AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಮುಖಂಡ ಯೋಗೀಶ್ ಗೌಡ ಬರ್ಬರ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಧಾರವಾಡ ಎಂಟ್ರಿಗೆ ಅನುಮತಿ ನಿರಾಕರಿಸಿದ ಸುಪ್ರೀಂ

ಬಿಜೆಪಿ ಮುಖಂಡ ಯೋಗೀಶ್ ಗೌಡ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶ ಅನುಮತಿಯನ್ನು ಸುಪ್ರೀಂಕೋರ್ಟ್​ ನಿರಾಕರಿಸಿದೆ.

ಬಿಜೆಪಿ ಮುಖಂಡ ಯೋಗೀಶ್ ಗೌಡ ಬರ್ಬರ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಧಾರವಾಡ ಎಂಟ್ರಿಗೆ ಅನುಮತಿ ನಿರಾಕರಿಸಿದ ಸುಪ್ರೀಂ
ವಿನಯ್ ಕುಲಕರ್ಣಿImage Credit source: economictimes
ಗಂಗಾಧರ​ ಬ. ಸಾಬೋಜಿ
|

Updated on:Mar 29, 2023 | 11:06 PM

Share

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಬರ್ಬರ ಕೊಲೆ ಪ್ರಕರಣಕ್ಕೆ (Yogesh Gowda’s brutal murder case) ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶ ಅನುಮತಿಯನ್ನು ಸುಪ್ರೀಂಕೋರ್ಟ್​ ನಿರಾಕರಿಸಿದೆ. ಧಾರವಾಡ ಭೇಟಿ ನಿರ್ಬಂಧ ಷರತ್ತು ಸಡಿಲಿಕೆ ಕೋರಿ ಅರ್ಜಿ ಸಲ್ಲಿಸಿದ್ದರು. 1200 ಹಸುಗಳಿವೆ, 2400 ಮೇಕೆಗಳ ನಿರ್ವಹಣೆ ಮಾಡಬೇಕು. ಪತ್ನಿ, ಮಕ್ಕಳಿಂದ ಸೂಕ್ತ ನಿರ್ವಹಣೆ ಸಾಧ್ಯವಿಲ್ಲ. ವಿಧಾನಸಭೆ ಚುನಾವಣೆ ಇರುವುದರಿಂದ ಕಾರ್ಯಕರ್ತರು ಬೇಸರಗೊಂಡಿದ್ದಾರೆ. ಹೀಗಾಗಿ ಧಾರವಾಡ ಭೇಟಿಗೆ ಅನುಮತಿ ನೀಡುವಂತೆ ಕೋರಿದ್ದರು. ಆದರೆ ಜಾಮೀನು ಷರತ್ತು ಸಡಿಲಿಕೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ. ಜಾಮೀನು ನೀಡುವ ವೇಳೆ ವಾರಕ್ಕೆರಡು ಬಾರಿ ಸಿಬಿಐ ಕಚೇರಿಗೆ ಹಾಜರಾಗಬೇಕೆಂಬ ಷರತ್ತು ಸಡಿಲಿಸಲೂ ಮನವಿ ಮಾಡಿದ್ದು, ವಾರಕ್ಕೊಮ್ಮೆ ಮಾತ್ರ ಸಿಬಿಐ ಕಚೇರಿಗೆ ಹಾಜರಾಗಲು ಸುಪ್ರೀಂ ಸೂಚನೆ ನೀಡಿದೆ. ಧಾರವಾಡದಲ್ಲೇ ಚುನಾವಣೆಗೆ ಸ್ಪರ್ಧಿಸಲು ವಿನಯ್ ಕುಲಕರ್ಣಿ ಕಸರತ್ತು ನಡೆಸಿದ್ದಾರೆ ಎನ್ನಲಾಗುತ್ತಿದೆ.

ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ: ವಿನಯ್ ಕುಲಕರ್ಣಿ

ಮಾರ್ಚ್​ 20ರಂದು ಬೆಳಗಾವಿಯಲ್ಲಿ ಮಾತನಾಡಿದ್ದ ವಿನಯ್ ಕುಲಕರ್ಣಿ, ಧಾರವಾಡಕ್ಕೆ ಹೋಗುವುದಕ್ಕೆ ನನಗೆ ಕೋರ್ಟ್ ನಿರ್ಬಂಧ ಇದೆ. ನಾನು ಶಿಗ್ಗಾಂವಿಯಲ್ಲಿ ಸ್ಪರ್ಧಿಸುವ ಬಗ್ಗೆ ಪಕ್ಷ ತೀರ್ಮಾನಿಸಲಿದೆ. ಶಿಗ್ಗಾಂವಿ ಒಂದೇ ಅಲ್ಲ, ನನಗೆ ಇನ್ನೂ ನಾಲ್ಕೈದು ಕ್ಷೇತ್ರಗಳಿವೆ. ದೇಶದಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆಯಾಗಿರುವುದಕ್ಕೆ ನಾನು ಸಾಕ್ಷಿ. ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ ಎಂದಿದ್ದರು.

ಇದನ್ನೂ ಓದಿ: ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ವಿರುದ್ಧ ಅಖಾಡಕ್ಕಿಳಿಯುವ ಬಗ್ಗೆ ವಿನಯ್​ ಕುಲಕರ್ಣಿ ಹೇಳಿದ್ದಿಷ್ಟು…

ನಾನು ಟೆರರಿಸ್ಟ್ ಅಲ್ಲ

ನಾನು ಶಿಗ್ಗಾಂವಿ ಹೋಗುವುದು ನನ್ನ ತೀರ್ಮಾನ ಅಲ್ಲ. ಇದು ಹೈಕಮಾಂಡ್​ ತೀರ್ಮಾನ. ಯಾಕಂದ್ರೆ ನಾನು ಧಾರವಾಡಕ್ಕೆ ಹೋಗೋಕೆ ಆಗುತ್ತಿಲ್ಲ. ನಾನು ಟೆರರಿಸ್ಟ್ ಅಲ್ಲ. ನಾನು ಕಳೆದ 20 ವರ್ಷದಿಂದ ರಾಜಕಾರಣದಲ್ಲಿ ಇದ್ದೇನೆ. ನಾಲ್ಕೈದು ಕ್ಷೇತ್ರದಲ್ಲಿ ನಿಂತರೂ ನಾನು ಗೆಲ್ಲುತ್ತೇನೆ. ಪಕ್ಷ ನನಗೆ ನಿಲ್ಲಬೇಡ ಅಂದ್ರೆ ನಾನು ತ್ಯಾಗ ಮಾಡುತ್ತೇನೆ. ನೋಡುತ್ತೀರಿ ಇನ್ನೂ ನನ್ನ ವಿರುದ್ದ ಷಡ್ಯಂತ್ರ ಆರಂಭವಾಗತ್ತೆ ಎಂದು ಹೇಳಿದ್ದರು.

ಸಿದ್ದರಾಮಯ್ಯ ಲೆವೆಲ್​ಗೆ ರಾಜ್ಯದಲ್ಲಿ ಯಾರೂ ಸರಿಸಾಟಿ ಇಲ್ಲ

ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿದ ವಿನಯ್ ಕುಲಕರ್ಣಿ, ಸಿದ್ದರಾಮಯ್ಯ ಲೆವೆಲ್​ಗೆ ರಾಜ್ಯದಲ್ಲಿ ಯಾರೂ ಸರಿಸಾಟಿ ಇಲ್ಲ. ಸಿದ್ದರಾಮಯ್ಯರನ್ನು ಕೇವಲ ಒಂದು ಕ್ಷೇತ್ರಕ್ಕೆ ಸೀಮಿತ ಮಾಡಬೇಡಿ. ನಾವು ಕೂಡ ಸಿದ್ದರಾಮಯ್ಯರನ್ನು ಕ್ಷೇತ್ರಕ್ಕೆ ಆಹ್ವಾನಿಸಿದ್ದೇವೆ. ಯಾವ ಸಿಎಂ ನೀಡದ ಕೊಡುಗೆಯನ್ನು ಸಿದ್ದರಾಮಯ್ಯ ‌ಕೊಟ್ಟಿದ್ದಾರೆ. ಸಿದ್ದರಾಮಯ್ಯ ‌ಕೊಟ್ಟ ಕೊಡುಗೆ ಯಾರಿಂದಲೂ ಕೊಡಲು ಸಾಧ್ಯವಿಲ್ಲ. ಈ ಹಿಂದೆ ಯಾರೂ ಕೊಟ್ಟಿಲ್ಲ ಮುಂದೆ ಯಾರೂ ಕೊಡುವುದಿಲ್ಲ ಎಂದು -ವಿನಯ್ ಕುಲಕರ್ಣಿ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದರು.

ಇದನ್ನೂ ಓದಿ: ಬಿಜೆಪಿಯಲ್ಲಿ ಕೂಡ ಯಾರೂ 2 ಕ್ಷೇತ್ರದಿಂದ ಸ್ಪರ್ಧಿಸಲ್ಲ: ಕಮಲ ನಾಯಕರಿಗೆ ಪ್ರಹ್ಲಾದ್​ ಜೋಶಿ ಶಾಕ್​​

ಶಿಗ್ಗಾಂವಿ ಟಿಕೆಟ್​​ ಕೇಳಿಲ್ಲ, ಧಾರವಾಡ ಟಿಕೆಟ್​​​ ಕೇಳಿದ್ದೇನೆ

ಶಿಗ್ಗಾಂವಿ ಕ್ಷೇತ್ರದಲ್ಲಿ ವಿನಯ್ ಕುಲಕರ್ಣಿ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿ ಶಿಗ್ಗಾಂವಿ ಟಿಕೆಟ್​​ ಕೇಳಿಲ್ಲ, ಧಾರವಾಡ ಟಿಕೆಟ್​​​ ಕೇಳಿದ್ದೇನೆ ಎಂದು ಇತ್ತೀಚೆಗೆ ಕುಲಕರ್ಣಿ ತಿಳಿಸಿದ್ದರು. ನಮ್ಮ ಪಕ್ಷದ ಮುಖಂಡರು ಏನೂ ಮಾಡ್ತಾರೋ ನೋಡೋಣ. ಪಕ್ಷದ ನಿರ್ಣಯ ನೋಡೋಣ, 7-8 ಜನ ಆಕಾಂಕ್ಷಿಗಳಿದ್ದಾರೆ. ಪಾಪ ಅವರ ಮನಸ್ಸಿಗೆ ನಾನು ನೋವು ಮಾಡಲು ಸಿದ್ಧವಿಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:05 pm, Wed, 29 March 23

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು