AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ಎ ಮೀಸಲಾತಿ, ಮಠಾಧೀಶರ ರಾಜಕೀಯ ಪ್ರವೇಶ ಸುದ್ದಿ ಮಧ್ಯೆ ವಚನಾನಂದ ಸ್ವಾಮೀಜಿಯನ್ನ ಭೇಟಿಯಾದ ಬಿಎಲ್​ ಸಂತೋಷ್​

ಇಂದು (ಮಾ.7) ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹರಿಹರ ತಾಲೂಕಿನ ಹನಗವಾಡಿ ಬಳಿ ಇರುವ ಗುರುಪೀಠದ ವಚನಾನಂದ ಸ್ವಾಮೀಜಿಯವರನ್ನು ಭೇಟಿ ಮಾಡಿದ್ದಾರೆ.

2ಎ ಮೀಸಲಾತಿ, ಮಠಾಧೀಶರ ರಾಜಕೀಯ ಪ್ರವೇಶ ಸುದ್ದಿ ಮಧ್ಯೆ ವಚನಾನಂದ ಸ್ವಾಮೀಜಿಯನ್ನ ಭೇಟಿಯಾದ ಬಿಎಲ್​ ಸಂತೋಷ್​
ಬಿಎಲ್​ ಸಂತೋಷ, ವಚನಾನಂದ ಸ್ವಾಮೀಜಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Mar 07, 2023 | 2:47 PM

Share

ದಾವಣಗೆರೆ: ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ರಾಜ್ಯ ಪ್ರವಾಸ ಮಾಡುತ್ತಿದ್ದು, ಅಬ್ಬರದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿವೆ. ಮತಗಳಕ್ರೋಢೀಕರಣಕ್ಕೆ ಎಲ್ಲ ಆಯಾಮಗಳಿಂದ ಲೆಕ್ಕಾಚಾರ ಹಾಕುತ್ತಿದ್ದು, ಮುಖ್ಯವಾಗಿ ಆಯಾ ಕ್ಷೇತ್ರದ ಸಮುದಾಯದ ಲೆಕ್ಕಾಚಾರದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ದತೆ ಮಾಡಿಕೊಳ್ಳುತ್ತಿವೆ. ಸದ್ಯ ರಾಜ್ಯದಲ್ಲಿ ಎರಡು ವಿಷಯಗಳು ಸಾಕಷ್ಟು ಚರ್ಚೆಯಾಗುತ್ತಿವೆ. ಒಂದು ಮಠಾಧೀಶರ ರಾಜಕೀಯ ಪ್ರವೇಶ ಮತ್ತು ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಘೋಷಣೆ. ಈ ಎರಡು ವಿಚಾರಗಳು ರಾಜ್ಯ ಸರ್ಕಾರದ ಪಾಲಿಗೆ ಅಲ್ಪ ಮಟ್ಟಿಗೆ ತೆಲೆನೋವಾಗಿ ಪರಿಣಮಿಸಿದೆ. ಇನ್ನು ಇಂದು (ಮಾ.7) ಬಿಜೆಪಿ (BJP) ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ (BL Santosh) ಹರಿಹರ ತಾಲೂಕಿನ ಹನಗವಾಡಿ ಬಳಿ ಇರುವ ಗುರುಪೀಠದ ವಚನಾನಂದ ಸ್ವಾಮೀಜಿಯವರನ್ನು (Vachananda Swamiji) ಭೇಟಿ ಮಾಡಿದ್ದು, ಸದ್ಯ ಸರ್ಕಾರಕ್ಕಿರುವ ಈ ಎರಡು ತೆಲೆನೋವನ್ನು ನಿವಾರಿಸುವ ಸಾಧ್ಯತೆಗಳಿವೆ.

ಬಿಜೆಪಿ ಪಾಲಿಗೆ ಲಿಂಗಾಯತ ಪಂಚಮಸಾಲಿ ಸಮಾಜದ ಮತಗಳು ಅತಿ ದೊಡ್ಡ ಶಕ್ತಿಯಾಗಿವೆ. ಆದರೆ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಘೋಷಣೆ ವಿಚಾರದಲ್ಲಿ ಬಿಜೆಪಿಗೆ ಈ ಮತಗಳು ಒಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸಮಾಜದ ಪ್ರಮುಖ ಮಠಾಧೀಶರಾದ ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಮತ್ತು ಕೂಡಲಸಂಗಮದ ಬಸವಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡಬೇಕೆಂದು ಹಲವು ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಮಾತ್ರ 2ಸಿ 2ಡಿ ಮೀಸಲಾತಿ ನೀಡಿ ಸಮಾಧಾನ ಮಾಡಿತ್ತಾದರೂ, ಸಮಾಜ ತೃಪ್ತವಾಗಿಲ್ಲ. ಇದರಿಂದ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಅತಿ ದೊಡ್ಡ ಸಮಾಜದ ಮತಗಳು ವಿಭಜನೆಯಾಗುವ ಸಾಧ್ಯತೆ ಇದೆ.

ಇನ್ನು ಲಿಂಗಾಯತ ಪಂಚಮಸಾಲಿ ಸಮಾಜದ ಮತ್ತು ಬೇರೆ ಸಮಾಜದ ಮಠಾಧೀಶರು ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಚೆ ವ್ಯಕ್ತಪಡಿಸಿದ್ದರಿಂದ ಬಿಜೆಪಿ ಪಾಲಿನ ಮತಗಳು ಇಬ್ಬಾಗ ಆಗುವ ಸಾಧ್ಯತೆ ಇದೆ. ಈ ಸಂಬಂಧ ಬಿ.ಎಲ್.ಸಂತೋಷ್, ವಚನಾನಂದ ಸ್ವಾಮೀಜಿ‌ ಜೊತೆ‌ ಮಾತುಕತೆ ನಡೆಸಿದ್ದು, ಮಠಾಧೀಶರ ರಾಜಕೀಯ ರಂಗ ಪ್ರವೇಶದ ಬಗ್ಗೆಯೂ ಚರ್ಚೆಯಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:43 pm, Tue, 7 March 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ