AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್‌ ಬಹಿಷ್ಕಾರ ಇತಿಹಾಸದಲ್ಲೇ ಮೊದಲಲ್ಲ, 2021ರ ಸಿದ್ದು ವಾಕ್​ ಔಟ್ ಇತಿಹಾಸ ಬಿಚ್ಚಿಟ್ಟ ಅಶೋಕ್!

2024-25ನೇ ಸಾಲಿನ ರಾಜ್ಯ ಬಜೆಟ್‌ನ್ನು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್​ ಬಹಿಷ್ಕರಿಸಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ ಈ ರೀತಿ ಬಜೆಟ್‌ ಮಂಡನೆಯನ್ನೇ ಬಹಿಷ್ಕರಿಸಿರುವುದು ಇತಿಹಾಸದಲ್ಲೇ ಮೊದಲು ಎಂದು ಗುಡುಗಿದ್ದ ಸಿದ್ದರಾಮಯ್ಯನವರ 2021ರ ಇತಿಹಾಸ ಬಿಚ್ಚಿಟ್ಟು ವಿರೋಧ ಪಕ್ಷದ ನಾಯಕ,

ಬಜೆಟ್‌ ಬಹಿಷ್ಕಾರ ಇತಿಹಾಸದಲ್ಲೇ ಮೊದಲಲ್ಲ, 2021ರ ಸಿದ್ದು ವಾಕ್​ ಔಟ್ ಇತಿಹಾಸ ಬಿಚ್ಚಿಟ್ಟ ಅಶೋಕ್!
2021ರ ಬಜೆಟ್​ ವೇಳೆ ಸಿದ್ದರಾಮಯ್ಯ ವಾಕ್​ ಔಟ್
TV9 Web
| Edited By: |

Updated on: Feb 16, 2024 | 9:45 PM

Share

ಬೆಂಗಳೂರು, (ಫೆಬ್ರವರಿ 16): ಸಿಎಂ ಸಿದ್ದರಾಮಯ್ಯ (Siddaramaiah) ಅವರು ಇಂದು(ಫೆ.16) ಮಂಡಿಸಿದ 2024-25ನೇ ಸಾಲಿನ ಬಜೆಟ್‌ನ್ನು(Karnataka Budget 2024) ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್​ ಬಹಿಷ್ಕರಿಸಿವೆ. ಸಿದ್ದರಾಮಯ್ಯ ಅವರು ಭಾಷಣ ಆರಂಭ ಮಾಡುತ್ತಲೇ ʻಏನಿಲ್ಲ.. ಏನಿಲ್ಲ.. ಬಜೆಟ್‌ನಲ್ಲಿ ಏನಿಲ್ಲʼಎಂದು ಗೇಲಿ ಮಾಡುತ್ತಾ ಬಿಜೆಪಿ ಶಾಸಕರು ಹೊರನಡೆದಿದ್ದರು. ಈ ರೀತಿ ಬಜೆಟ್‌ ಮಂಡನೆಯನ್ನೇ ಬಹಿಷ್ಕರಿಸಿರುವುದು ಇತಿಹಾಸದಲ್ಲೇ ಮೊದಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಕ್ಷಗಳ ಮೇಲೆ ಹರಿಹಾಯ್ದಿದ್ದಾರೆ. ಆದ್ರೆ, ಇದಕ್ಕೆ ಬಿಜೆಪಿ ತಿರುಗೇಟು ನೀಡಿದ್ದು,ಬಜೆಟ್​ ಬಹಿಷ್ಕಾರ ಮಾಡಿರುವುದು ಇದು ಇತಿಹಾಸದಲ್ಲಿ ಮೊದಲೇನಲ್ಲ. ಈ ಹಿಂದೆ ಸಿದ್ದರಾಮಯ್ಯನವರೇ ಬಜೆಟ್‌ ಬಹಿಷ್ಕಾರದ ಮೂಲಕ ಇತಿಹಾಸ ಬರೆದಿದ್ದರು ಎಂದು ವಿಪಕ್ಷ ನಾಯಕ ಆರ್ ಅಶೋಕ್ ತಿರುಗೇಟು ನೀಡಿದ್ದಾರೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಆರ್‌. ಅಶೋಕ್‌ (R Ashok) ಅವರು ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಒಂದು ಪೋಸ್ಟ್‌ ಹಾಕಿ, 2021ರ ಬಜೆಟನ್ನು ಆಗ ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬಹಿಷ್ಕಾರ ಹಾಕಿದ್ದನ್ನು ನೆನಪಿಸಿದ್ದಾರೆ.

ಇದನ್ನೂ ಓದಿ: ಬಜೆಟ್​ ಮಂಡನೆ ಬಳಿಕ ಬಿಜೆಪಿ ನಾಯಕರಿಗೆ ಹಿಗ್ಗಾಮುಗ್ಗಾ ಜಾಡಿಸಿದ ಸಿದ್ದರಾಮಯ್ಯ

ಬಜೆಟ್ ಭಾಷಣ ಬಹಿಷ್ಕಾರ ಮಾಡಿದ ಘಟನೆ ನಾನು ಇತಿಹಾಸದಲ್ಲೇ ನೋಡಿಲ್ಲ, ಇದು ಸಂವಿಧಾನಕ್ಕೆ ಮಾಡಿದ ಅಪಮಾನ ಅಂತ ಬುರುಡೆ ಬಿಡುವ ಮೊದಲ ತಮ್ಮ ಹಾಗೂ ತಮ್ಮ ಕಾಂಗ್ರೆಸ್‌ ಕ್ಷದ ಇತಿಹಾಸ ಒಮ್ಮೆ ತೆಗೆದು ನೋಡಿ ಸಿಎಂ ಸಿದ್ದರಾಮಯ್ಯ ಅವರೇ. 2021ರಲ್ಲಿ ಅಂದಿನ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಬಜೆಟ್ ಭಾಷಣವನ್ನು ಬಹಿಷ್ಕಾರ ಮಾಡಿ ಸದನದಿಂದ ವಾಕ್ ಔಟ್ ಮಾಡುವ ಮೂಲಕ ಯಡಿಯೂರಪ್ಪನವರಂತಹ ಮುತ್ಸದ್ದಿ , ಹಿರಿಯ ಜನ ನಾಯಕರಿಗೆ ಅವಮಾನ ಮಾಡುವಾಗ ತಮ್ಮ ಈ ಉಪದೇಶ ತಮಗೆ ನೆನಪಿರಲಿಲ್ಲವೆ? ತಾವು ಮಹಾ ಸಾಚಾ ಎನ್ನುವಂತೆ ಮಾಧ್ಯಮಗಳ ಮುಂದೆ ನಾಟಕ ಆಡುವುದರಿಂದ ಏನೂ ಪ್ರಯೋಜನವಿಲ್ಲ. ತಮ್ಮ ಆಷಾಢಭೂತಿತನ, ಎರಡು ನಾಲಿಗೆ ಬಗ್ಗೆ ಎಲ್ಲರಿಗೂ ತಿಳಿದಿದೆ ಎಂದು ತಿರುಗೇಟು ನೀಡಿದ್ದಾರೆ.

2021ರಲ್ಲಿ ಬಿಎಸ್‌ ಯಡಿಯೂರಪ್ಪ ಅವರು ಬಜೆಟ್‌ ಮಂಡನೆ ಮಾಡಿದಾಗ ಸಿದ್ದರಾಮಯ್ಯ ಅವರು ಈ ಸರ್ಕಾರಕ್ಕೆ ನೈತಿಕ ಮೌಲ್ಯಗಳಿಲ್ಲ. ಹೀಗಾಗಿ ಬಜೆಟ್‌ ಮಂಡನೆಗೆ ಅರ್ಹತೆ ಇಲ್ಲ ಎಂದು ಹೇಳಿ ಭಾಷಣದ ಆರಂಭದಲ್ಲೇ ಸಭಾತ್ಯಾಗ ಮಾಡಿದ್ದಕ್ಕೆ ಸಂಬಂಧಿಸಿ ಅಂದು ಪ್ರಕಟವಾಗಿದ್ದ ಮಾಧ್ಯಮಗಳ ವರದಿಗಳು ಮತ್ತು ವಾಹಿನಿಗಳ ವರದಿಗಳನ್ನು ಟ್ಯಾಗ್‌ ಮಾಡಿದ್ದಾರೆ.

ಬಿಜೆಪಿ ಸಭಾತ್ಯಾಗದ ಬಗ್ಗೆ ಸಿಎಂ ಹೇಳಿದ್ದೇನು?

ಬಿಜೆಪಿಗೆ ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ. ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ವಿಧಾನಸಭೆಯಲ್ಲಿ ಬಜೆಟ್ ಮಂಡಿಸುವಾಗ ವಾಕ್ ಔಟ್ ಮಾಡಿದ ನಿದರ್ಶನ ಇಲ್ಲ. ಬಜೆಟ್ ಓದಲು ಪ್ರಾರಂಭ ಮಾಡಿದ ಕೂಡಲೇ ಸುನೀಲ್ ಕುಮಾರ್ ಅವರು ಏನಿಲ್ಲ ಏನಿಲ್ಲ ಎಂದು ಘೋಷಣೆ ಕೂಗುತ್ತಿದ್ದರು. ಬಿಜೆಪಿಗೆ ಸಂಸದೀಯ, ಪ್ರಜಾಪ್ರಭುತ್ವ ಹಾಗೂ ಸಂವಿಧಾನಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ. ಅವರ ತಲೆ ತುಂಬ ರಾಜಕೀಯ ಮಂಜು ತುಂಬಿದೆ. ಕಾಮಾಲೆ ರೋಗಿಗಳಿಗೆ ಕಂಡಿದ್ದೆಲ್ಲ ಹಳದಿಯಂತೆ ಆಗಿದೆ. ರಾಜಕೀಯ ಹೇಳಿಕೆ ಬೇಡ ಎನ್ನುವುದಿಲ್ಲ. ಆದರೆ ಟೀಕೆಗಳು ಆರೋಗ್ಯಕರವಾಗಿರಬೇಕು. ಟೀಕೆ ಮಾಡುವ ಸಲುವಾಗಿಯೇ ಟೀಕೆ ಮಾಡುತ್ತಾರೆ. ಪ್ಲೇಕಾರ್ಡ್ ಹಿಡಿದಿದ್ದರು. ಬಜೆಟ್ ಕೇಳಬಾರದು ಎಂದು ಯೋಚಿಸಿಕೊಂಡೇ ಬಂದಿದ್ದರು. ನಾನು ವಸ್ತುಸ್ಥಿತಿಯನ್ನು ಹೇಳಿದರೆ ಅವರಿಗೆ ಅದು ನುಂಗಲಾರದ ತುತ್ತು. ಸತ್ಯ ಹೇಳಿದರೆ ತಡೆದುಕೊಳ್ಳಲು ಆಗುವುದಿಲ್ಲ ಎಂದು ಸಿದ್ದರಾಮಯ್ಯ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ