AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹಿಂದ ನಾಯಕನೆಂದು ಅಧಿಕಾರಕ್ಕೆ ಬಂದಮೇಲೆ ದಲಿತರ ಪರ ಕೆಲಸ ಮಾಡುವುದು ಕರ್ತವ್ಯ: ಬಿಜೆಪಿ ಟ್ವೀಟ್

ದಲಿತರ ಅಭಿವೃದ್ಧಿಗೆ ಹಣ ನೀಡಿದ್ದೇನೆ ಎನ್ನುತ್ತಾರೆ. ಆಂತರ್ಯದಲ್ಲಿ ದಲಿತ ನಾಯಕರನ್ನ ತುಳಿದು ಅಧಿಕಾರಕ್ಕೇರ್ತಾರೆ. ಮಾಜಿ ಸಿಎಂ ಸಿದ್ದರಾಮಯ್ಯರದ್ದು ಬಣ್ಣದ ತಗಡಿನ ತುತ್ತೂರಿ ಎಂದು ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.

ಅಹಿಂದ ನಾಯಕನೆಂದು ಅಧಿಕಾರಕ್ಕೆ ಬಂದಮೇಲೆ ದಲಿತರ ಪರ ಕೆಲಸ ಮಾಡುವುದು ಕರ್ತವ್ಯ: ಬಿಜೆಪಿ ಟ್ವೀಟ್
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on:Nov 04, 2021 | 3:11 PM

Share

ಬೆಂಗಳೂರು: ಅಹಿಂದ ನಾಯಕನೆಂದು ಅಧಿಕಾರಕ್ಕೆ ಬಂದ ಮೇಲೆ ದಲಿತರ ಪರ ಕೆಲಸ ಮಾಡುವುದು ನಿಮ್ಮ ಕರ್ತವ್ಯ. ಅದರಲ್ಲಿ ನೀವು ಹೆಚ್ಚುಗಾರಿಕೆ ಮೆರೆಯುವ ಅಗತ್ಯವಿಲ್ಲ. ನಾನೇ ಮಾಡಿದ್ದು ಎಂದು ಬೀಗುವಾಗ 10 ಬಾರಿ ಯೋಚಿಸಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ. ಟ್ವೀಟ್ ಮೂಲಕ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯಗೆ ಬಿಜೆಪಿ ಟಾಂಗ್ ನೀಡಿದೆ. ಸಿದ್ದರಾಮಯ್ಯನವರೇ ಎಷ್ಟು ಬಾರಿ ಹಳೇ ಕತೆ ಹೇಳುತ್ತೀರಿ? ಜನ ಹೊಸದನ್ನು ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ದಲಿತರನ್ನು ಸಿಎಂ ಮಾಡುವೆ. ನಾನೇ ಮುಂದೆ ನಿಂತು ದಲಿತರನ್ನು ಸಿಎಂ ಮಾಡುತ್ತೇನೆ ಅನ್ನಿ. ಆಗ ನಿಮ್ಮ ದಲಿತ ಪ್ರೇಮ ಒಪ್ಪಿಕೊಳ್ಳೋಣ ಎಂದು ಬಿಜೆಪಿ ಟ್ವೀಟ್ ಮಾಡಿದೆ. ಸಿದ್ದರಾಮಯ್ಯಗೆ ದಲಿತರು ಅಂದ್ರೆ ಕೇವಲ ವೋಟ್‌ ಬ್ಯಾಂಕ್. ಹೀಗಾಗಿಯೇ ದಲಿತರ ಅಭಿವೃದ್ಧಿಗೆ ಹಣ ನೀಡಿದ್ದೇನೆ ಎನ್ನುತ್ತಾರೆ. ಆಂತರ್ಯದಲ್ಲಿ ದಲಿತ ನಾಯಕರನ್ನ ತುಳಿದು ಅಧಿಕಾರಕ್ಕೇರ್ತಾರೆ. ಮಾಜಿ ಸಿಎಂ ಸಿದ್ದರಾಮಯ್ಯರದ್ದು ಬಣ್ಣದ ತಗಡಿನ ತುತ್ತೂರಿ ಎಂದು ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.

ಸಿದ್ದರಾಮಯ್ಯನವರೇ ದಲಿತ ಪರ ಕಾಳಜಿ ಮೆರೆದಿದ್ದೀರಲ್ಲವೇ? ಹಾಗಾದ್ರೆ ದಲಿತ ನಾಯಕ ಪರಮೇಶ್ವರ್‌ರನ್ನ ಸೋಲಿಸಿದ್ಯಾರು? ಸಿಎಂ ಆಗುವುದಕ್ಕೆ ಅಡ್ಡಿಯಾಗ್ತಾರೆಂದು ನೀವೇ ಸೋಲಿಸಿಲ್ಲವೇ? ಸತ್ಯದರ್ಶನ ಮಾಡಿಸುವಿರಾ ಸಿದ್ದರಾಮಯ್ಯನವರೇ? ನೀವು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದು ಹೊಟ್ಟೆಪಾಡಿಗಾಗಿಯೇ? ಖರ್ಗೆರನ್ನು ದೆಹಲಿಗೆ ಸಾಗಹಾಕಿದ್ದು ಹೊಟ್ಟೆಪಾಡಿಗಾಗಿಯೇ? ಎಂದು ರಾಜ್ಯ ಬಿಜೆಪಿ ಘಟಕ ಪ್ರಶ್ನೆ ಮಾಡಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಆ ರೀತಿ ಮಾತನಾಡಲು ಸಾಧ್ಯವೇ ಇಲ್ಲ: ದಲಿತ ವಿರೋಧಿ ಹೇಳಿಕೆ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಇದನ್ನೂ ಓದಿ: ಉಪಚುನಾವಣೆ ಫಲಿತಾಂಶದ ಪರಿಣಾಮವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡಿದ್ದಾರೆ: ಡಿಕೆ ಶಿವಕುಮಾರ್

Published On - 3:06 pm, Thu, 4 November 21

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ