AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​​ ಸರ್ಕಾರದ ಬಣ್ಣ ಬಯಲಾಗಿದೆ; ಬರ ಪೀಡಿತ ತಾಲೂಕುಗಳ ಘೋಷಣೆ ಮಾಡದ್ದಕ್ಕೆ ಬಸವರಾಜ ಬೊಮ್ಮಾಯಿ ವಾಗ್ದಾಳಿ

ಸರ್ಕಾರ ತನ್ನ ಕೆಲಸ ಮಾಡದೆ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ. ಸರ್ಕಾರದ ಗೃಹಲಕ್ಷ್ಮೀ ಯೋಜನೆ ಕೆಲವು ಮಹಿಳೆಯರಿಗೆ ಮಾತ್ರ ಸಿಕ್ಕಿದೆ. ರಾಜ್ಯದಲ್ಲಿ ಲೋಡ್​ ಶೆಡ್ಡಿಂಗ್ ಮಾಡಲು ಆರಂಭವಾಗಿದೆ. ಸರ್ಕಾರದ ವಿರುದ್ಧ ಹೋರಾಟ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಾಂಗ್ರೆಸ್​​ ಸರ್ಕಾರದ ಬಣ್ಣ ಬಯಲಾಗಿದೆ; ಬರ ಪೀಡಿತ ತಾಲೂಕುಗಳ ಘೋಷಣೆ ಮಾಡದ್ದಕ್ಕೆ ಬಸವರಾಜ ಬೊಮ್ಮಾಯಿ ವಾಗ್ದಾಳಿ
ಬಸವರಾಜ ಬೊಮ್ಮಾಯಿ
ಶಿವಕುಮಾರ್ ಪತ್ತಾರ್
| Edited By: |

Updated on: Sep 11, 2023 | 9:45 PM

Share

ಹುಬ್ಬಳ್ಳಿ, ಸೆಪ್ಟೆಂಬರ್ 11: ಇಷ್ಟೊತ್ತಿಗಾಗಲೇ ರಾಜ್ಯದಲ್ಲಿ ಬರ ಪೀಡಿತ ತಾಲೂಕುಗಳ ಘೋಷಣೆ ಆಗಬೇಕಿತ್ತು. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ (Congress Government) ನೆಪ ಹೇಳುತ್ತಾ ಮುಂದೂಡಿಕೆ ಮಾಡುತ್ತಿದೆ. ಕಾಂಗ್ರೆಸ್​​ ಸರ್ಕಾರದ ಬಣ್ಣ ಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆಯ ನಂತರ ಮಾತನಾಡಿದ ಅವರು, ಬರ ಪೀಡಿತ ತಾಲೂಕುಗಳ ಬಗ್ಗೆ ಜೂನ್‌ನಲ್ಲಿ ಕೇಳಿದ್ರೆ ಜುಲೈನಲ್ಲಿ ಘೋಷಣೆ ಮಾಡುತ್ತೇವೆ ಅಂತಾರೆ. ಜುಲೈನಲ್ಲಿ ಕೇಳಿದ್ರೆ ಆಗಸ್ಟ್​ ಅಂತಾರೆ. ಆಗಸ್ಟ್​ ಮುಗಿದು ಸೆಪ್ಟೆಂಬರ್​​​ ಬಂದರೂ ಬರ ಘೋಷಣೆ ಮಾಡುತ್ತಿಲ್ಲ. ಎಲ್ಲಾ ವಿಚಾರಗಳಲ್ಲೂ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಆಗ್ತಿದೆ ಎಂದರು.

ಸರ್ಕಾರ ತನ್ನ ಕೆಲಸ ಮಾಡದೆ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ. ಸರ್ಕಾರದ ಗೃಹಲಕ್ಷ್ಮೀ ಯೋಜನೆ ಕೆಲವು ಮಹಿಳೆಯರಿಗೆ ಮಾತ್ರ ಸಿಕ್ಕಿದೆ. ರಾಜ್ಯದಲ್ಲಿ ಲೋಡ್​ ಶೆಡ್ಡಿಂಗ್ ಮಾಡಲು ಆರಂಭವಾಗಿದೆ. ಸರ್ಕಾರದ ವಿರುದ್ಧ ಹೋರಾಟ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ ಆಗಿದೆ ಎಂದು ಅವರು ತಿಳಿಸಿದರು.

ಎಂಎಲ್​ಸಿ ಪ್ರದೀಪ್ ಶೆಟ್ಟರ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಅಲರ್ಟ್ ಆಗಿದ್ದ ಬಿಜೆಪಿ ಕೋರ್ ಕಮಿಟಿ ಸಭೆ ಕರೆದಿತ್ತು.

ಇದನ್ನೂ ಓದಿ: ಪ್ರದೀಪ್ ಶೆಟ್ಟರ್ ಅಸಮಾಧಾನ ಬೆನ್ನಲ್ಲೇ ಬಿಜೆಪಿ ಅಲರ್ಟ್; ಹುಬ್ಬಳ್ಳಿಯ ಖಾಸಗಿ ಹೋಟೆಲ್​ನಲ್ಲಿ ಮಹತ್ವದ ಸಭೆ

ಮಾಜಿ ಸಚಿವ ಮುನೇನಕೊಪ್ಪ​ ಗೈರು

ಕೋರ್ ಕಮಿಟಿ ಸಭೆಗೆ ಗೈರಾಗಿರುವ ಬಗ್ಗೆ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ‘ಟಿವಿ9’ಗೆ ಪ್ರತಿಕ್ರಿಯಿಸಿದ್ದು, ಅನುಮತಿ ಪಡೆದುಕೊಂಡೇ ನಾನು ಸಭೆಗೆ ಗೈರಾಗಿದ್ದೇನೆ. ಅನ್ಯ ಕೆಲಸ ನಿಮಿತ್ತ ಅನುಮತಿ ಪಡೆದು ನಾನು ಬೆಂಗಳೂರಿಗೆ ಬಂದಿದ್ದೇನೆ ಎಂದು ತಿಳಿಸಿದರು.

ರಾಜಸ್ಥಾನ ಪ್ರವಾಸದಲ್ಲಿದ್ದೇನೆ; ಪ್ರದೀಪ್ ಶೆಟ್ಟರ್

ನಾನು ಗುಜರಾತ್​, ರಾಜಸ್ಥಾನ ಪ್ರವಾಸದಲ್ಲಿದ್ದೇನೆ. ಸರ್ವಪಕ್ಷಗಳ ಅಧ್ಯಯನಕ್ಕೆ ಗುಜರಾತ್, ರಾಜಸ್ಥಾನ ಪ್ರವಾಸ ಕೈಗೊಂಡಿದ್ದೇನೆ. ಹೀಗಾಗಿ ಕೋರ್ ಕಮೀಟಿ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ ಎಂದು ಎಂಎಲ್​ಸಿ ಪ್ರದೀಪ್ ಶೆಟ್ಟರ್ ‘ಟಿವಿ9’ಗೆ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ