AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Politics: ಮತ್ತೊಂದು ಅವಕಾಶದ ನಿರೀಕ್ಷೆಯಲ್ಲಿದ್ದ ಹಿರಿಯರಲ್ಲಿ ತಳಮಳ ಮೂಡಿಸಿದ ಯಡಿಯೂರಪ್ಪ ನಿರ್ಧಾರ

ಯಡಿಯೂರಪ್ಪ ಅವರಿಗೆ ವಯಸ್ಸು ಪರಿಗಣಿಸದೆ 2023ರಲ್ಲಿ ಟಿಕೆಟ್‌ ನೀಡಿದ್ದರೆ ಅದನ್ನೇ ಪ್ರಸ್ತಾಪಿಸಿ ತಾವೂ ಟಿಕೆಟ್​ ಗಿಟ್ಟಿಸಿಕೊಳ್ಳಬಹುದು ಎಂದು ಹಲವರು ಆಸೆ ಇರಿಸಿಕೊಂಡಿದ್ದರು.

Politics: ಮತ್ತೊಂದು ಅವಕಾಶದ ನಿರೀಕ್ಷೆಯಲ್ಲಿದ್ದ ಹಿರಿಯರಲ್ಲಿ ತಳಮಳ ಮೂಡಿಸಿದ ಯಡಿಯೂರಪ್ಪ ನಿರ್ಧಾರ
ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜಯೇಂದ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 23, 2022 | 7:40 AM

ಬೆಂಗಳೂರು: ಶಿಕಾರಿಪುರ ಕ್ಷೇತ್ರದಲ್ಲಿ (Shikaripura Constituency) ಮುಂದಿನ ಚುನಾವಣೆಯಲ್ಲಿ ತಮ್ಮ ಪುತ್ರ ಬಿ.ವೈ.ವಿಜಯೇಂದ್ರ (BY Vijayendra) ಸ್ಪರ್ಧಿಸುತ್ತಾರೆ ಎನ್ನುವ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರ ಹೇಳಿಕೆಯು ಹಲವು ಹಿರಿಯ ನಾಯಕರಿಗೆ ಟಿಕೆಟ್ ಕೈತಪ್ಪುವ ಭೀತಿ ಉಂಟು ಮಾಡಿದೆ. 2023ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ವಯಸ್ಸಿನ ಕಾರಣದಿಂದ ಟಿಕೆಟ್ ಸಿಗುವುದು ಅನುಮಾನ ಎಂಬ ಮಾತುಗಳು ಕೇಳಿಬರುತ್ತಿದ್ದ ಹಲವು ನಾಯಕರು ಇದೀಗ ನಿರಾಶೆಗೆ ಜಾರಿದ್ದಾರೆ.

ಯಡಿಯೂರಪ್ಪ ಅವರಿಗೆ ವಯಸ್ಸು ಪರಿಗಣಿಸದೆ 2023ರಲ್ಲಿ ಟಿಕೆಟ್‌ ನೀಡಿದ್ದರೆ ಅದನ್ನೇ ಪ್ರಸ್ತಾಪಿಸಿ ತಾವೂ ಟಿಕೆಟ್​ ಗಿಟ್ಟಿಸಿಕೊಳ್ಳಬಹುದು ಎಂದು ಹಲವರು ಆಸೆ ಇರಿಸಿಕೊಂಡಿದ್ದರು. ಒಂದು ವೇಳೆ ಬಿ.ಎಸ್.ಯಡಿಯೂರಪ್ಪ ಸ್ಪರ್ಧಿಸದಿದ್ದರೆ ತಮಗೂ ಟಿಕೆಟ್ ಸಿಗುವುದು ಅನುಮಾನ ಎಂದು ಹಲವರು ಸ್ವತಃ ವಿಶ್ಲೇಷಿಸಿಕೊಳ್ಳುತ್ತಿದ್ದಾರೆ. ಯಡಿಯೂರಪ್ಪ ಅವರ ನಿರ್ಧಾರದಿಂದ 2023ಕ್ಕೆ 75 ವರ್ಷ ದಾಟುವ ಹಿರಿಯ ನಾಯಕರಿಗೆ ಟಿಕೆಟ್ ಸಿಗುವ ಸಾಧ್ಯತೆಯ ಬಗ್ಗೆ ಆತಂಕ ಉಂಟಾಗಿದೆ.

ರಾಜಕಾರಣಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಯಲ್ಲಿ ಆಂತರಿಕ ಆಕ್ಷೇಪ

2023ರ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರವನ್ನು ವಿಜಯೇಂದ್ರಗೆ ಬಿಟ್ಟುಕೊಡುವುದಾಗಿ ಯಡಿಯೂರಪ್ಪ ನೀಡಿರುವ ಹೇಳಿಕೆಗೆ ಬಿಜೆಪಿ ರಾಜ್ಯ ಘಟಕದ ನಾಯಕರಲ್ಲಿ ಆಂತರಿಕ ಆಕ್ಷೇಪ ವ್ಯಕ್ತವಾಗಿದೆ. ಬಿಜೆಪಿಯಲ್ಲಿ ಪ್ರತ್ಯೇಕವಾಗಿ ಅಭ್ಯರ್ಥಿ ಘೋಷಣೆ ಮಾಡುವ ವ್ಯವಸ್ಥೆಯೇ ಇಲ್ಲ. ಹೀಗಿರುವಾಗ ಯಡಿಯೂರಪ್ಪ ಹೇಗೆ ಶಿಕಾರಿಪುರ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಯಡಿಯೂರಪ್ಪ ಏಕಾಏಕಿ ತಮ್ಮ ಮಗನ ಹೆಸರು ಘೋಷಿಸಿದರು. ಇತರ ನಾಯಕರೂ ಇದೇ ಪದ್ಧತಿ ಅನುಸರಿದರೆ ಪಕ್ಷದ ಶಿಸ್ತಿನ ಪಾಡು ಏನಾಗಬೇಕು. ಈ ರೀತಿ ಏಕಾಏಕಿ ಯಡಿಯೂರಪ್ಪ ಪುತ್ರನ ಹೆಸರು ಘೋಷಣೆ ಮಾಡಿದ್ದು ಸರಿಯಲ್ಲ ಎಂದು ಹಲವು ನಾಯಕರು ಪಕ್ಷದ ಒಳಗೆ ಆಂತರಿಕವಾಗಿ ಅಸಮಾಧಾನ ವ್ಯಕ್ತಪಡಿಸಿ ಆಕ್ಷೇಪಿಸಿದ್ದಾರೆ. ಯಡಿಯೂರಪ್ಪ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಹಲವು ಹಿರಿಯ ನಾಯಕರು ಸಹ ಈವರೆಗೆ ಈ ಕುರಿತು ಬಹಿರಂಗ ಹೇಳಿಕೆಗಳನ್ನು ನೀಡಿಲ್ಲ.

Published On - 7:34 am, Sat, 23 July 22

ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!