AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ವಿಭೂತಿಕೆರೆಯಲ್ಲಿ ಬರ ಅಧ್ಯಯನದ ವೇಳೆ ಜಗಳ ಮಾಡಿಕೊಂಡ ಬಿಜೆಪಿ ನಾಯಕರು

ರಾಮನಗರ ತಾಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ಬರ ಅಧ್ಯಯನದ ವೇಳೆ ಬಿಜೆಪಿ ಎಂಎಲ್​ಸಿ ಆ.ದೇವೇಗೌಡ ಹಾಗೂ ಚನ್ನಪಟ್ಟಣ ತಾಲೂಕು ಘಟಕದ ಅಧ್ಯಕ್ಷ ಜಯರಾಂ ನಡುವೆ ವೈಯಕ್ತಿಯ ವಿಚಾರವಾಗಿ ಪರಸ್ಪರ ಜಗಳ ಮಾಡಿಕೊಂಡಿದ್ದಾರೆ. ಮಾಜಿ ಸಚಿವ ಕೋಟಾ ಶ್ರೀನಿವಾಸಪೂಜಾರಿ ಎದುರೇ ನಾಯಕರು ಬೈದಾಡಿಕೊಂಡಿದ್ದಾರೆ.

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Nov 09, 2023 | 6:29 PM

Share

ರಾಮನಗರ, ನ.9: ತಾಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ಬರ ಅಧ್ಯಯನದ ವೇಳೆ ಬಿಜೆಪಿ ಎಂಎಲ್​ಸಿ ಆ.ದೇವೇಗೌಡ (A.Devegowda) ಹಾಗೂ ಚನ್ನಪಟ್ಟಣ ತಾಲೂಕು ಘಟಕದ ಅಧ್ಯಕ್ಷ ಕಲಗೆರೆ ಜಯರಾಂ (Kalagere Jayaram) ನಡುವೆ ವೈಯಕ್ತಿಯ ವಿಚಾರವಾಗಿ ಪರಸ್ಪರ ಜಗಳ ಮಾಡಿಕೊಂಡಿದ್ದಾರೆ. ಮಾಜಿ ಸಚಿವ ಕೋಟ ಶ್ರೀನಿವಾಸಪೂಜಾರಿ (Kota Srinivas Poojary) ಎದುರೇ ನಾಯಕರು ಬೈದಾಡಿಕೊಂಡಿದ್ದಾರೆ.

ವೈಯಕ್ತಿಕ ವಿಚಾರವಾಗಿ ಆ.ದೇವೇಗೌಡ ಮತ್ತ ಜಯರಾಂ ನಡುವೆ ಗಲಾಟೆ ನಡೆದಿದೆ. ಈ ವೇಳೆ ದೇವೇಗೌಡ ಅವರು ಜಯರಾಂ ಅವರ ಕಪಾಲಕ್ಕೆ ಬಾರಿಸಿದ್ದಾರೆ. ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ಹಾಗೂ ಸ್ಥಳೀಯ ಬಿಜೆಪಿ ನಾಯಕರು ಜಗಳ ಬಿಡಿಸಿದರು. ಅಲ್ಲದೆ, ದೇವೇಗೌಡರ ವಿರುದ್ಧ ಪಕ್ಷಕ್ಕೆ ದೂರು ಕೊಡಲು ಜಯರಾಂ ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್​ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ ಜಯರಾಂ, ನಾನು ಅವರಿಗಾಗಿ ದುಡಿಮೆ ಮಾಡಿದ್ದೇನೆ. ಅವರ ಚುನಾವಣೆಯಲ್ಲಿ ಅವರಿಗೆ ಮತಹಾಕಿಸಿದ್ದೇನೆ. ಆದರೆ ಅವರು ಇವತ್ತು ನನ್ನ ಕಪಾಲಕ್ಕೆ ಹೊಡೆದರು. ಎಂಎಲ್​ಸಿ ಚುನಾವಣೆ ವಿಚಾರವಾಗಿ ಮಾತನಾಡುತ್ತ ಹೊಡೆದರು. ಇದು ನನಗೆ ಬಹಳ ದುಃಖವಾಗಿದೆ ಎಂದರು.

ನಾನು ಈ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರಿಗೆ ದೂರು ಕೊಡುತ್ತೇನೆ. ನಾನು 30 ವರ್ಷದಿಂದ ಪಕ್ಷಕ್ಕೆ ದುಡಿಮೆ ಮಾಡಿದ್ದೇನೆ. ಆದರೆ ಇಂತಹ ಕೃತ್ಯ ಮುಂದೆ ಯಾರಿಗೂ ಆಗಬಾರದು. ಅವರಿಗೆ ಪಕ್ಷದಲ್ಲಿ ಯಾವ ರೀತಿ ತೊಂದರೆ ಆಗುತ್ತಿದೆಯೋ ಗೊತ್ತಿಲ್ಲ. ಈ ರೀತಿ ನಡೆದುಕೊಂಡದ್ದು ತಪ್ಪು ಹೇಳಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?