AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾನು ಕಳ್ಳ ಪರರ ನಂಬಾ ಎನ್ನುವಂತಿದೆ ಕಾಂಗ್ರೆಸ್​​​ ವರ್ತನೆ – ಕಾಂಗ್ರೆಸ್​ನಿಂದ ‘ಪೇ ಸಿಎಂ’ ಅಭಿಯಾನಕ್ಕೆ ಬಿಎಸ್ ಯಡಿಯೂರಪ್ಪಆಕ್ರೋಶ

ಜನರ ತೆರಿಗೆ ಹಣವನ್ಮು ಹೇಗೆ ಲೂಟಿ ಮಾಡಿದ್ರು ಎಂದು ವಿಧಾನಸಭೆ ಅಧ್ಯಕ್ಷರಾಗಿದ್ದವರೇ ಹೇಳಿದ್ದಾರೆ. ಕಾಂಗ್ರೆಸ್ ನಾಯಕರು ಗೌರವದಿಂದ ಇರೋದನ್ನ ಕಲಿಯಬೇಕು. ನಿಮ್ಮ ಅತಿರೇಕದ ವರ್ತನೆ ಹೀಗೆಯೇ ಮುಂದುವರೆದರೆ ನಿಮ್ಮದೇ ಭಾಷೆಯಲ್ಲಿ ಉತ್ತರ ಕೊಡಲು ಬರುತ್ತೆ -ಬಿಜೆಪಿ ಹಿರಿಯ ನಾಯಕ ಬಿ.ಎಸ್​. ಯಡಿಯೂರಪ್ಪ

ತಾನು ಕಳ್ಳ ಪರರ ನಂಬಾ ಎನ್ನುವಂತಿದೆ ಕಾಂಗ್ರೆಸ್​​​ ವರ್ತನೆ - ಕಾಂಗ್ರೆಸ್​ನಿಂದ ‘ಪೇ ಸಿಎಂ’ ಅಭಿಯಾನಕ್ಕೆ ಬಿಎಸ್ ಯಡಿಯೂರಪ್ಪಆಕ್ರೋಶ
ಕಾಂಗ್ರೆಸ್​ನಿಂದ ‘ಪೇ ಸಿಎಂ’ ಅಭಿಯಾನಕ್ಕೆ ಬಿಎಸ್​ವೈ ಆಕ್ರೋಶ
TV9 Web
| Edited By: ಸಾಧು ಶ್ರೀನಾಥ್​|

Updated on:Sep 26, 2022 | 8:19 PM

Share

ಹಾಸನ: ಹಾಸನ ಜಿಲ್ಲೆ ಬೇಲೂರಿನಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ.ಎಸ್​. ಯಡಿಯೂರಪ್ಪ ಸಭೆಯೊಂದರಲ್ಲಿ ಮಾತನಾಡಿದ್ದಾರೆ. ಈ ವೇಳೆ ಕಾಂಗ್ರೆಸ್​ ಪಕ್ಷದ ನಾಯಕರು ನೀಡುತ್ತಿರುವ ವಿಭಿನ್ನ ಹೇಳಿಕೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಸ್ಪೀಕರ್​ ಆಗಿದ್ದ ಕೆ ರಮೇಶ್​ ಕುಮಾರ್ ಅವರು ನೀಡಿದ್ದ ಹೇಳಿಕೆಯನ್ನು ಪ್ರಸ್ತಾಪಿಸಿ ತಾನು ಕಳ್ಳ ಪರರ ನಂಬಾ ಎನ್ನುವಂತಿದೆ ಕಾಂಗ್ರೆಸ್​​​ ವರ್ತನೆ ಎಂದು ಕಾಂಗ್ರೆಸ್​ನಿಂದ ನಡೆಯುತ್ತಿರುವ ‘ಪೇ ಸಿಎಂ’ ಅಭಿಯಾನಕ್ಕೆ (PayCM) ಬಿಎಸ್​ವೈ ತಮ್ಮ ಆಕ್ರೋಶ ಹೊರಹಾಕಿದರು. ರಂಭಾಪುರಿ ಮಠದ ಶರನ್ನವರಾತ್ರಿ ದಸರಾ ದರ್ಬಾರ್ ಉದ್ಘಾಟನಾ ಕಾರ್ಯಕ್ರಮಕ್ಕೆ ಯಡಿಯೂರಪ್ಪ ಇಲ್ಲಿಗೆ ಆಗಮಿಸಿದ್ದಾರೆ.

ರಮೇಶ್​ ಕುಮಾರ್​​ ಹೇಳಿಕೆ ಬಗ್ಗೆ ಜನ ಚರ್ಚೆ ಮಾಡಬೇಕು

ನಾಲ್ಕು ತಲೆಮಾರು ಆಗುವಷ್ಟು ಮಾಡಿಕೊಂಡಿದ್ದೇವೆ ಎಂದು ಕಾಂಗ್ರೆಸ್​​​ ಪಕ್ಷದ ರಮೇಶ್​ ಕುಮಾರ್​ ಕೆಲ ದಿನಗಳ ಹಿಂದೆ ಗಂಭೀರ ಮಾತನ್ನಾಡಿದ್ರು. ಸ್ವಾತಂತ್ರ್ಯ ಬಂದ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಅಭಿವೃದ್ಧಿ ಮಾಡಿಲ್ಲ. ಜನರ ತೆರಿಗೆ ಹಣ ಹೇಗೆ ಲೂಟಿ ಮಾಡಿದ್ರು ಅಂತ ಅವರೇ ಹೇಳಿದ್ದಾರೆ. ರಮೇಶ್​ ಕುಮಾರ್​​ ಹೇಳಿಕೆ ಬಗ್ಗೆ ರಾಜ್ಯದ ಜನ ಚರ್ಚೆ ಮಾಡಬೇಕು ಎಂದು ಬಿಎಸ್​ವೈ ಆಶಿಸಿದರು.

ಜನರ ತೆರಿಗೆ ಹಣವನ್ಮು ಹೇಗೆ ಲೂಟಿ ಮಾಡಿದ್ರು ಎಂದು ವಿಧಾನಸಭೆ ಅಧ್ಯಕ್ಷರಾಗಿದ್ದವರೇ ಹೇಳಿದ್ದಾರೆ. ಕಾಂಗ್ರೆಸ್ ನಾಯಕರು ಗೌರವದಿಂದ ಇರೋದನ್ನ ಕಲಿಯಬೇಕು. ನಿಮ್ಮ ಅತಿರೇಕದ ವರ್ತನೆ ಹೀಗೆಯೇ ಮುಂದುವರೆದರೆ ನಿಮ್ಮದೇ ಭಾಷೆಯಲ್ಲಿ ಉತ್ತರ ಕೊಡಲು ಬರುತ್ತೆ. ಆದರೆ ಆ ಕೀಳುಮಟ್ಟಕ್ಕೆ ನಾವು ಇಳಿಯಲ್ಲ. ಸಂಘ ಪರಿವಾರದ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕ ಹಕ್ಕಿದೆ? ಸಂಘ ಪರಿವಾರದ ಬಗ್ಗೆ ಮಾತನಾಡೊ ಕೆಳಮಟ್ಟಕ್ಕೆ ಇಳಿಬಾರದಿತ್ತು. ಬೊಮ್ಮಾಯಿ ಅವರ ನೇತೃತ್ವದಲ್ಲಿ ಎಲ್ಲಾ ವರ್ಗದ ಜನರಿಗೆ ನ್ಯಾಯ ಒದಗಿಸೊ ಪ್ರಾಮಾಣಿಕ ಪ್ರಯತ್ನ ಆಗುತ್ತಿದೆ. ಇದನ್ನ ಸಹಿಸದೆ ಹೀಗೆ ಅಪಪ್ರಚಾರ ಮಾಡೊದು ಶೋಭೆ ತರಲ್ಲ ಎಂದು ಯಡಿಯೂರಪ್ಪ ಗುಡುಗಿದರು.

ಇನ್ನು, ಬಿಜೆಪಿ ಸರ್ಕಾರ ಕೇವಲ ಲೂಟಿ ಮಾಡುತ್ತಿದೆ, ಅವರಿಂದ ಒಂದೇ ಒಂದು ಮನೆ ಕಟ್ಟೋಕೆ ಆಗಿಲ್ಲ ಎಂಬ ಸಿದ್ದು ಟೀಕೆಗೆ ಸಹ ಬಿಎಸ್​ವೈ ತಿರುಗೇಟು ನೀಡಿದರು. ಆ ಮನುಷ್ಯ ಇತ್ತೀಚೆಗೆ ಸಂಯಮ ಕಳೆದುಕೊಂಡಿದ್ದಾರೆ. ಸೋಲಿನ ಭಯದಿಂದ ಮನ ಬಂದಂತೆ ಮಾತನಾಡೋಕೆ ಶುರುಮಾಡಿದ್ದಾರೆ. ನಾವು ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಮನೆ ಕಟ್ಟೋಕೆ ಶುರು ಮಾಡಿದ್ದೇವೆ. ಕೇಂದ್ರ ಸರ್ಕಾರದ ನೆರವಿನಿಂದ ಆಗುತ್ತಿರೊ ಕೆಲಸವನ್ನು ಹೇಳಿದ ಮೇಲೂ ಅವರು ಹೀಗೆ ಮಾತನಾಡುತ್ತಿದ್ದಾರೆ.

ಸಿದ್ದರಾಮಯ್ಯ ಅವರನ್ನ ನಾನು ಕೇಳುತ್ತೇನೆ – ಅವರಿಗೆ ಮೈಸೂರಿನಲ್ಲಿ ಅಡ್ರಸ್ಸೇ ಇಲ್ಲ. ಮೈಸೂರಿನಲ್ಲಿ ನೀವು ನಿಮ್ಮ ಅಸ್ತಿತ್ವವನ್ನೇ ಕಳೆದುಕೊಂಡಿದ್ದೀರಾ! ಬದಾಮಿಯಲ್ಲಿ ನಾನು ಏನಾದರೂ ಒಂದೆರಡು ಗಂಟೆ ಹೋಗಿದ್ದರೆ ಕುಸಿದು ಹೋಗುತ್ರಿದ್ದಿರಿ. ಈಗ ನಿಮ್ಮ ಕ್ಷೇತ್ರ ಎಲ್ಲಿ ಎಂದು ಹುಡುಕೋದ್ರಲ್ಲಿ ಇದೀರಿ! ಮೊದಲು ನಿಮ್ಮ ಕ್ಷೇತ್ರ ಹುಡುಕಿಕೊಂಡಿ ಗೆಲ್ಲೋ ಕಡೆ ಗಮನ ಕೊಡಿ ಎಂದು ಸಿದ್ದು ವಿರುದ್ದ ಬಿಎಸ್ ವೈ ವಾಗ್ದಾಳಿ ನಡೆಸಿದರು.

ನೀವು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲ್ಲ. ವಿರೋದ ಪಕ್ಷದ ನಾಯಕರಾಗಿ ಹಗುರವಾಗಿ ಮಾತನಾಡೋದನ್ನ ಬಿಡಲಿ ಎಂದು ಸಂಘ ಪರಿವಾರ ಬಿಜೆಪಿಯಿಂದ ಡರ್ಟಿ ಪಾಲಿಟಿಕ್ಸ್ ಎಂಬ ಸಿದ್ದು ಹೇಳಿಕೆಗೆ ಬಿಎಸ್ ವೈ ಕಿಡಿಕಾರಿದರು.

ಕಾಂಗ್ರೆಸ್​ನವರಿಗೆ ಅಧಿಕಾರ ಹಿಡಿಯುವ ಭ್ರಮೆ ಬೇಡ. ನರೇಂದ್ರ ಮೋದಿ ನಾಯಕತ್ವದಲ್ಲಿ ಜನರಿಗೆ ನಂಬಿಕೆ, ವಿಶ್ವಾಸವಿದೆ. ಬಿಜೆಪಿ ನೂರಕ್ಕೆ ನೂರರಷ್ಟು ಮತ್ತೆ ಅಧಿಕಾರ ಹಿಡಿಯುವುದು ನಿಶ್ಚಿತ. ರಾಜ್ಯದಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲೋದು ಖಚಿತ. ಹಾಸನ ಜಿಲ್ಲೆಯಲ್ಲೂ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ಇದೆ ಎಂದು ಬೇಲೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪರಿಂದ ದಸರಾ ದರ್ಬಾರ್ ಉದ್ಘಾಟನೆ

ಶ್ರೀಮದ್ ರಂಬಾಪುರಿ ಜಗದ್ಗುರು ಡಾ.ವೀರಸೋಮೇಶ್ವರ ಶ್ರೀಗಳ ನೇತೃತ್ವದಲ್ಲಿ ಹಾಸನ ಜಿಲ್ಲೆ ಬೇಲೂರಿನಲ್ಲಿ ಶರನ್ನವರಾತ್ರಿ ದಸರಾ ದರ್ಬಾರ್ ಗೆ ಒಂದು ಚಾಲನೆ ದೊರೆಯಿತು. ಇಂದಿನಿಂದ ಒಂಬತ್ತು ದಿನಗಳು ಶರನ್ನವರಾತ್ರಿ ದಸರ ದರ್ಬಾರ್ ಧರ್ಮ ಸಮ್ಮೇಳನ ನಡೆಯಲಿದೆ. ಮಾಜಿ ಸಿಎಂ ಯಡಿಯೂರಪ್ಪ ದಸರಾ ದರ್ಬಾರ್ ಉದ್ಘಾಟನೆ ಮಾಡಿದರು. ಕಾರ್ಯಕ್ರಮ ದಲ್ಲಿ ಅಬಕಾರಿ ಸಚಿವ ಗೋಪಾಲಯ್ಯ, ಬೇಲೂರು ಶಾಸಕ ಕೆ.ಎಸ್. ಲಿಂಗೇಶ್, ಕಡೂರು ಶಾಸಕ ಬೆಳ್ಳಿ ಪ್ರಕಾಶ್, ತರಿಕೆರೆ ಶಾಸಕ ಸುರೇಶ್ ಸೇರಿ ಹಲವರು ಭಾಗಿಯಾಗಿದ್ದರು. ವಿವಿಧ ಮಠಗಳ ಶ್ರೀಗಳ ಉಪಸ್ಥಿತಿಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ರಾಜ್ಯದ ವಿವಿಧೆಡೆಗಳಿಂದ ಆಗಮಿಸಿರೊ ಸಹಸ್ರಾರು ಭಕ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಬೇಲೂರು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯುತ್ತಿದೆ.

Published On - 7:13 pm, Mon, 26 September 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ