Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಪುಡಿರೌಡಿಗಿಂತ ಕಡಿಮೆ‌ ಇಲ್ಲ ಸಚಿವ ಡಿ.ಸುಧಾಕರ್ ಗೂಂಡಾವರ್ತನೆ: ಬಿಜೆಪಿ ಟ್ವೀಟ್

ಭೂಕಬಳಿಕೆ, ಹಲ್ಲೆ, ಜಾತಿ ನಿಂದನೆ ಆರೋದ ಅಡಿಯಲ್ಲಿ ಯೋಜನೆ ಹಾಗೂ ಸಾಂಖ್ಯಿಕ ಸಚಿವ ಡಿ.ಸುಧಾಕರ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಈ ಬಗ್ಗೆ ಬಿಜೆಪಿ ಟ್ವೀಟ್ ಮಾಡಿದ ಬಿಜೆಪಿ, ಸುಧಾರಕರ್ ವಿರುದ್ಧ ಮಾತ್ರವಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ಆಕ್ರೋಶ ಹೊರಹಾಕಿದೆ. ಯಾವ ಪುಡಿರೌಡಿಗಿಂತ ಕಡಿಮೆ‌ ಇಲ್ಲ ಡಿ.ಸುಧಾಕರ್ ಗೂಂಡಾವರ್ತನೆ ಎಂದು ಹೇಳಿದ ಬಿಜೆಪಿ, ಸಿದ್ದರಾಮಯ್ಯಗೆ ದಲಿತರನ್ನು ಮೂಲೆಗುಂಪು ಮಾಡುವುದು ಕರಗತವಾಗಿದೆ ಎಂದು ಹೇಳಿದೆ.

ಯಾವ ಪುಡಿರೌಡಿಗಿಂತ ಕಡಿಮೆ‌ ಇಲ್ಲ ಸಚಿವ ಡಿ.ಸುಧಾಕರ್ ಗೂಂಡಾವರ್ತನೆ: ಬಿಜೆಪಿ ಟ್ವೀಟ್
ಸಚಿವ ಡಿ.ಸುಧಾಕರ್ ವಿರುದ್ಧ ಬಿಜೆಪಿ ವಾಗ್ದಾಳಿ
Follow us
TV9 Web
| Updated By: Rakesh Nayak Manchi

Updated on: Sep 12, 2023 | 2:39 PM

ಬೆಂಗಳೂರು, ಸೆ.12: ಭೂಕಬಳಿಕೆ, ಹಲ್ಲೆ, ಜಾತಿ ನಿಂದನೆ ಆರೋದ ಅಡಿಯಲ್ಲಿ ಯೋಜನೆ ಹಾಗೂ ಸಾಂಖ್ಯಿಕ ಸಚಿವ ಡಿ.ಸುಧಾಕರ್ (D.Sudhakar) ವಿರುದ್ಧ ಎಫ್​ಐಆರ್ ದಾಖಲಾಗಿದೆ. ಈ ಬಗ್ಗೆ ಬಿಜೆಪಿ ಟ್ವೀಟ್ ಮಾಡಿದ ಬಿಜೆಪಿ (BJP), ಸುಧಾರಕರ್ ವಿರುದ್ಧ ಮಾತ್ರವಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧವೂ ಆಕ್ರೋಶ ಹೊರಹಾಕಿದೆ. ಯಾವ ಪುಡಿರೌಡಿಗಿಂತ ಕಡಿಮೆ‌ ಇಲ್ಲ ಡಿ.ಸುಧಾಕರ್ ಗೂಂಡಾವರ್ತನೆ ಎಂದು ಹೇಳಿದ ಬಿಜೆಪಿ, ಸಿದ್ದರಾಮಯ್ಯಗೆ ದಲಿತರನ್ನು ಮೂಲೆಗುಂಪು ಮಾಡುವುದು ಕರಗತವಾಗಿದೆ ಎಂದು ಹೇಳಿದೆ.

“ಯಾವ ಪುಡಿ ರೌಡಿಗಿಂತಲೂ ಕಡಿಮೆ‌ ಇಲ್ಲ ಸಚಿವ ಡಿ. ಸುಧಾಕರ್ ಅವರ ಗೂಂಡಾವರ್ತನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಜಾತಿ ನಿಂದಕರು, ಗೂಂಡಾಗಳೇ ತುಂಬಿ ತುಳುಕುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ದಲಿತರನ್ನು ಮೂಲೆಗುಂಪು ಮಾಡುವುದು ಕರಗತವಾದರೆ, ಸಚಿವ ಡಿ. ಸುಧಾಕರ್ ಅವರಿಗೆ ದಲಿತರನ್ನು ಅವಮಾನಿಸಿ ಗೂಂಡಾಗಿರಿ ಮಾಡುವ ಅಹಂ ಸಿದ್ಧಿಸಿದೆ” ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಸಚಿವ ಡಿ.ಸುಧಾಕರ್​ ವಿರುದ್ಧ ಎಫ್​ಐಆರ್: ಮಹಿಳೆ ಜತೆ ಗಲಾಟೆ, ಏನಿದು ಪ್ರಕರಣ? ಇಲ್ಲಿದೆ ಡಿಟೇಲ್ಸ್

ಅಲ್ಲದೆ, ಕರ್ನಾಟಕ ಕಾಂಗ್ರೆಸ್ ಸರ್ಕಾರ ಈ ಕೂಡಲೇ ದಲಿತ ವಿರೋಧಿ ಗೂಂಡಾ ಸಚಿವರನ್ನು ಬಂಧಿಸಿ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ಟ್ವೀಟ್ ಮೂಲಕ ಆಗ್ರಹಿಸಿದೆ.

ಜಮೀನು ವ್ಯವಹಾರದ ವೇಳೆ ಸಚಿವ ಡಿ.ಸುಧಾಕರ್​ ಬ್ರಾಹ್ಮಣರ ಬಗ್ಗೆ ಮಾತಾಡಿರುವ ವಿಡಿಯೋ ವೈರಲ್​ ಆಗಿದೆ. ಯಲಹಂಕ ಸರ್ವೆ ನಂಬರ್ 108/1 ಜಮೀನು ವ್ಯವಹಾರದಲ್ಲಿ ಬ್ರಾಹ್ಮಣರ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ.

… (ಅವಾಚ್ಯ ಪದ) ಮಕ್ಕಳು ಬ್ರಾಹ್ಮಣರಿಗೆ ಯಾಕೆ ಎದುರುತ್ತೇವೆ ಗೊತ್ತಾ ನಾವು? ನೀನು ಹಗ್ಗದಲ್ಲಿ ಕಟ್ಟಿಹಾಕು, ಚೈನಲ್ಲಿ ಕಟ್ಟಿ ಹಾಕು. ಆ … (ಅವಾಚ್ಯ ಪದ) ಮಕ್ಕಳು ಜನಿವಾರದಲ್ಲಿ ನೇಣು ಹಾಕಿಬಿಡುತ್ತಾರೆ. ನಾನು ನಿನ್ನ ಹತ್ತಿರ ಮಾತಾಡುವುದಿಲ್ಲ ಕಣಯ್ಯ ಎಂದು ಹೇಳುವುದನ್ನು ವಿಡಿಯೋದಲ್ಲಿ ನೋಡಬಹುದು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
‘ಗ್ಲೋಬಲ್ ಕನ್ನಡಿ’ಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
‘ಗ್ಲೋಬಲ್ ಕನ್ನಡಿ’ಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು