AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರ-ಕನ್ಯಾಕುಮಾರಿವರೆಗಿನ ದರೋಡೆಕೋರರು ಒಟ್ಟಿಗೆ ಸೇರುತ್ತಿದ್ದಾರೆ: ವಿಪಕ್ಷಗಳ ಸಭೆಗೆ ಯತ್ನಾಳ್ ಕಿಡಿ

ಬೆಂಗಳೂರಿನಲ್ಲಿ ನಡೆಯಲಿರುವ ವಿಪಕ್ಷಗಳ ಮಹಾ ಮೈತ್ರಿಕೂಟದ ಸಭೆ ಬಗ್ಗೆ ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್​ ವಾಗ್ದಾಳಿ ನಡೆಸಿದ್ದಾರೆ.

ಕಾಶ್ಮೀರ-ಕನ್ಯಾಕುಮಾರಿವರೆಗಿನ ದರೋಡೆಕೋರರು ಒಟ್ಟಿಗೆ ಸೇರುತ್ತಿದ್ದಾರೆ: ವಿಪಕ್ಷಗಳ ಸಭೆಗೆ ಯತ್ನಾಳ್ ಕಿಡಿ
ಬಸನಗೌಡ ಪಾಟೀಲ್ ಯತ್ನಾಳ್
Anil Kalkere
| Edited By: |

Updated on: Jul 17, 2023 | 12:07 PM

Share

ಬೆಂಗಳೂರು, (ಜುಲೈ 17): ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Loksabha Elections 2024) ನರೇಂದ್ರ ಮೋದಿ(Narendra Modi) ಅವರನ್ನು ಕಟ್ಟಿಹಾಕಲು ದೇಶದ ವಿಪಕ್ಷಗಳು(joint opposition meeting) ಒಂದಾಗಿದ್ದು, ರಾಜಕೀಯ ಲೆಕ್ಕಾಚಾರಗಳ ಬಗ್ಗೆ ಚರ್ಚಿಸಲು ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನ ಸಭೆ ನಡೆಸಲಿವೆ. ಇನ್ನು ಈ ವಿರೋಧ ಪಕ್ಷಗಳ ಜಂಟಿ ಸಭೆಗೆ ಬಿಜೆಪಿ ನಾಯಕರು ಟೀಕಾ ಪ್ರಹಾರ ನಡೆಸಿದ್ದಾರೆ. ಅದರಲ್ಲೂ ಮುಖ್ಯವಾಗಿ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal), ವಿಪಕ್ಷಗಳ ಸಭೆಯನ್ನು ಕಟುವಾಗಿ ಟೀಕಿಸಿದ್ದಾರೆ. ಕಾಶ್ಮೀರ-ಕನ್ಯಾಕುಮಾರಿವರೆಗಿನ ದರೋಡೆಕೋರರು ಒಟ್ಟಿಗೆ ಸೇರುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಮಹಾಘಟಬಂಧನ್​ನಿಂದ ಜೆಡಿಎಸ್​ನ್ನು ದೂರವಿಟ್ಟ ವಿಪಕ್ಷಗಳು: ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಿಷ್ಟು

ಬೆಂಗಳೂರಿನಲ್ಲಿ ಇಂದು(ಜುಲೈ 17) ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಕಾಶ್ಮೀರ-ಕನ್ಯಾಕುಮಾರಿವರೆಗಿನ ದರೋಡೆಕೋರರು ಒಟ್ಟಿಗೆ ಸೇರುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮೋದಿಯವರನ್ನು ಸೋಲಿಸಲು ಒಗ್ಗೂಡುತ್ತಿದ್ದಾರೆ. ರಾಜ್ಯದಲ್ಲಿ ಜಾಮೀನು ಮೇಲೆ ಇರುವ ಎಲ್ಲಾ ಕುಟುಂಬಗಳು ಒಟ್ಟಿಗೆ ಸೇರಿವೆ. ಮತ್ತೆ ನರೇಂದ್ರ ಮೋದಿ ಬಂದ್ರೆ ಜೈಲೇ ಗತಿ ಎಂಬುವುದು ಗೊತ್ತಾಗಿದೆ. ಹಾಗಾಗಿ ಎಲ್ಲಾ ದರೋಡೆಕೋರರು ಒಟ್ಟಿಗೆ ಸೇರುತ್ತಿದ್ದಾರೆ ಎಂದು ಕಿಡಿಕಾರಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದು ಎರಡು ತಿಂಗಳಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಬರಗಾಲದ ಛಾಯೆ ಎದುರಾಗಿದೆ. ರೈತರ ಆತ್ಮಹತ್ಯೆ ಹೆಚ್ಚಿದೆ, ಆತಂಕದ ಛಾಯೆ ಹೆಚ್ಚಾಗಿದೆ. ಹಿಂದೂ ಕಾರ್ಯಕರ್ತರ ಜೋಡಿ ಕೊಲೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!