AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಬಡಾ ಗೌಡ, ಚೋಟಾ ಗೌಡ, ಪೋತಾಗೌಡ ಇದ್ದಾರೆ; ಕುಟುಂಬ ರಾಜಕೀಯದಿಂದ ಸಂವಿಧಾನಕ್ಕೆ ಅಪಾಯ: ಸಿಟಿ ರವಿ

Constitution Day 2021: ಎಸ್​ಸಿ- ಎಸ್​ಟಿ ಮೋರ್ಚಾ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಭಾಷಣ ಮಾಡಿದ್ದಾರೆ. ಭಾಷಣದಲ್ಲಿ ಕುಟುಂಬ ರಾಜಕಾರಣ ವಿಚಾರವನ್ನು ಗುರಿಯಾಗಿಸಿ ಅವರು ಮಾತನಾಡಿದ್ದಾರೆ.

ಕರ್ನಾಟಕದಲ್ಲಿ ಬಡಾ ಗೌಡ, ಚೋಟಾ ಗೌಡ, ಪೋತಾಗೌಡ ಇದ್ದಾರೆ; ಕುಟುಂಬ ರಾಜಕೀಯದಿಂದ ಸಂವಿಧಾನಕ್ಕೆ ಅಪಾಯ: ಸಿಟಿ ರವಿ
ಸಿ.ಟಿ ರವಿ
TV9 Web
| Edited By: |

Updated on: Nov 26, 2021 | 9:22 PM

Share

ದೆಹಲಿ: ಭಾರತ ದೇಶದಲ್ಲಿ ವಂಶವಾರು ಆಧಾರದಲ್ಲಿ ರಾಜಕೀಯ ನಡೀತಿದೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಕುಟುಂಬ ರಾಜಕೀಯ ಇದೆ. ಕಾಶ್ಮೀರದಲ್ಲಿ ಫಾರೂಕ್ ಅಬ್ದುಲ್ಲಾ ಕುಟುಂಬ ರಾಜಕಾರಣ ಇದೆ. ಮಹಾರಾಷ್ಟ್ರದಲ್ಲಿ ಪವಾರ್ ಕುಟುಂಬದಿಂದ ರಾಜಕಾರಣ ಇದೆ. ಕರ್ನಾಟಕದಲ್ಲಿ ಬಡಾ ಗೌಡ, ಚೋಟಾ ಗೌಡ, ಪೋತಾಗೌಡ ಇದ್ದಾರೆ. ಈ ಕುಟುಂಬಗಳ ರಾಜಕೀಯದಿಂದ ಸಂವಿಧಾನಕ್ಕೆ ಅಪಾಯ ಎಂದು ದೆಹಲಿಯಲ್ಲಿ ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿಕೆ ನೀಡಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಂಬೇಡ್ಕರ್ ಆಶಯ ಈಡೇರಿಸುತ್ತಿದ್ದಾರೆ. ಕಡೆಯ ವ್ಯಕ್ತಿಯನ್ನು ಸಹ ಬಲಿಷ್ಠ ಮಾಡುವ ಪ್ರಯತ್ನದಲ್ಲಿದ್ದಾರೆ ಎಂದು ಸಂವಿಧಾನ ಸಮರ್ಪಣಾ ದಿನಾಚರಣೆಯಲ್ಲಿ ಸಿ.ಟಿ. ರವಿ ಹೇಳಿಕೆ ನೀಡಿದ್ದಾರೆ. ಎಸ್​ಸಿ- ಎಸ್​ಟಿ ಮೋರ್ಚಾ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಭಾಷಣ ಮಾಡಿದ್ದಾರೆ. ಭಾಷಣದಲ್ಲಿ ಕುಟುಂಬ ರಾಜಕಾರಣ ವಿಚಾರವನ್ನು ಗುರಿಯಾಗಿಸಿ ಅವರು ಮಾತನಾಡಿದ್ದಾರೆ.

ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ದೇಶದಲ್ಲಿ ವಂಶವಾರು ಆಧಾರದಲ್ಲಿ ರಾಜಕೀಯ ನಡೆಯುತ್ತಿದೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಕುಟುಂಬ ರಾಜಕೀಯ ನಡೆಯುತ್ತಿದೆ ಎಂದು ವಿಪಕ್ಷಗಳ ವಿರುದ್ಧ ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ಬಡಾ ಗೌಡ, ಚೋಟಾ ಗೌಡ, ಪೋತಾ ಗೌಡ ರಾಜಕೀಯ ನಡೆಯುತ್ತಿದೆ ಎಂದು ದೇವೆಗೌಡರ ಕುಟುಂಬವನ್ನು ಸಿ.ಟಿ ರವಿ ಪರೋಕ್ಷವಾಗಿ ಟಾರ್ಗೆಟ್ ಮಾಡಿದ್ದಾರೆ.

ಪರಿವಾರಕ್ಕಾಗಿ ಸಂವಿಧಾನ ಇಲ್ಲ, ಈ ಕುಟುಂಬಗಳಿಂದ ರಾಜಕೀಯದಿಂದ ಸಂವಿಧಾನ ಅಪಾಯದಲ್ಲಿದೆ. ದೇಶವನ್ನು ಒಂದುಗೂಡಿಸುವ ಕೆಲಸ ಅಂಬೇಡ್ಕರ್ ಮಾಡಿದರು, ಸರ್ದಾರ್ ವಲ್ಲಭಭಾಯಿ ಪಟೇಲ್ ಮಾಡಿದರು. ಸಮಾನ ಅವಕಾಶಕ್ಕಾಗಿ ಸಂವಿಧಾನವಿದೆ. ನರೇಂದ್ರ ಮೋದಿ, ಅಂಬೇಡ್ಕರ್ ಆಶಯ ಈಡೇರಿಸುತ್ತಿದ್ದಾರೆ. ಕಡೆಯ ವ್ಯಕ್ತಿಯನ್ನು ಬಲಿಷ್ಠ ಮಾಡುವ ಪ್ರಯತ್ನದಲ್ಲಿದ್ದಾರೆ. ದೇಶವನ್ನು ಅಖಂಡವಾಗಿ ಇಡಲು ಸಂವಿಧಾನ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Constitution Day 2021: ಸಂವಿಧಾನ ದಿನದ ವಿಶೇಷ ಹಾಗೂ ಆಚರಣೆಯ ಉದ್ದೇಶವೇನು?; ಇಲ್ಲಿದೆ ಮಾಹಿತಿ

ಇದನ್ನೂ ಓದಿ: Constitution Day 2021: ಸಂವಿಧಾನ ಥೀಮ್​ನೊಂದಿಗೆ ವಕೀಲರ ವಿಶಿಷ್ಟ ವೆಡ್ಡಿಂಗ್ ಕಾರ್ಡ್​​; ಅಪರೂಪದ ಲಗ್ನ ಪತ್ರಿಕೆ ಇಲ್ಲಿದೆ ನೋಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ