AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ಹೇ ಟ್ರೋಲ್ ಮಿನಿಸ್ಟರ್”: ಮೋದಿ ರಾಜ್ಯ ಪ್ರವಾಸದ ಖರ್ಚು ಬಗ್ಗೆ ಪೋಸ್ಟ್​ ಮಾಡಿದ ಪ್ರಿಯಾಂಕ್ ಖರ್ಗೆಗೆ ಬಿಜೆಪಿ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷ ಕರ್ನಾಟಕ ಪ್ರವಾಸ ಕೈಗೊಳ್ಳಲು ಮಾಡಿದ ಖರ್ಚು ವೆಚ್ಚದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿ ಟೀಕಿಸಿದ್ದರು. ಪ್ರಧಾನಿ ಮೋದಿಯವರ ಕರ್ನಾಟಕ ಪ್ರವಾಸಕ್ಕೆ ಸರ್ಕಾರ 18,248 ಲಕ್ಷಗಳನ್ನು ಖರ್ಚು ಮಾಡಿದೆ ಎಂದಿದ್ದರು. ಇದೀಗ ಪ್ರಿಯಾಂಕ್ ಖರ್ಗೆ ಟ್ವೀಟ್​ಗೆ ಬಿಜೆಪಿ ಪ್ರತಿಟ್ವೀಟ್ ಮೂಲಕ ತಿರುಗೇಟು ಕೊಟ್ಟಿದೆ.

ಹೇ ಟ್ರೋಲ್ ಮಿನಿಸ್ಟರ್: ಮೋದಿ ರಾಜ್ಯ ಪ್ರವಾಸದ ಖರ್ಚು ಬಗ್ಗೆ ಪೋಸ್ಟ್​ ಮಾಡಿದ ಪ್ರಿಯಾಂಕ್ ಖರ್ಗೆಗೆ ಬಿಜೆಪಿ ತಿರುಗೇಟು
ಮೋದಿ ರಾಜ್ಯ ಪ್ರವಾಸದ ಖರ್ಚು ಬಗ್ಗೆ ಪೋಸ್ಟ್​ ಮಾಡಿದ ಪ್ರಿಯಾಂಕ್ ಖರ್ಗೆಗೆ ಬಿಜೆಪಿ ತಿರುಗೇಟು
TV9 Web
| Edited By: |

Updated on: Feb 20, 2024 | 3:02 PM

Share

ಬೆಂಗಳೂರು, ಫೆ.20: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಳೆದ ವರ್ಷ ಕರ್ನಾಟಕ ಪ್ರವಾಸ ಕೈಗೊಳ್ಳಲು ಮಾಡಿದ ಖರ್ಚು ವೆಚ್ಚದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಟ್ವೀಟ್ ಮಾಡಿ ಟೀಕಿಸಿದ್ದರು. ಪ್ರಧಾನಿ ಮೋದಿಯವರ ಕರ್ನಾಟಕ ಪ್ರವಾಸಕ್ಕೆ ಸರ್ಕಾರ 18,248 ಲಕ್ಷಗಳನ್ನು ಖರ್ಚು ಮಾಡಿದೆ ಎಂದಿದ್ದರು. ಇದೀಗ ಪ್ರಿಯಾಂಕ್ ಖರ್ಗೆ ಟ್ವೀಟ್​ಗೆ ಬಿಜೆಪಿ (BJP) ಪ್ರತಿಟ್ವೀಟ್ ಮೂಲಕ ತಿರುಗೇಟು ಕೊಟ್ಟಿದೆ.

ಹೇ ಟ್ರೋಲ್ ಮಿನಿಸ್ಟರ್ ಪ್ರಿಯಾಂಕ್ ಖರ್ಗೆ, ಹೆಸರಷ್ಟೇ ಅಲ್ಲ, ನೀವು ಗಾಂಧಿ ಕುಟುಂಬದೊಂದಿಗೆ ಅದೇ ಬುದ್ಧಿಮತ್ತೆಯ ಪ್ರಮಾಣ ಮಟ್ಟವನ್ನು ಸಹ ಹಂಚಿಕೊಳ್ಳುತ್ತೀರಿ. ವಿಷಯವು ನಿಮ್ಮ ತಿಳುವಳಿಕೆಯ ಸಾಮರ್ಥ್ಯವನ್ನು ಮೀರಿದೆಯಾದರೂ ನಾವು ಸರಳಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಶಾಲೆಯ ಮೇಲಿನ ಬರಹ ಬದಲಾಯಿಸಿದಕ್ಕೆ ‘ಪ್ರಬುದ್ಧತೆ’ಯ ಸಮಾಜಾಯಿಷಿ ನೀಡಿದ ಪ್ರಿಯಾಂಕ್ ಖರ್ಗೆ ಅಪ್ರಬುದ್ಧರಂತೆ ಮಾತಾಡಿದರು!

ನೀವು ಕೆಳಗೆ ಉಲ್ಲೇಖಿಸಿರುವ ಮೊತ್ತವನ್ನು ಭಾರತದ ಪ್ರಧಾನಮಂತ್ರಿಯವರು ಸಾರ್ವಜನಿಕ ಕಾರ್ಯಕ್ರಮಗಳಿಗೆ ಹಾಜರಾಗಲು ಪ್ರೋಟೋಕಾಲ್ ಪ್ರಕಾರ ಕಾನೂನುಬದ್ಧವಾಗಿ ಖರ್ಚು ಮಾಡಿದ್ದಾರೆ. ನಿಮ್ಮ ಪಕ್ಷವು ರಾಹುಲ್ ಗಾಂಧಿಯನ್ನು ಮೆಚ್ಚಿಸಲು ಕರ್ನಾಟಕ ರಾಜ್ಯದ ಸಂಪತ್ತಿನಿಂದ ಹಣವನ್ನು ಕಳುಹಿಸುತ್ತಿದೆ ಎಂದು ಬಿಜೆಪಿ ಹೇಳಿದೆ.

ಬಿಜೆಪಿ ಟ್ವೀಟ್

ಪ್ರಿಯಾಂಕ್ ಖರ್ಗೆ ಟ್ವೀಟ್​ನಲ್ಲಿ ಏನಿದೆ?

ಕಳೆದ ವರ್ಷ ಪ್ರಧಾನಿ ಮೋದಿಯವರ ಕರ್ನಾಟಕ ಪ್ರವಾಸಕ್ಕೆ ಸರ್ಕಾರ 18,248 ಲಕ್ಷಗಳನ್ನು ಖರ್ಚು ಮಾಡಿದೆ. ಕರ್ನಾಟಕದಲ್ಲಿ ವಿಶ್ವಗುರುವಿನ ಪ್ರತಿಮೆಯನ್ನು ವೈಭವೀಕರಿಸಲು ಸುಮಾರು 182 ಕೋಟಿ ಖರ್ಚು ಮಾಡಿದ್ದು ಲಾಭಾಂಶವನ್ನು ನೀಡಲಿಲ್ಲ, ಕೇವಲ ಬೊಕ್ಕಸಕ್ಕೆ ನಷ್ಟವಾಗಿದೆ. ಇವು ಜಾಹೀರಾತುಗಳನ್ನು ಒಳಗೊಂಡಿಲ್ಲ ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ