AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಬಡಾ ಗೌಡ, ಚೋಟಾ ಗೌಡ, ಪೋತಾಗೌಡ ಇದ್ದಾರೆ; ಕುಟುಂಬ ರಾಜಕೀಯದಿಂದ ಸಂವಿಧಾನಕ್ಕೆ ಅಪಾಯ: ಸಿಟಿ ರವಿ

Constitution Day 2021: ಎಸ್​ಸಿ- ಎಸ್​ಟಿ ಮೋರ್ಚಾ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಭಾಷಣ ಮಾಡಿದ್ದಾರೆ. ಭಾಷಣದಲ್ಲಿ ಕುಟುಂಬ ರಾಜಕಾರಣ ವಿಚಾರವನ್ನು ಗುರಿಯಾಗಿಸಿ ಅವರು ಮಾತನಾಡಿದ್ದಾರೆ.

ಕರ್ನಾಟಕದಲ್ಲಿ ಬಡಾ ಗೌಡ, ಚೋಟಾ ಗೌಡ, ಪೋತಾಗೌಡ ಇದ್ದಾರೆ; ಕುಟುಂಬ ರಾಜಕೀಯದಿಂದ ಸಂವಿಧಾನಕ್ಕೆ ಅಪಾಯ: ಸಿಟಿ ರವಿ
ಸಿ.ಟಿ ರವಿ
TV9 Web
| Edited By: |

Updated on: Nov 26, 2021 | 9:22 PM

Share

ದೆಹಲಿ: ಭಾರತ ದೇಶದಲ್ಲಿ ವಂಶವಾರು ಆಧಾರದಲ್ಲಿ ರಾಜಕೀಯ ನಡೀತಿದೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಕುಟುಂಬ ರಾಜಕೀಯ ಇದೆ. ಕಾಶ್ಮೀರದಲ್ಲಿ ಫಾರೂಕ್ ಅಬ್ದುಲ್ಲಾ ಕುಟುಂಬ ರಾಜಕಾರಣ ಇದೆ. ಮಹಾರಾಷ್ಟ್ರದಲ್ಲಿ ಪವಾರ್ ಕುಟುಂಬದಿಂದ ರಾಜಕಾರಣ ಇದೆ. ಕರ್ನಾಟಕದಲ್ಲಿ ಬಡಾ ಗೌಡ, ಚೋಟಾ ಗೌಡ, ಪೋತಾಗೌಡ ಇದ್ದಾರೆ. ಈ ಕುಟುಂಬಗಳ ರಾಜಕೀಯದಿಂದ ಸಂವಿಧಾನಕ್ಕೆ ಅಪಾಯ ಎಂದು ದೆಹಲಿಯಲ್ಲಿ ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿಕೆ ನೀಡಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಂಬೇಡ್ಕರ್ ಆಶಯ ಈಡೇರಿಸುತ್ತಿದ್ದಾರೆ. ಕಡೆಯ ವ್ಯಕ್ತಿಯನ್ನು ಸಹ ಬಲಿಷ್ಠ ಮಾಡುವ ಪ್ರಯತ್ನದಲ್ಲಿದ್ದಾರೆ ಎಂದು ಸಂವಿಧಾನ ಸಮರ್ಪಣಾ ದಿನಾಚರಣೆಯಲ್ಲಿ ಸಿ.ಟಿ. ರವಿ ಹೇಳಿಕೆ ನೀಡಿದ್ದಾರೆ. ಎಸ್​ಸಿ- ಎಸ್​ಟಿ ಮೋರ್ಚಾ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಭಾಷಣ ಮಾಡಿದ್ದಾರೆ. ಭಾಷಣದಲ್ಲಿ ಕುಟುಂಬ ರಾಜಕಾರಣ ವಿಚಾರವನ್ನು ಗುರಿಯಾಗಿಸಿ ಅವರು ಮಾತನಾಡಿದ್ದಾರೆ.

ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ದೇಶದಲ್ಲಿ ವಂಶವಾರು ಆಧಾರದಲ್ಲಿ ರಾಜಕೀಯ ನಡೆಯುತ್ತಿದೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಕುಟುಂಬ ರಾಜಕೀಯ ನಡೆಯುತ್ತಿದೆ ಎಂದು ವಿಪಕ್ಷಗಳ ವಿರುದ್ಧ ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ಬಡಾ ಗೌಡ, ಚೋಟಾ ಗೌಡ, ಪೋತಾ ಗೌಡ ರಾಜಕೀಯ ನಡೆಯುತ್ತಿದೆ ಎಂದು ದೇವೆಗೌಡರ ಕುಟುಂಬವನ್ನು ಸಿ.ಟಿ ರವಿ ಪರೋಕ್ಷವಾಗಿ ಟಾರ್ಗೆಟ್ ಮಾಡಿದ್ದಾರೆ.

ಪರಿವಾರಕ್ಕಾಗಿ ಸಂವಿಧಾನ ಇಲ್ಲ, ಈ ಕುಟುಂಬಗಳಿಂದ ರಾಜಕೀಯದಿಂದ ಸಂವಿಧಾನ ಅಪಾಯದಲ್ಲಿದೆ. ದೇಶವನ್ನು ಒಂದುಗೂಡಿಸುವ ಕೆಲಸ ಅಂಬೇಡ್ಕರ್ ಮಾಡಿದರು, ಸರ್ದಾರ್ ವಲ್ಲಭಭಾಯಿ ಪಟೇಲ್ ಮಾಡಿದರು. ಸಮಾನ ಅವಕಾಶಕ್ಕಾಗಿ ಸಂವಿಧಾನವಿದೆ. ನರೇಂದ್ರ ಮೋದಿ, ಅಂಬೇಡ್ಕರ್ ಆಶಯ ಈಡೇರಿಸುತ್ತಿದ್ದಾರೆ. ಕಡೆಯ ವ್ಯಕ್ತಿಯನ್ನು ಬಲಿಷ್ಠ ಮಾಡುವ ಪ್ರಯತ್ನದಲ್ಲಿದ್ದಾರೆ. ದೇಶವನ್ನು ಅಖಂಡವಾಗಿ ಇಡಲು ಸಂವಿಧಾನ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Constitution Day 2021: ಸಂವಿಧಾನ ದಿನದ ವಿಶೇಷ ಹಾಗೂ ಆಚರಣೆಯ ಉದ್ದೇಶವೇನು?; ಇಲ್ಲಿದೆ ಮಾಹಿತಿ

ಇದನ್ನೂ ಓದಿ: Constitution Day 2021: ಸಂವಿಧಾನ ಥೀಮ್​ನೊಂದಿಗೆ ವಕೀಲರ ವಿಶಿಷ್ಟ ವೆಡ್ಡಿಂಗ್ ಕಾರ್ಡ್​​; ಅಪರೂಪದ ಲಗ್ನ ಪತ್ರಿಕೆ ಇಲ್ಲಿದೆ ನೋಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ