AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Khushbu Sundar: ಮೋದಿ ಅಂದರೆ ಭ್ರಷ್ಟಾಚಾರ ಎಂದು ಟ್ವೀಟ್ ಮಾಡಿದ್ದ ಖುಷ್ಬೂ ಸುಂದರ್; ಈ ಬಗ್ಗೆ ಏನಂತೀರಿ ಎಂದು ಕೇಳಿದ ಕಾಂಗ್ರೆಸ್

ಮೋದಿ ಎಲ್ಲೆಡೆ ಇದ್ದಾರೆ, ಆದರೆ ಇದು ಏನು? ಮೋದಿ ಸರ್ ನೇಮ್ ಭ್ರಷ್ಟಾಚಾರದೊಂದಿಗೆ ತಳುಕು ಹಾಕಿದೆ" ಎಂದು ಅವರು ಟ್ವೀಟ್ ಮಾಡಿದ್ದರು.ಇಲ್ಲಿಯೂ ಮೋದಿ,ಅಲ್ಲಿಯೂ ಮೋದಿ ಎಲ್ಲೆ ನೋಡಿದರೂ ಮೋದಿ. ಆದರೆ ಇದು ಏನು?

Khushbu Sundar: ಮೋದಿ ಅಂದರೆ ಭ್ರಷ್ಟಾಚಾರ ಎಂದು ಟ್ವೀಟ್ ಮಾಡಿದ್ದ ಖುಷ್ಬೂ ಸುಂದರ್; ಈ ಬಗ್ಗೆ ಏನಂತೀರಿ ಎಂದು ಕೇಳಿದ ಕಾಂಗ್ರೆಸ್
ಖುಷ್ಬೂ ಸುಂದರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Mar 25, 2023 | 6:01 PM

Share

ಮುಖ್ಯಾಂಶಗಳು

  • 2018 ರಲ್ಲಿ ಮಾಡಿದ ಟ್ವೀಟ್ ಈಗ ಮತ್ತೆ ಚರ್ಚೆಯಾಗುತ್ತಿದೆ
  • ಪ್ರತಿ ಮೋದಿ ಮುಂದೆ ಭ್ರಷ್ಟಾಚಾರ ಸರ್​​ನೇಮ್ ಇದೆ ಎಂದಿದ್ದ ಖುಷ್ಬೂ
  • ನಾನು ಕಾಂಗ್ರೆಸ್ ಪಕ್ಷದಲ್ಲಿದ್ದಾಗ ಪೋಸ್ಟ್ ಮಾಡಿದ 'ಮೋದಿ' ಟ್ವೀಟ್‌ಗೆ ನಾನು ನಾಚಿಕೆಪಡುವುದಿಲ್ಲ ಎಂದ ಬಿಜೆಪಿ ನಾಯಕಿ

ದೆಹಲಿ: ಬಿಜೆಪಿ ನಾಯಕಿ ಖುಷ್ಬೂ ಸುಂದರ್ (Khushbu Sundar) ಅವರು 2018 ರಲ್ಲಿ ಮಾಡಿದ ಟ್ವೀಟ್ ಈಗ ಮತ್ತೆ ಚರ್ಚೆಯಾಗುತ್ತಿದೆ. ಆಗ ಕಾಂಗ್ರೆಸ್ ಸದಸ್ಯರಾಗಿದ್ದ ಖುಷ್ಬೂ ಸುಂದರ್ ಅವರು ಮೋದಿ ಎಂಬುದರ ಅರ್ಥವನ್ನು ಭ್ರಷ್ಟಾಚಾರ ಎಂದು ಬದಲಾಯಿಸಬೇಕು ಎಂದು ಹೇಳಿದ್ದರು. “ಮೋದಿ ಎಲ್ಲೆಡೆ ಇದ್ದಾರೆ, ಆದರೆ ಇದು ಏನು? ಮೋದಿ ಸರ್​​ನೇಮ್ (Modi Surname) ಭ್ರಷ್ಟಾಚಾರದೊಂದಿಗೆ ತಳುಕು ಹಾಕಿದೆ” ಎಂದು ಅವರು ಟ್ವೀಟ್ ಮಾಡಿದ್ದರು.ಇಲ್ಲಿಯೂ ಮೋದಿ,ಅಲ್ಲಿಯೂ ಮೋದಿ ಎಲ್ಲೆ ನೋಡಿದರೂ ಮೋದಿ. ಆದರೆ ಇದು ಏನು? ಪ್ರತಿ ಮೋದಿ ಮುಂದೆ ಭ್ರಷ್ಟಾಚಾರ ಸರ್​​ನೇಮ್ ಇದೆ. ಹಾಗಾದರೆ ಅರ್ಥ ಮಾಡಿಕೊಳ್ಳಿ. ಮೋದಿ ಅಂದರೆ ಭ್ರಷ್ಟಾಚಾರ (Corruption). ಮೋದಿಯ ಅರ್ಥವನ್ನು ಭ್ರಷ್ಟಾಚಾರ ಎಂದು ಬದಲಿಸೋಣ.ಅದೇ ಸರಿ ಹೊಂದುತ್ತದೆ. ನೀರವ್, ಲಲಿತ್, ನಮೋ ಅಂದರೆ ಭ್ರಷ್ಟಾಚಾರ ಎಂದು ಖುಷ್ಬೂ ಹಿಂದಿಯಲ್ಲಿ ಟ್ವೀಟ್ ಮಾಡಿದ್ದರು.

ತಮ್ಮ ಹಳೆಯ ಟ್ವೀಟ್‌ಗಳನ್ನು ಹೊರತರಲು ಕಾಂಗ್ರೆಸ್ ಹತಾಶವಾಗಿದೆ ಎಂದು ಖುಷ್ಬೂ ಸುಂದರ್ ಹೇಳಿದ್ದಾರೆ. “ಕಾಂಗ್ರೆಸ್ ಪಕ್ಷವು ನನ್ನ ಹಳೆಯ ಟ್ವೀಟ್ ಅನ್ನು ತರಾಟೆಗೆ ತೆಗೆದುಕೊಂಡಿದ್ದು, ಅವರು ಎಷ್ಟು ಹತಾಶರಾಗಿದ್ದಾರೆಂದು ತೋರಿಸುತ್ತದೆ” ಎಂದು ಅವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು.

“ನಾನು ಕಾಂಗ್ರೆಸ್ ಪಕ್ಷದಲ್ಲಿದ್ದಾಗ ಪೋಸ್ಟ್ ಮಾಡಿದ ‘ಮೋದಿ’ ಟ್ವೀಟ್‌ಗೆ ನಾನು ನಾಚಿಕೆಪಡುವುದಿಲ್ಲ. ನಾನು ನಾಯಕನನ್ನು ಅನುಸರಿಸುತ್ತಿದ್ದೆ ಮತ್ತು ಪಕ್ಷದ ಭಾಷೆಯಲ್ಲಿ ಮಾತನಾಡುತ್ತಿದ್ದೆ” ಎಂದು ಅವರು ಹೇಳಿದರು.

ನಟಿ ಮತ್ತು ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಸದಸ್ಯರೂ ಆಗಿರುವ ಖುಷ್ಬೂ ಸುಂದರ್ ಅವರು ಕಾಂಗ್ರೆಸ್ ತೊರೆದ ನಂತರ 2020 ರಲ್ಲಿ ಬಿಜೆಪಿಗೆ ಸೇರಿದರು. ಗುಜರಾತ್‌ನ ನ್ಯಾಯಾಲಯವು ಕಾಂಗ್ರೆಸ್‌ನ ನಾಯಕ ರಾಹುಲ್ ಗಾಂಧಿ ಅವರನ್ನು ಮಾನನಷ್ಟ ಮೊಕದ್ದಮೆಯಲ್ಲಿ ದೋಷಿ ಎಂದು ಗುರುವಾರ ತೀರ್ಪು ನೀಡಿದೆ. ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು ಮತ್ತು ಅದರ ಪರಿಣಾಮವಾಗಿ, ಮರುದಿನ ಅವರನ್ನು ಸಂಸದರಾಗಿ ಅನರ್ಹಗೊಳಿಸಲಾಯಿತು. ಈ ತೀರ್ಪಿನ ವಿರುದ್ಧ ಅವರು ಇನ್ನೂ ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಬೇಕಾಗಿದೆ.

ಇದನ್ನೂ ಓದಿ:Assembly Polls: ಸಿದ್ದರಾಮಯ್ಯ ಅಂತಿಮವಾಗಿ ವರುಣಾದಿಂದಲೇ ಸ್ಪರ್ಧಿಸೋದು ಅಂತ ಮೊದಲೇ ಹೇಳಿದ್ದೆವು: ಸಿಟಿ ರವಿ

ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲಿಸಿರುವ ಗುಜರಾತ್ ಸಚಿವ ಪೂರ್ಣೇಶ್ ಮೋದಿ, ಖುಷ್ಬೂ ಸುಂದರ್ ವಿರುದ್ಧ ಕೇಸ್ ಹಾಕುತ್ತಾರಾ ಎಂದು ಕಾಂಗ್ರೆಸ್ ಬೆಂಬಲಿಗರು ಟ್ವೀಟ್ ನ ಸ್ಕ್ರೀನ್ ಶಾಟ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. 2019 ರ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಎಲ್ಲಾ ಕಳ್ಳರ ಸರ್ ನೇಮ್ ಮೋದಿ ಎಂದು ಯಾಕಿದೆ? ಎಂದು ಹೇಳಿದ್ದು ಇದರ ವಿರುದ್ಧ ಮಾನನಷ್ಟ ಮೊಕದ್ದಮೆಗಳನ್ನು ದಾಖಲಿಸಲಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:00 pm, Sat, 25 March 23

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?