AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಷ ವಿರೋಧಿ ಹೇಳಿಕೆ ಸಹಿಸಲ್ಲ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್

ನೀವು ಮಾತನಾಡುವುದರಿದ್ದರೆ ಪ್ರತಿಪಕ್ಷ ಕಾಂಗ್ರೆಸ್​, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ವಿರುದ್ಧ ಮಾತನಾಡಿ ಎಂದು ಅರುಣ್ ಸಿಂಗ್ ತಾಕೀತು ಮಾಡಿದರು.

ಪಕ್ಷ ವಿರೋಧಿ ಹೇಳಿಕೆ ಸಹಿಸಲ್ಲ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್
ಅರುಣ್ ಸಿಂಗ್
TV9 Web
| Edited By: |

Updated on:Jun 18, 2021 | 7:10 PM

Share

ಬೆಂಗಳೂರು: ಯಾವುದೇ ಕಾರಣಕ್ಕೂ ಪಕ್ಷ ವಿರೋಧಿ ಹೇಳಿಕೆ ಸಹಿಸಲ್ಲ ಎಂದು ಬಿಜೆಪಿ ಕೇಂದ್ರ ಸಮಿತಿಯ ಕರ್ನಾಟಕ ಉಸ್ತುವಾರಿ ಅರುಣ್​ ಸಿಂಗ್ ಹೇಳಿದರು. ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಕ್ಷದ ವಿರುದ್ಧ ಮಾತನಾಡಿದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ನೀವು ಮಾತನಾಡುವುದರಿದ್ದರೆ ಪ್ರತಿಪಕ್ಷ ಕಾಂಗ್ರೆಸ್​, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ವಿರುದ್ಧ ಮಾತನಾಡಿ. ಅದು ಬಿಟ್ಟು ಪಕ್ಷದ ವಿರುದ್ಧ ಮಾತನಾಡಿದರೆ ಶಿಸ್ತುಕ್ರಮ ಜರುಗಿಸಲಾಗುವ ಎಚ್ಚರಿಕೆ ನೀಡಿದ್ದೇನೆ ಎಂದು ಅರುಣ್ ಸಿಂಗ್ ಮಾಹಿತಿ ನೀಡಿದರು.

ಕರ್ನಾಟಕದ ನಾಯಕರು ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾತನಾಡಬೇಕು. ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ಇಬ್ಬರು, ಮೂವರು ಮಾತನಾಡಿದರು ಎಂದು ನೀವೂ ಮಾತನಾಡಬೇಡಿ. ಪಕ್ಷ ಮತ್ತು ನಾಯಕತ್ವದ ಬಗ್ಗೆ ಯಾರೊಬ್ಬರೂ ಮಾತನಾಡಬಾರದು. ನೀವು ನೀಡುವ ಬಹಿರಂಗ ಹೇಳಿಕೆಗಳಿಂದ ನಮಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ನೋವಾಗುತ್ತದೆ ಎಂದು ನುಡಿದರು.

ಪಕ್ಷ ಮತ್ತು ಮುಖ್ಯಮಂತ್ರಿ ಸಿಎಂ ವಿರುದ್ಧ ಮಾತನಾಡಿದವರ ವಿರುದ್ಧ ಶಿಸ್ತುಕ್ರಮ ಜರುಗಿಸುವ ಬಗ್ಗೆ ಕೋರ್‌ ಕಮಿಟಿ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು ಎಂದು ಮೂಲಗಳು ಹೇಳಿವೆ. ಎರಡು ದಿನಗಳಲ್ಲಿ ಶಿಸ್ತುಕ್ರಮ ಕೈಗೊಳ್ಳುವ ಬಗ್ಗೆ ಅರುಣ್​ಸಿಂಗ್ ಭರವಸೆ ನೀಡಿದರು. ಬಿಜೆಪಿ ಕೋರ್ ಕಮಿಟಿ ಸಭೆ ಮುಗಿಸಿ ಹೊರ ನಡೆಯುವಾಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಕ್ಟರಿ ಸಿಂಬಲ್ ಪ್ರದರ್ಶಿಸಿದರು.

ಮೂರು ದಿನಗಳ ರಾಜ್ಯ ಪ್ರವಾಸ ಮುಗಿಸಿ ಬಿಜೆಪಿ ಕಚೇರಿಯಿಂದ ವಿಮಾನ ನಿಲ್ದಾಣದತ್ತ ಅರುಣ್ ಸಿಂಗ್ ತೆರಳಿದರು. ಅಲ್ಲಿಂದ ದೆಹಲಿಗೆ ಸಿಂಗ್ ಹೋಗುತ್ತಾರೆ.

(BJP Karnataka In Charge Arun Singh Talks About Political Development in State)

ಇದನ್ನೂ ಓದಿ: ಸಿಎಂ ಯಡಿಯೂರಪ್ಪ ನಾಯಕತ್ವದಲ್ಲಿ ಬದಲಾವಣೆ ಇಲ್ಲ; ಬಿಜೆಪಿ ಕೋರ್ ಕಮಿಟಿ ಸಭೆಯ ನಂತರ ಸ್ಪಷ್ಟಪಡಿಸಿದ ಸಚಿವ ಆರ್ ಅಶೋಕ್

ಇದನ್ನೂ ಓದಿ: ಸಚಿವ ಸಂಪುಟ ಪುನಾರಚನೆಗೆ ಬಿಜೆಪಿ ಶಾಸಕರಿಂದ ಒತ್ತಡ.. ರಾಜ್ಯ ಬಿಜೆಪಿ ಕಚೇರಿಯಲ್ಲಿ ಅರುಣ್ ಸಿಂಗ್ ಸಭೆ

Published On - 7:09 pm, Fri, 18 June 21

Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ