AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲವೂ ಸುಖಾಂತ್ಯವಾಗಿದೆ, ಮುಂದಿನ ನಡೆಯ ಬಗ್ಗೆ ಸೋಮಣ್ಣ ಕೊಟ್ಟ ಸುಳಿವೇನು?

ನಾನು ರಾಜ್ಯಸಭೆ ಸ್ಥಾನ ಕೇಳಿದ್ದೇನೆ. ಜತೆಗೆ ನನಗೆ 3 ಕಷ್ಟದ ಲೋಕಸಭಾ ಕ್ಷೇತ್ರ ಕೊಡಿ. ಯಾವುದೇ 3 ಕ್ಷೇತ್ರಗಳನ್ನು ಕೊಟ್ಟರೂ ಗಲ್ಲಿಸಿಕೊಂಡು ಬರುತ್ತೇನೆ. 28 ಕ್ಷೇತ್ರಗಳ ಪೈಕಿ 3 ಕ್ಷೇತ್ರ ವಹಿಸಿದರೆ ಕೆಲಸ ಮಾಡುತ್ತೇನೆ. ಪಕ್ಷದಲ್ಲಿ ನನ್ನ ಶ್ರಮ ಇದೆ ಎಂದು ಸೋಮಣ್ಣ ಹೇಳಿದ್ದಾರೆ.

ಎಲ್ಲವೂ ಸುಖಾಂತ್ಯವಾಗಿದೆ, ಮುಂದಿನ ನಡೆಯ ಬಗ್ಗೆ ಸೋಮಣ್ಣ ಕೊಟ್ಟ ಸುಳಿವೇನು?
ವಿ ಸೋಮಣ್ಣ
TV9 Web
| Edited By: |

Updated on: Jan 15, 2024 | 11:47 AM

Share

ಬೆಂಗಳೂರು, ಜನವರಿ 15: ಬಿಜೆಪಿ ಹೈಕಮಾಂಡ್ ಜತೆ ಶನಿವಾರವಷ್ಟೇ ಮಾತುಕತೆ ನಡೆಸಿ ಬಂದಿರುವ ಹಿರಿಯ ನಾಯಕ ವಿ ಸೋಮಣ್ಣ (V Somanna), ಇದೀಗ ಭೇಟಿ ಬಗ್ಗೆ ಮಾಹಿತಿ ನೀಡಿದ್ದು ಎಲ್ಲವೂ ಸುಖಾಂತ್ಯವಾಗಿದೆ ಎಂದು ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಮಾಡಿದ ವಿಚಾರವಾಗಿ ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಸೋಮಣ್ಣ, ಒಳ್ಳೇತನಕ್ಕೆ, ಒಳ್ಳೇ ನಡವಳಿಕೆಗೆ ಸಹಾಯ ಆಗುತ್ತದೆ. ಅದಕ್ಕೆ ದೆಹಲಿ ಭೇಟಿಯೇ ಒಂದು ಉದಾಹರಣೆ. ಅಮಿತ್​ ಶಾ ನಡವಳಿಕೆ, ಅವರ ತೀರ್ಮಾನ, ಭಾವನೆ ಸಕಾರಾತ್ಮಕವಾಗಿಯೇ ಇತ್ತು. ಎಲ್ಲವೂ ಸುಖಾಂತ್ಯವಾಗಿದೆ ಎಂದು ಹೇಳಿದ್ದಾರೆ.

ಕೆಲಸ ಮಾಡಿ ಬಳಿಕ ಮುಂದಿನದ್ದನ್ನ ಚರ್ಚೆ ಮಾಡುತ್ತೇವೆ. ನಾನು ರಾಜ್ಯಸಭೆ ಸ್ಥಾನ ಕೇಳಿದ್ದೇನೆ. ಜತೆಗೆ ನನಗೆ 3 ಕಷ್ಟದ ಲೋಕಸಭಾ ಕ್ಷೇತ್ರ ಕೊಡಿ. ಯಾವುದೇ 3 ಕ್ಷೇತ್ರಗಳನ್ನು ಕೊಟ್ಟರೂ ಗಲ್ಲಿಸಿಕೊಂಡು ಬರುತ್ತೇನೆ. 28 ಕ್ಷೇತ್ರಗಳ ಪೈಕಿ 3 ಕ್ಷೇತ್ರ ವಹಿಸಿದರೆ ಕೆಲಸ ಮಾಡುತ್ತೇನೆ. ಪಕ್ಷದಲ್ಲಿ ನನ್ನ ಶ್ರಮ ಇದೆ ಎಂದು ಸೋಮಣ್ಣ ಹೇಳಿದ್ದಾರೆ.

ಬಿಜೆಪಿ ಉತ್ತರ ಕನ್ನಡ ಸಂಸದ ಅನಂತಕುಮಾರ್​ ಹೆಗಡೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಸಂಸದ​ ಹೆಗಡೆ ಸುಸಂಸ್ಕೃತ ಕುಟುಂಬದಿಂದ ಬಂದವರು. ನಮ್ಮ ನಡವಳಿಕೆಗಳು ವಿಭಿನ್ನವಾಗಿರಬೇಕು. ಸಿಎಂ ಸಿದ್ದರಾಮಯ್ಯ ಹೇಗಾದರೂ ಮಾತಾಡಲಿ, ನಮಗೆ ಬೇಡ. ಅನಂತಕುಮಾರ್ ಹೆಗಡೆ ಸಂಸದರಾಗಿದ್ದಾರೆ ಎಂದಷ್ಟೇ ಹೇಳಿದ್ದಾರೆ.

ಇದನ್ನೂ ಓದಿ: ಅಮಿತ್ ಶಾ ಭೇಟಿಯಾದ ವಿ ಸೋಮಣ್ಣ: ಏನೇನು ನಡೆಯಿತು ಚರ್ಚೆ?

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅನಿವಾರ್ಯವಾಗಿ ಒಪ್ಪಿಕೊಂಡು ಸೋತ ನಂತರ ಸೋಮಣ್ಣ ಪಕ್ಷದ ರಾಜ್ಯ ನಾಯಕರ ವಿರುದ್ಧ ಸಿಡಿದೆದ್ದಿದ್ದರು. ಹಲವು ನಾಯಕರ ವಿರುದ್ಧ ಬಹಿರಂಗ ಟೀಕೆಗಳನ್ನೂ ಮಾಡಿದ್ದರು. ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂಬ ವದಂತಿಗಳೂ ಹಬ್ಬಿದ್ದವು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಅವರು ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಿರುವುದು ಕುತೂಹಲ ಮೂಡಿಸಿತ್ತು. ಇದೀಗ ಅವರು ಆ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್