರು ಪರಸ್ಪರ ಬಹಿರಂಗವಾಗಿಯೇ ವಾಗ್ದಾಳಿ ಮಾಡುತ್ತಿದ್ದಾರೆ. ಈ ನಡುವೆ ಬಸನಗೌಡ ಪಾಟೀಲ್​ ಯತ್ನಾಳ್​ ಬಣ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

ಬಸನಗೌಡ ಪಾಟೀಲ್​ ಯತ್ನಾಳ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕೆಂದು ಬಿವೈ ವಿಜಯೇಂದ್ರ ಬಣದವರು ಒತ್ತಡ ಹೇರುತ್ತಿದ್ದಾರೆ. ಇತ್ತ ಬಸನಗೌಡ ಪಾಟೀಲ್​ ಯತ್ನಾಳ್​ ಅವರು ಬಿವೈ ವಿಜಯೇಂದ್ರ ಅವರ ಹೊಂದಾಣಿಕೆ ದಾಖಲೆ ಬಿಡುಗಡೆ ಮಾಡಲೇ ಎಂದು ಸವಾಲು ಹಾಕಿದ್ದಾರೆ. ಎರಡೂ ಬಣದ ಕಿತ್ತಾಟ ಹೈಕಮಾಂಡ್​ ಅಂಗಳ ತಲುಪಿದೆ.

ಈಗಾಗಲೆ ಬಿಜೆಪಿ ವರಿಷ್ಠರು ಬನಸಗೌಡ ಪಾಟೀಲ್​ ಯತ್ನಾಳ್​ ಅವರಿಗೆ ಶೋಕಾಸ್​ ನೋಟಿಸ್​​ ನೀಡಿದ್ದಾರೆ. ಶೋಕಾಸ್​ ನೋಟಿಸ್​ ನೀಡುತ್ತಿದ್ದಂತೆ ಬಸನಗೌಡ ಪಾಟೀಲ್​ ಯತ್ನಾಳ್​ ದೆಹಲಿಗೆ ಹಾರಿದ್ದು, ವರಿಷ್ಠರನ್ನು ಭೇಟಿಯಾಗುತ್ತಾರಾ? ಕಾದು ನೋಡಬೇಕಿದೆ. ಯತ್ನಾಳ್​ ಹಿಂದೆ ಹಿಂದೆ ಅವರ ಬಣದ ನಾಯಕರೂ ಕೂಡ ದೆಹಲಿಗೆ ತೆರಳುತ್ತಿದ್ದಾರೆ.

ಇದನ್ನೂ ಓದಿ: ಬಸನಗೌಡ ಪಾಟೀಲ್ ಯತ್ನಾಳ್​ಗೆ ಹೈಕಮಾಂಡ್ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್

ವಕ್ಫ್​ ಸಲ್ಲಿಕೆಗೆ ಮಾತ್ರವೇ ದೆಹಲಿ ಪ್ರವಾಸ

ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಅನುಮತಿ ಇಲ್ಲದೆ ಬಸನಗೌಡ ಪಾಟೀಲ್​ ಯತ್ನಾಳ್​ ಅವರು ವಕ್ಫ್​ ವಿವಾದ ಸಂಬಂಧ ಪ್ರತ್ಯೇಕ ಪ್ರತಿಭಟನೆ ಆರಂಭಿಸಿದೆ. ಯತ್ನಾಳ್​ ಬಣವು ವಕ್ಫ್​ ಮಂಡಳಿ ಆಸ್ತಿ ವಿಚಾರವಾಗಿ ತಮ್ಮದೇಯಾದ ವರದಿ ಸಿದ್ದಪಡಿಸಿದೆ. ಇಂದು (ಡಿ.02) ಮಧ್ಯಾಹ್ನ ಜೆಪಿಸಿ ಮುಂದೆ ವರದಿ ಮಂಡನೆಗೆ ಯತ್ನಾಳ್​ ಬಣ ದೆಹಲಿಗೆ ತೆರಳುತ್ತಿದೆ ಎನ್ನಲಾಗುತ್ತಿದೆ.

ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಸಚಿವರಾದ ಕುಮಾರ್ ಬಂಗಾರಪ್ಪ, ಅರವಿಂದ ಲಿಂಬಾವಳಿ, ಶಾಸಕ ಬಿ.ಪಿ.ಹರೀಶ್, ಮಾಜಿ ಸಂಸದರಾದ ಪ್ರತಾಪ್​ ಸಿಂಹ, ಸಿದ್ದೇಶ್ವರ್ ಗೋವಾದಿಂದ ದೆಹಲಿಗೆ ತೆರಳಲಿದ್ದಾರೆ. ಜೆಪಿಸಿ ಮುಂದೆ, ವಕ್ಫ್​ ಮಂಡಳಿಯನ್ನು ತೆಗೆದು ಹಾಕಬೇಕು, ಅನ್ವರ್ ಮಾಣಿಪ್ಪಾಡಿ ಆಯೋಗದ ವರದಿಯನ್ನು ಜಾರಿ ಮಾಡಬೇಕು, ಕುಮಾರ್ ಬಂಗಾರಪ್ಪ ಸಮಿತಿ ವರದಿಯನ್ನೂ ಜಾರಿಗೊಳಿಸಬೇಕು ಎಂದು ವರದಿಯಲ್ಲಿ ಉಲ್ಲೇಖ ಮಾಡಿದೆ.

ಒಟ್ಟಿನಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಬಣದ ದೆಹಲಿ ಪ್ರವಾಸ ತೀವ್ರ ಕುತೂಹಲ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:24 am, Mon, 2 December 24

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು