AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತೃಪ್ತಿ ಶಮನಕ್ಕೆ ಕೊಡುತ್ತೇವೆ ಎಂದಿದ್ದ 25 ಕೋಟಿ ಅನುದಾನ ಎಲ್ಲಿ: ಕಾಂಗ್ರೆಸ್ ಸರ್ಕಾರಕ್ಕೆ ಬೊಮ್ಮಾಯಿ ಪ್ರಶ್ನೆ

ರೈತರಿಗಾಗಿ ರಾಜ್ಯದ ಬೊಕ್ಕಸದಿಂದ ಒಂದು ಪೈಸೆ ಖರ್ಚು ಮಾಡಿಲ್ಲ. ನಮ್ಮ ಸರ್ಕಾರದಲ್ಲಿ ದುಪ್ಪಟ್ಟು ಪರಿಹಾರ ಕೊಟ್ಟಿದ್ದೇವೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಸಿದರು.

ಅತೃಪ್ತಿ ಶಮನಕ್ಕೆ ಕೊಡುತ್ತೇವೆ ಎಂದಿದ್ದ 25 ಕೋಟಿ ಅನುದಾನ ಎಲ್ಲಿ: ಕಾಂಗ್ರೆಸ್ ಸರ್ಕಾರಕ್ಕೆ ಬೊಮ್ಮಾಯಿ ಪ್ರಶ್ನೆ
ಬಸವರಾಜ ಬೊಮ್ಮಾಯಿ
ಕಿರಣ್​ ಹನಿಯಡ್ಕ
| Edited By: |

Updated on: Jan 18, 2024 | 2:17 PM

Share

ಬೆಂಗಳೂರು, ಜನವರಿ 18: ಅತೃಪ್ತಿ ಶಮನಕ್ಕೆ 25 ಕೋಟಿ ರೂಪಾಯಿ ಅನುದಾನ ಕೊಡುವುದಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಹೇಳಿತ್ತು. ಆದರೆ, ಈವರೆಗೂ ಅನುದಾನ ಕೊಟ್ಟಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರಿಗೆ ಅನುದಾನ ಕೊಟ್ಟರೆ, ನಮ್ಮ ಶಾಸಕರಿಗೂ ಕೊಡಬೇಕು. ನಾನು ಸಿಎಂ ಆಗಿದ್ದಾಗ 25 ಕೋಟಿ ರೂ. ಅನುದಾನವನ್ನು ಕೊಟ್ಟಿದ್ದೇನೆ. ಹಾಗಾದರೆ ಇವರು ಈಗ ಎಷ್ಟು ಕೊಡಬೇಕು ಕಾಂಗ್ರೆಸ್​​​ ಶಾಸಕರಿಗೆ? ಇವರ ಯೋಗ್ಯತೆಗೆ ಸಣ್ಣ ಬೋರ್​ವೆಲ್ ಹಾಕಿಲ್ಲ ಎಂದು ಟೀಕಿಸಿದರು.

ಎಲ್ಲಾ ವಿಚಾರಗಳಲ್ಲಿಯೂ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಅನುದಾನದ ಬಗ್ಗೆ ಕೇಂದ್ರದವರು ಚರ್ಚೆಗೆ ಬರಲಿ ಎಂಬ ಸವಾಲು ಹಾಕುತ್ತಾರೆ. ಅದು ಆಗದ ವಿಚಾರ ಎಂಬುದು ಅವರಿಗೆ ಗೊತ್ತಿದೆ. ಅದಕ್ಕೇ ಹಾಗೆ ಹೇಳುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಯತೀಂದ್ರ ಹೇಳಿಕೆಯ ಅರ್ಥವೇನು: ಬೊಮ್ಮಾಯಿ ಪ್ರಶ್ನೆ

ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಡಾ. ಯತೀಂದ್ರ ಹೇಳಿರುವುದರ ಅರ್ಥವೇನು ಎಂದು ಬೊಮ್ಮಾಯಿ ಪ್ರಶ್ನಿಸಿದರು. ಹೆಚ್ಚು ಸೀಟು ಬಂದರೆ ಸಿಎಂ ಆಗಿ ಮುಂದುವಯಲಿದ್ದಾರೆ ಎಂದಿದ್ದಾರೆ. ಹಾಗಾದರೆ ಕಾಂಗ್ರೆಸ್​ಗೆ ಕಡಿಮೆ ಸೀಟು ಬಂದರೆ ಏನು? ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸೀಟು ಬರುವುದು ಬಿಜೆಪಿಗೆ. ಹಾಗಾದರೆ ಯತೀಂದ್ರ ಪ್ರಕಾರ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುವುದಿಲ್ಲವೇ? ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯಿಂದ ಈಗ ಈ ಪ್ರಶ್ನೆ ಉದ್ಭವಿಸಿದೆ. ಅದಕ್ಕೆ ಚುನಾವಣೆ ಬಂದಾಗ ಈ ರೀತಿ ವಿತಂಡವಾದ ಮುಂದಿಡುತ್ತಾರೆ ಎಂದು ಬೊಮ್ಮಾಯಿ ಟೀಕಿಸಿದರು.

ರೈತರಿಗಾಗಿ ರಾಜ್ಯದ ಬೊಕ್ಕಸದಿಂದ ಒಂದು ಪೈಸೆ ಖರ್ಚು ಮಾಡಿಲ್ಲ. ನಮ್ಮ ಸರ್ಕಾರದಲ್ಲಿ ದುಪ್ಪಟ್ಟು ಪರಿಹಾರ ಕೊಟ್ಟಿದ್ದೇವೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಸಿದರು.

ಕಾನೂನು ಸುವ್ಯವಸ್ಥೆಯಲ್ಲಿ ರಾಜಕಾರಣ ಮಧ್ಯಪ್ರವೇಶ: ಬೊಮ್ಮಾಯಿ ಆರೋಪ

ಹಾವೇರಿ ಜಿಲ್ಲೆ ಹಾನಗಲ್​ನಲ್ಲಿ ಮಹಿಳೆ ಮೇಲೆ ಗ್ಯಾಂಗ್​ರೇಪ್​ ಪ್ರಕರಣಕ್ಕೆ ಸಂಬಂಧಿಸಿ ಹಾನಗಲ್ ಠಾಣೆಯ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆಯಲ್ಲಿ ರಾಜಕಾರಣ ಮಧ್ಯಪ್ರವೇಶ ಮಾಡುತ್ತಿದೆ. ಪೋಕ್ಸೊ ಕಾಯ್ದೆ ಉಲ್ಲಂಘನೆ ಮಾಡಿದ್ದಲ್ಲದೆ ಸಂತ್ರಸ್ತೆಗೆ ಆಮಿಷವೊಡ್ಡಲಾಗಿದೆ. ಸ್ಥಳೀಯ ಪೊಲೀಸರು ಪ್ರಕರಣವನ್ನು ಮುಚ್ಚಿ ಹಾಕುವಂತಹ ಎಲ್ಲಾ ಸಾಧ್ಯತೆಗಳಿವೆ. ಎಸ್​ಐಟಿ ತನಿಖೆಗೆ ಸಿಎಂ‌ ನಿರಾಕರಿಸಿ ಪ್ರೋತ್ಸಾಹ ಮಾಡಿದಂತೆ ಮಾಡಿದ್ದಾರೆ ಎಂದು ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದರು. ಈ ಬಗ್ಗೆ ಜನವರಿ 20ರಂದು ಹಾವೇರಿ ಎಸ್​ಪಿ ಕಚೇರಿ ಮುಂದೆ ಬಿಜೆಪಿಯಿಂದ ಪ್ರತಿಭಟನೆ ನಡೆಯಲಿದೆ ಎಂದೂ ಅವರು ತಿಳಿಸಿದರು.

ಟೀಕಿಸುವಾಗ ಏಕವಚನ ಸಲ್ಲ: ಬೊಮ್ಮಾಯಿ

ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಸಿಎಂ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಬೊಮ್ಮಾಯಿ, ಟೀಕೆ ಮಾಡುವಾಗ ಏಕವಚನದಲ್ಲಿ ಇರದಂತೆ ಎಚ್ಚರಿಕೆ ವಹಿಸಬೇಕು. ಸಿಎಂ ಸಿದ್ದರಾಮಯ್ಯ ಕೂಡ ಹಲವು ವರ್ಷಗಳಿಂದ ಏಕವಚನದಲ್ಲಿ ಮಾತನಾಡುತ್ತಿದ್ದಾರೆ. ಅವರು ಮಾತನಾಡಿದರೆ ಸರಿ, ಬೇರೆಯವರು ಮಾತನಾಡಿದರೆ ತಪ್ಪು. ಇದಕ್ಕೆ ಮೊದಲು ಸಿದ್ದರಾಮಯ್ಯ ಉತ್ತರ ಕೊಡಲಿ ಎಂದು ಹೇಳಿದರು.

ಇದನ್ನೂ ಓದಿ: ಸರ್ಕಾರಿ ನಿವಾಸಕ್ಕೆ ಆರ್ ಅಶೋಕ ಮನವಿ: ಡಿಕೆ ಶಿವಕುಮಾರ್​​ಗೆ ಹಂಚಿಕೆಯಾಗಿರುವ ನಿವಾಸಕ್ಕೇ ಬೇಡಿಕೆ

ಎಲ್ಲರ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಏಕವಚನದಲ್ಲಿ ಮಾತನಾಡಿದ್ದಾರೆ. ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಬಗ್ಗೆಯೂ ಸಿದ್ದರಾಮಯ್ಯ ಏಕವಚನದಲ್ಲೇ ಮಾತನಾಡಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?