ಫಲಾನುಭವಿಗಳಿಗೆ ತಲುಪದ ಮಾಸಾಶನ: ಪಿಂಚಣಿ ನೀಡಲೂ ಹಣವಿಲ್ಲದ ಶೋಚನೀಯ ಪರಿಸ್ಥಿತಿಯಲ್ಲಿದೆ ಸರ್ಕಾರ; ಆರ್​ ಅಶೋಕ್​

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರದಲ್ಲಿ ಫಲಾನುಭವಿಗಳಿಗೆ ಮಾಸಾಶನ ತಲುಪುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ವಿರೋಧ ಪಕ್ಷದ ನಾಯಕ ಆರ್​. ಅಶೋಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಟ್ವೀಟ್​ ಮೂಲಕ ವಾಗ್ದಾಳಿ ಮಾಡಿದ್ದಾರೆ.

ಫಲಾನುಭವಿಗಳಿಗೆ ತಲುಪದ ಮಾಸಾಶನ: ಪಿಂಚಣಿ ನೀಡಲೂ ಹಣವಿಲ್ಲದ ಶೋಚನೀಯ ಪರಿಸ್ಥಿತಿಯಲ್ಲಿದೆ ಸರ್ಕಾರ; ಆರ್​ ಅಶೋಕ್​
ಆರ್ ಅಶೋಕ್​
Edited By: ವಿವೇಕ ಬಿರಾದಾರ

Updated on: Feb 20, 2024 | 11:21 AM

ಬೆಂಗಳೂರು, ಫೆಬ್ರವರಿ 20: ಸಾಮಾಜಿಕ ಭದ್ರತಾ ಯೋಜನೆ ಅಡಿಯಲ್ಲಿ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ವಿಧವಾ ವೇತನ, ವಿಕಲಚೇನರಿಗೆ ರಾಜ್ಯ ಸರ್ಕಾರ ಮಾಸಾಶನ ನೀಡುತ್ತಿದೆ. ಆದರೆ ಕಳೆದ ಐದಾರು ತಿಂಗಳಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ತವರು ಕ್ಷೇತ್ರದಲ್ಲೇ ಕಳೆದ ಐದಾರು ತಿಂಗಳುಗಳಿಂದ ಫಲಾನುಭವಿಗಳಿಗೆ ಮಾಸಾಶನ ತಲುಪಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ವಿರೋಧ ಪಕ್ಷದ ನಾಯಕ ಆರ್​. ಅಶೋಕ್ (R Ashok)​ ಮುಖ್ಯಮಂತ್ರಿಗಳ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

“ರಾಜ್ಯದ ಬೊಕ್ಕಸ ಬರಿದಾಗಿಲ್ಲ, ರಾಜ್ಯದ ಖಜಾನೆ ಖಾಲಿಯಾಗಿಲ್ಲ ಎಂದು ತಮ್ಮ ಕಿತ್ತೋಗಿರುವ ಸರ್ಕಾರಕ್ಕೆ ತೇಪೆ ಹಾಕುವ ಕೆಲಸ ಮಾಡುತೀರಲ್ಲ ಸಿಎಂ ಸಿದ್ದರಾಮಯ್ಯನವರೇ, ಕಳೆದ ಆರು ತಿಂಗಳಿಂದ ವೃದ್ಧಾಪ್ಯ, ವಿಧವಾ, ವಿಕಲಚೇತನರ ಮಾಸಾಶನ ನೀಡಿಲ್ಲವೇಕೆ? ಭ್ರಷ್ಟಾಚಾರ, ಕಮಿಷನ್, ಅವೈಜ್ಞಾನಿಕ ನೀತಿಗಳಿಂದ ರಾಜ್ಯದ ತೆರಿಗೆ ಹಣವನ್ನ ಲೂಟಿ ಮಾಡಿರುವ ರಾಜ್ಯ ಸರ್ಕಾರ ಸಾಮಾಜಿಕ ಭದ್ರತಾ ಪಿಂಚಣಿ ನೀಡಲೂ ಹಣವಿಲ್ಲದ ಶೋಚನೀಯ ಪರಿಸ್ಥಿತಿಯಲ್ಲಿದೆ” ಎಂದು ಟ್ವೀಟ್​ ಮಾಡುವ ಮೂಲಕ ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us