AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖತಮ್, ಟಾಟಾ ವಿಡಿಯೊ ಮೂಲಕ ರಾಹುಲ್ ಗಾಂಧಿಯನ್ನು ಲೇವಡಿ ಮಾಡಿದ ಬಿಜೆಪಿ, ಬರೀ ಟ್ರೋಲ್ ಮಾಡುವುದೇ ನಿಮ್ಮ ಕೆಲಸ ಎಂದ ಕಾಂಗ್ರೆಸ್

ಈ ವಿಡಿಯೋ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನೇತ್, ಇಡೀ ಪಕ್ಷವೇ ‘ಚೀಪ್ ಟ್ರೋಲ್’ ಆಗಿದೆ. ಭಾರತ್ ಜೋಡೋ ಯಾತ್ರೆ  ಹುಟ್ಟಿಸಿರುವ ಭಯದಿಂದ ಬಿಜೆಪಿ ನಾಲ್ಕಾಣೆಯ ಟ್ರೋಲ್ ಆಗಿಬಿಟ್ಟಿದೆ.

ಖತಮ್, ಟಾಟಾ ವಿಡಿಯೊ ಮೂಲಕ ರಾಹುಲ್ ಗಾಂಧಿಯನ್ನು ಲೇವಡಿ ಮಾಡಿದ ಬಿಜೆಪಿ, ಬರೀ ಟ್ರೋಲ್ ಮಾಡುವುದೇ ನಿಮ್ಮ ಕೆಲಸ ಎಂದ ಕಾಂಗ್ರೆಸ್
ಬಿಜೆಪಿ ಟ್ರೋಲ್ ವಿಡಿಯೊ- ರಾಹುಲ್ ಗಾಂಧಿಯವರ ಭಾರತ್ ಜೋಡೊ ಯಾತ್ರೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Oct 16, 2022 | 2:21 PM

ದೆಹಲಿ: ಹಲವಾರು ಬಿಜೆಪಿ (BJP) ನಾಯಕರು ಮತ್ತು ವಕ್ತಾರರು ಭಾನುವಾರ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿಯನ್ನು (Rahul Gandhi) ಲೇವಡಿ ಮಾಡುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಬಿಜೆಪಿಯ ಅಧಿಕೃತ ಟ್ವಿಟರ್‌ ಹ್ಯಾಂಡಲ್ ನಲ್ಲಿ ಈ ವಿಡಿಯೊ ಮೊದಲು ಟ್ವೀಟ್ ಮಾಡಲಾಗಿದೆ. ರಾಹುಲ್ ಗಾಂಧಿ ಮತ್ತು ಪಕ್ಷದ ಭಾರತ್ ಜೋಡೋ ಯಾತ್ರೆಯನ್ನು ಲೇವಡಿ ಮಾಡಿರುವ ಈ ವಿಡಿಯೊದಲ್ಲಿ ಗೋವಾದಲ್ಲಿನ ಶಾಸಕರ ಪಕ್ಷಾಂತರಸೆ, ಗುಲಾಂ ನಬಿ ಆಜಾದ್ ಅವರ ರಾಜೀನಾಮೆ, ರಾಜಸ್ಥಾನ ಬಂಡಾಯದಸೇರಿದಂತೆ ಕಾಂಗ್ರೆಸ್ ಎದುರಿಸಿದ ಇತ್ತೀಚಿನ ಸಮಸ್ಯೆಗಳನ್ನು ವಿಡಿಯೊದಲ್ಲಿ ಸೇರಿಸಲಾಗೆ. ಈ ವಿಡಂಬನೆ ವಿಡಿಯೊದಲ್ಲಿ ಕೊನೆಗೆ ಸೋನಿಯಾ ಗಾಂಧಿ ಅವರನ್ನೂ ತೋರಿಸಲಾಗಿದೆ. “ಅಮ್ಮಾ, ಕೆಟ್ಟ ದಿನಗಳು ಏಕೆ ಕೊನೆಗೊಳ್ಳುವುದಿಲ್ಲ? ಖತಮ್…ಟಾಟಾ…ಗುಡ್ ಬೈ ,” ಎಂಬ ಶೀರ್ಷಿಕೆಯೊಂದಿಗೆ ಬಿಜೆಪಿ ಈ ವಿಡಿಯೊ ಶೇರ್ ಮಾಡಿದೆ.

ಕಾಂಗ್ರೆಸ್ ಪ್ರತಿಕ್ರಿಯೆ

ಈ ವಿಡಿಯೋ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನೇತ್, ಇಡೀ ಪಕ್ಷವೇ ‘ಚೀಪ್ ಟ್ರೋಲ್’ ಆಗಿದೆ. ಭಾರತ್ ಜೋಡೋ ಯಾತ್ರೆ  ಹುಟ್ಟಿಸಿರುವ ಭಯದಿಂದ ಬಿಜೆಪಿ ನಾಲ್ಕಾಣೆಯ ಟ್ರೋಲ್ ಆಗಿಬಿಟ್ಟಿದೆ.”ಆದರೆ ಭಯ ಒಳ್ಳೆಯದು. ನಿರುದ್ಯೋಗ ಮತ್ತು ಬೆಲೆ ಏರಿಕೆಗೆ ಪರಿಹಾರವನ್ನು ಕಂಡುಹಿಡಿಯಲು ಅವರು ಇಷ್ಟೊಂದು ಪ್ರಯತ್ನ ಮಾಡಿದ್ದರೆ ಒಳ್ಳೆಯದಿತ್ತು ಎಂದು  ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯು ಇಲ್ಲಿಯವರೆಗೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹಲವಾರು ವಿಷಯಗಳ ಮುಖಾಮುಖಿಯಾಗುವಂತೆ ಮಾಡಿದೆ. ಪ್ರಮುಖ ಬಿಜೆಪಿ ನಾಯಕರು ಕಾಂಗ್ರೆಸ್ ಅನೇಕ ರಾಜೀನಾಮೆಗಳಿಗೆ ಸಾಕ್ಷಿಯಾದ ಸಮಯದಲ್ಲಿ ಯಾತ್ರೆಯ ಅಗತ್ಯವನ್ನು ಪ್ರಶ್ನಿಸಿದ್ದಾರೆ. ಯಾತ್ರೆಯ ಯಶಸ್ಸಿನಿಂದ ಗಮನ ಬೇರೆಡೆ ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ.

ಭಾರತ್ ಜೋಡೋ ಯಾತ್ರೆ ಇದೀಗ ಕರ್ನಾಟಕದಲ್ಲಿದ್ದು, ಶನಿವಾರ 1,000 ಕಿ.ಮೀ ಮೈಲುಗಲ್ಲನ್ನು ದಾಟಿದೆ.ಈ ಮೈಲುಗಲ್ಲು ಪೂರ್ಣಗೊಳಿಸಿದ ಸಂದರ್ಭದಲ್ಲಿ ಮಾತನಾಡಿದ ರಾಹುಲ್ ಗಾಂಧಿ, 1999 ರಲ್ಲಿ ಸೋನಿಯಾ ಗಾಂಧಿ ಅವರು ಬಳ್ಳಾರಿಯಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದರಿಂದ ತಮ್ಮ ಕುಟುಂಬಕ್ಕೆ ಕರ್ನಾಟಕದೊಂದಿಗೆ ಸುದೀರ್ಘ ಸಂಬಂಧವಿದೆ, ನಮ್ಮ ಕುಟುಂಬ ಮತ್ತು ಬಳ್ಳಾರಿ ನಡುವೆ ಸುದೀರ್ಘ ಸಂಬಂಧವಿದೆ. .ನನ್ನ ತಾಯಿ ಇಲ್ಲಿಂದ ಚುನಾವಣೆಗೆ ಸ್ಪರ್ಧಿಸಿ ಬಳ್ಳಾರಿ ಜನತೆಯ ಮನಃಪೂರ್ವಕ ಬೆಂಬಲದಿಂದ ಆಯ್ಕೆಯಾದರು, ನನ್ನ ಅಜ್ಜಿ ಇಂದಿರಾಗಾಂಧಿ ಚಿಕ್ಕಮಗಳೂರಿನಿಂದ ಸ್ಪರ್ಧಿಸಿದ್ದರು. ಹಾಗಾಗಿ ಅದನ್ನು ಮರೆಯಲು ಸಾಧ್ಯವಿಲ್ಲ ಎಂದಿದ್ದಾರೆ.

Published On - 2:15 pm, Sun, 16 October 22

ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!