AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CT Ravi: ಭವಾನಿ ರೇವಣ್ಣಗೆ ಬಿಜೆಪಿ ಟಿಕೆಟ್ ಕೊಡಲು ಸಿದ್ಧ; ಸಿಟಿ ರವಿ

Bhavani Revanna: ಭವಾನಿ ಅಕ್ಕ ನಮ್ಮ ಪಾರ್ಟಿ ಅಭ್ಯರ್ಥಿಯಾಗಲೆಂದು ನನ್ನ ಮನಸ್ಸಲ್ಲಿ ಆಸೆಯಿದೆ ಎಂದು ಸಿ.ಟಿ.ರವಿ ತಿಳಿಸಿದರು.

CT Ravi: ಭವಾನಿ ರೇವಣ್ಣಗೆ ಬಿಜೆಪಿ ಟಿಕೆಟ್ ಕೊಡಲು ಸಿದ್ಧ; ಸಿಟಿ ರವಿ
ಬಿಜೆಪಿ ನಾಯಕ ಸಿಟಿ ರವಿ (ಎಡಚಿತ್ರ), ಜೆಡಿಎಸ್​ ನಾಯಕಿ ಭವಾನಿ ರೇವಣ್ಣ
TV9 Web
| Edited By: |

Updated on:Jan 27, 2023 | 1:34 PM

Share

ಚಿಕ್ಕಮಗಳೂರು: ಹಾಸನ ಜಿಲ್ಲೆಯ ಪ್ರಭಾವಿ ರಾಜಕಾರಿಣಿ, ಜೆಡಿಎಸ್ ನಾಯಕ ಎಚ್​.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ (Bhavani Revanna) ಅವರು ಬಿಜೆಪಿಯಿಂದ ಸ್ಪರ್ಧಿಸಲು ಬಯಸಿದರೆ ಟಿಕೆಟ್ ಕೊಡಲು ಸಿದ್ಧ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (CT Ravi) ಹೇಳಿದರು. ಭವಾನಿ ಅಕ್ಕ ನಮ್ಮ ಪಾರ್ಟಿಯಿಂದ ಸ್ಪರ್ಧಿಸಬೇಕು ಅಂತಿದ್ದರೆ ಅವರು ಹೊಳೆನರಸೀಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಲಿ. ಹೊಳೆನರಸೀಪುರಕ್ಕೆ ಭವಾನಿಗಿಂತ ಉತ್ತಮ ಅಭ್ಯರ್ಥಿ ಇಲ್ಲ ಎಂದು ರವಿ ಹೇಳಿದರು.

ಸಹೋದರಿ ಭವಾನಿ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ಮನೆಯಲ್ಲಿ ಗಲಾಟೆ ಹೆಚ್ಚಿಸುವ ಕೆಲಸವನ್ನು ನಾನು ಮಾಡುವುದಿಲ್ಲ. ಭವಾನಿ ಅಕ್ಕ ನಮ್ಮ ಪಾರ್ಟಿ ಅಭ್ಯರ್ಥಿಯಾಗಲೆಂದು ನನ್ನ ಮನಸ್ಸಲ್ಲಿ ಆಸೆಯಿದೆ ಎಂದು ರವಿ ತಿಳಿಸಿದರು.

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿದ ಅವರು, ಪಕ್ಷದ ನೀತಿ ಒಪ್ಪಿಕೊಂಡು ಬರುವವರು ಬರಬಹುದು. ಸುಮಲತಾ ಪ್ರಮುಖ ಜನಪ್ರಿಯ ನಾಯಕಿಯರಲ್ಲಿ ಒಬ್ಬರು. ಪಕ್ಷೇತರ ಅಭ್ಯರ್ಥಿಯಾಗಿ ಘಟಾನುಘಟಿಗಳ ಎದುರು ಗೆದ್ದಿದ್ದಾರೆ. ಸುಮಲತಾ ಬಿಜೆಪಿ ಸೇರ್ಪಡೆಯಾದರೆ ತುಂಬಾ ಸಂತೋಷವಾಗುತ್ತದೆ. ಅದರಿಂದ ಪಕ್ಷಕ್ಕೆ ಮತ್ತಷ್ಟು ಬಲ ಬರುತ್ತದೆ ಎಂದು ತಿಳಿಸಿದರು.

ಸಿದ್ದರಾಮಯ್ಯಗೆ ಪಾಕಿಸ್ತಾನವೇ ಸೇಫ್

ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದು ಹುಡುಕಾಡುತ್ತಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿಗೆ ಪಾಕಿಸ್ತಾನವೇ ಉತ್ತಮ ಜಾಗ ಎಂದು ಸಿ.ಟಿ.ರವಿ ಕೆಲ ದಿನಗಳ ಹಿಂದಷ್ಟೇ ಹಾವೇರಿಯಲ್ಲಿ ವ್ಯಂಗ್ಯವಾಗಿದ್ದರು. ಪಾಕಿಸ್ತಾನದಲ್ಲಿ ಮೋದಿ, ಬೊಮ್ಮಾಯಿ, ಯಡಿಯೂರಪ್ಪ ಇರುವುದಿಲ್ಲ. ಒಳೇಟು ಕೊಡಲು ಡಿಕೆಶಿ, ಖರ್ಗೆ ಕೂಡ ಇರುವುದಿಲ್ಲ ಎಂದು ಹೇಳಿದರು.

ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್ ಸೇರಲು ಸಿದ್ಧರಿದ್ದಾರೆಂಬ ಡಿ.ಕೆ.ಶಿವಕುಮಾರ್ ಹೇಳಿಕೆ ಖಂಡಿಸಿದ ಅವರು, ಕಾಂಗ್ರೆಸ್​ನವರೇ ಬಿಜೆಪಿಗೆ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಕಾಂಗ್ರೆಸ್ ಒಂದು ಮುಳುಗುತ್ತಿರುವ ಹಡಗು ಎಂದು ರವಿ ಹೇಳಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷಕ್ಕೆ ಸೋನಿಯ ಗಾಂಧಿ ಬಂಡವಾಳವಾದರೆ ನಮಗೆ ಮಣ್ಣಿನ ಮಗ ಪ್ರಧಾನಿ ಮೋದಿಯವರೇ ಧೀಶಕ್ತಿ: ಸಿಟಿ ರವಿ, ಬಿಜೆಪಿ ಶಾಸಕ

ಮತ್ತಷ್ಟು ರಾಜಕೀಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:34 pm, Fri, 27 January 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?