AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗೇಶ್ವರ್ ಬಿಜೆಪಿ ಕಟ್ಟಾಳು ಅಲ್ಲ, ಸಿದ್ಧಾಂತದಿಂದ ಬಂದವರಲ್ಲ: ಸಿಪಿವೈ ವಿರುದ್ಧ ಅಶೋಕ್ ವಾಗ್ದಾಳಿ

ಮಾಜಿ ಸಚಿವ ಸಿಪಿ ಯೋಗೇಶ್ವರ್​ ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ. ಇಂದು (ಅ.24) ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸೇರ್ಪಡೆಯಾದರು. ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆಗೆ ವಿರೋಧ ಪಕ್ಷದ ನಾಯಕ ಆರ್​ ಅಶೋಕ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯೋಗೇಶ್ವರ್ ಬಿಜೆಪಿ ಕಟ್ಟಾಳು ಅಲ್ಲ, ಸಿದ್ಧಾಂತದಿಂದ ಬಂದವರಲ್ಲ: ಸಿಪಿವೈ ವಿರುದ್ಧ ಅಶೋಕ್ ವಾಗ್ದಾಳಿ
ಆರ್​​ ಅಶೋಕ್​
TV9 Web
| Edited By: |

Updated on:Oct 23, 2024 | 12:34 PM

Share

ಬೆಂಗಳೂರು, ಅಕ್ಟೋಬರ್​ 23: ಮಾಜಿ ಸಚಿವ ಸಿಪಿ ಯೋಗೇಶ್ವರ್​ (CP Yogeshwar) ಬಿಜೆಪಿ (BJP) ತೊರೆದು ಕಾಂಗ್ರೆಸ್ (Congress)​ ಸೇರ್ಪಡೆಯಾಗಿದ್ದಾರೆ. ಸಿಪಿ ಯೋಗೇಶ್ವರ್ ಮೊದಲಿಂದಲೂ ಎಲ್ಲ ಪಕ್ಷಗಳ ಜೊತೆ ಲಿಂಕ್ ಇಟ್ಟಿಕೊಂಡವರು. ಕಾಟಾಚಾರಕ್ಕೆ ನಮ್ಮೊಂದಿಗೆ ಇದ್ದರು ಅನ್ನಿಸುತ್ತೆ ಎಂದು ವಿರೋಧ ಪಕ್ಷದ ನಾಯಕ ಆರ್​ ಅಶೋಕ್ (R Ashok)​ ವಾಗ್ದಾಳಿ ಮಾಡಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸಿಪಿ ಯೋಗೇಶ್ವರ್ ಬಿಜೆಪಿಯ ಕಟ್ಟಾಳು ಅಲ್ಲ ಎಂದರು.

ಸಿಪಿ ಯೋಗೇಶ್ವರ್​ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ಮಾಡಿದ್ವಿ. ನಮ್ಮ ನಂಬಿಕೆಗೆ ಅಪಚಾರ ಮಾಡಿ ಹೋಗಿ ಹೋಗಿದ್ದಾರೆ. ಕಾಂಗ್ರೆಸ್​ಗೆ ಪಕ್ಷ ಸೇರಿ ಸಿಪಿ ಯೋಗೇಶ್ವರ್ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ. ಅವರು ಕಾಂಗ್ರೆಸ್​ ಸೇರಿದ್ದು, ನಮ್ಮ ಪಕ್ಷದ ಮೇಲೆ ಯಾವುದೇ ರೀತಿಯ ಪರಿಣಾಮ ಆಗುವುದಿಲ್ಲ. ಪಕ್ಷ ತೊರೆದು ಬಹಳಷ್ಟು ಜನ ಹೋಗಿದ್ದಾರೆ. ಲಕ್ಷಣ್ ಸವದಿ ಕಾಂಗ್ರೆಸ್​ ಸೇರಿದ್ದಾರೆ. ಅವರನ್ನು ಮಂತ್ರಿ ಮಾಡಿದ್ದಾರಾ? ಜಗದೀಶ್ ಶೆಟ್ಟರ್ ಅವರು ಹೋಗದಿದ್ದರು, ಯಾವ ಸ್ಥಾನ ಕೊಟ್ಟಿದ್ದರು? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಸಿಪಿ ಯೋಗೇಶ್ವರ್​​ ಕಾಂಗ್ರೆಸ್​ ಸೇರ್ಪಡೆ: ಸಿಎಂ, ಡಿಕೆ ಬ್ರದರ್ಸ್​ ತಂತ್ರ ಸಕ್ಸಸ್!

ಸಿಪಿ ಯೋಗೇಶ್ವರ್​ ಸೈಕಲ್ ಗುರುತು, ಬಿಎಸ್​ಪಿ ಎಲ್ಲ ಮುಗಿಸಿಕೊಂಡು ನಮ್ಮ ಪಕ್ಷಕ್ಕೆ ಬಂದವರು. ಅವರು ಸೈದ್ಧಾಂತಿಕವಾಗಿ ನಮ್ಮ ಪಕ್ಷದಲ್ಲಿ ಇದ್ದವರಲ್ಲ. ಚನ್ನಪಟ್ಟಣದಲ್ಲಿ ಬಿಜೆಪಿ ವೋಟ್ ಅಲ್ಲೇ ಇರುತ್ತೆ. ನಾನು, ಪ್ರಹ್ಲಾದ್ ಜೋಶಿ ಅವರು ಜೆಡಿಎಸ್ ಟಿಕೆಟ್ ಅಂತ ಸಿಪಿ ಯೋಗೇಶ್ವರ್​ ಅವರಿಗೆ ಹೇಳಿದ್ವಿ. ಹೆಚ್​ಡಿ ಕುಮಾರಸ್ವಾಮಿ ಅವರು ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸಿ ಎಂದು ಹೇಳಿದ್ದರು. ಆದರೆ, ಸಿಪಿ ಯೋಗೇಶ್ವರ್​ ಒಪ್ಪಲಿಲ್ಲ ಎಂದು ತಿಳಿಸಿದರು.

ಇವರು ಈಗ ಕಾಂಗ್ರೆಸ್​ಗೆ ಹೋಗಿದ್ದಾರೆ, ಇದು ಪಕ್ಷಕ್ಕೆ ದ್ರೋಹ ಬಗೆದಂತೆ. ರಾಜ್ಯದ ಎಲ್ಲ ಬಿಜೆಪಿ ನಾಯಕರು ಅವರ ಪರವಾಗಿ ಇದ್ದೆವುಟಿಕೆಟ್ ಕೊಡಿಸುವ ಸಲುವಾಗಿ ಪ್ರಯತ್ನ ಮಾಡಿದ್ವಿ. ಬಿಜೆಪಿ ಚಿಹ್ನೆ, ಜೆಡಿಎಸ್ ಚಿಹ್ನೆ ಅಂತಲ್ಲ. ಎನ್​ಡಿಎ ಗೆಲ್ಲುವುದು ಮುಖ್ಯ. ಎನ್‌ಡಿಎನಲ್ಲಿ ಅವರಿಗೆ ಸೀನಿಯಾರಿಟಿ ಇತ್ತು. ಈಗ ಹೋಗಿ ಲಾಸ್ಟ್​​ನಲ್ಲಿ ಕೂತಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ಎನ್​ಡಿಎಗೆ ಮುಖಭಂಗ ಮಾಡುವ ಉದ್ದೇಶ ಕಾಂಗ್ರೆಸ್​ಗೆ ಇದೆ. ಜೆಡಿಎಸ್​ನವರು ಯಾರಿಗೆ ಟಿಕೆಟ್ ಕೊಟ್ಟರು ನಾವು ಗೆಲ್ಲಿಸುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:30 pm, Wed, 23 October 24

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ