ವರ್ಣರಂಜಿತ ರಾಜಕಾರಣಿ: 3 ಪಕ್ಷ ಬದಲಿಸಿರುವ ಯೋಗೇಶ್ವರ್ ರಾಜಕೀಯ ಹಾದಿ ಇಲ್ಲಿದೆ

ಕರ್ನಾಟಕದಲ್ಲಿ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಚನ್ನಪಟ್ಟಣ ಕ್ಷೇತ್ರದ ಟಿಕೆಟ್​​ ಗೊಂದಲದ ಗೂಡಿನಿಂದ ಕೂಡಿದೆ. ಇದೀಗ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರಿದ್ದು, ಕೈ ಟಿಕೆಟ್ ಯೋಗೇಶ್ವರ್​ ಅವರಿಗೆ ಸಿಗುವುದು ಪಕ್ಕಾ ಆಗಿದೆ. ಸಿಪಿ ಯೋಗೇಶ್ವರ್​ ರಾಜಕಾರಣ ಹಾದಿ ಇಲ್ಲಿದೆ.

ವರ್ಣರಂಜಿತ ರಾಜಕಾರಣಿ: 3 ಪಕ್ಷ ಬದಲಿಸಿರುವ ಯೋಗೇಶ್ವರ್ ರಾಜಕೀಯ ಹಾದಿ ಇಲ್ಲಿದೆ
ಸಿಪಿ ಯೋಗೇಶ್ವರ್​
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ವಿವೇಕ ಬಿರಾದಾರ

Updated on: Oct 23, 2024 | 11:50 AM

ಬೆಂಗಳೂರು, ಅಕ್ಟೋಬರ್​ 23: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ (Karnataka By-Election) ಪೈಕಿ ಚನ್ನಪಟ್ಟಣ ಕ್ಷೇತ್ರದ (Channapatna Constituency) ಚುನಾವಣೆ ಹೈ ವೋಲ್ಟೇಜ್​ನಿಂದ ಕೂಡಿದೆ. ಮಾಜಿ ಎಂಎಲ್​ಸಿ, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ (CP Yogeshwar) ಕಾಂಗ್ರೆಸ್​ ಸೇರ್ಪಡೆಯಾಗಿದ್ದು, ಕೈ ಟಿಕೆಟ್​ ಇವರಿಗೆ ನೀಡುವುದು ಪಕ್ಕಾ ಆಗಿದೆ. ಇಂದು (ಅ.23) ಸಂಜೆ ಟಿಕೆಟ್​ ಘೋಷಣೆಯಾಗುವ ಸಾಧ್ಯತೆ ಇದೆ. ಇನ್ನು ಸಿಪಿ ಯೋಗೇಶ್ವರ್​ ಅವರ ರಾಜಕೀಯ ಹಾದಿ ವರ್ಣ ರಂಜಿತದಿಂದ ಕೂಡಿದೆ. ಸಿಪಿ ಯೋಗೇಶ್ವರ್​​ ಏಳು ಚುನಾವಣೆಗಳನ್ನು ಎದುರಿಸಿದ್ದು, ನಾಲ್ಕು ಬಾರಿ ಗೆಲವು ಸಾಧಿಸಿದ್ದಾರೆ. ಗೆದ್ದ ನಾಲ್ಕೂ ಬಾರಿಯೂ ಬೇರೆ ಬೇರೆ ಚಿಹ್ನೆಗಳಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

ಸೈನಿಕ ಚಿತ್ರದಲ್ಲಿ ನಾಯಕನಾಗಿ ನಟಿಸಿ ಖ್ಯಾತಿ ಗಳಿಸಿರುವ ಸಿಪಿ ಯೋಗೇಶ್ವರ್​​ ಅವರು 1999ರಲ್ಲಿ ಚುನಾವಣಾ ರಾಜಕಾರಣಕ್ಕೆ ದುಮುಕಿದರು. 1999ರಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ಕಾಂಗ್ರೆಸ್​ನ‌ ಕಾಂತ ಸಾದತ್ ಅಲಿ ಖಾನ್ ಅವರನ್ನು 2282 ಮತಗಳ ಅಂತರದಿಂದ ಸೋಲಿಸಿದರು.

ನಂತರ ಸಿಪಿ ಯೋಗೇಶ್ವರ್​ ಅವರು ಕಾಂಗ್ರೆಸ್​ ಸೇರ್ಪಡೆಯಾದರು. 2004‌ರಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್​​ನ ಅಶ್ವಥ್ ಎಮ್​ಸಿ ಅವರನ್ನು ಸೋಲಿಸಿ 16,169‌ ಮತಗಳ ಅಂತರದಿಂದ ಗೆದ್ದು ಬೀಗಿದ್ದರು. ಮತ್ತೆ 2008‌ರಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿದರು. ಆಗಲೂ ಜೆಡಿಎಸ್ ಅಭ್ಯರ್ಥಿಯನ್ನು 4,930 ಮತಗಳ ಅಂತರದಿಂದ ಪರಾಭವಗೊಳಿಸಿ ವಿಜಯಪತಾಕೆ ಹಾರಿಸಿದರು.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್​ ಮೈತ್ರಿಯಲ್ಲಿ ಬಿರುಕು: ಪರಿಷತ್ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ

ನಂತರ 2009ರಲ್ಲಿ ಪ್ರಥಮ ಬಾರಿಗೆ ಬಿಜೆಪಿಯಿಂದ ಸ್ಪರ್ಧಿಸಿದರು. ಈ ಚುನಾವಣೆಯಲ್ಲಿ ಜೆಡಿಎಸ್​ನ ಅಶ್ವತ್ಥ್ ಎಮ್​ಸಿ ಅವರ ವಿರುದ್ಧ 2282 ಮತಗಳ ಅಂತರದಿಂದ ಸೋಲು ಕಂಡರು. ಬಳಿಕ, 2011 ರಲ್ಲಿ ಮತ್ತೆ ಬಿಜೆಪಿಯಿಂದ ಸ್ಪರ್ಧಿಸಿದರು. ಈ ಚುನಾವಣೆಯಲ್ಲಿ ಸಿಪಿ ಯೋಗೇಶ್ವರ್​ ಜೆಡಿಎಸ್​ ಅಭ್ಯರ್ಥಿ ನಾಗರಾಜು ಅವರನ್ನು 17,803 ಮತಗಳ ಅಂತರದಿಂದ ಸೋಲಿಸಿ, ಅಭೂತಪೂರ್ವ ಜಯಗಳಿಸಿದರು.

2013‌ರಲ್ಲಿ ಸಮಾಜವಾದಿ ಪಾರ್ಟಿಯಿಂದ ಸ್ಪರ್ಧಿಸಿ, ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರನ್ನು 6,464 ‌ಮತಗಳಿಂದ ಸೋಲು ಉಣಿಸಿದರು. 2018ರಲ್ಲಿ ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ 21 ಸಾವಿರ ಮತಗಳ ಅಂತರದಿಂದ ಸೋಲು ಕಂಡರು. ಮತ್ತೆ 2023ರ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ 15 ಸಾವಿರಕ್ಕೂ ಅಧಿಕ ಮತಗಳಿಂದ ಸೋಲುಂಡರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ