AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಸಿಡಿ ಚುನಾವಣೆಗೆ ಕೇಂದ್ರ ಅಡ್ಡಿ, ನ್ಯಾಯಾಲಯದ ಮೊರೆ ಹೋಗುವುದಾಗಿ ಹೇಳಿದ ಕೇಜ್ರಿವಾಲ್

ಕೇಂದ್ರ ಸರ್ಕಾರ ಎಂಸಿಡಿ ಚುನಾವಣೆಗಳನ್ನು ಅನುಮತಿಸದೆ ಬಲ, ಗೂಂಡಾಗಿರಿಯನ್ನು ಬಳಸುತ್ತಿದೆ. ಎಂಸಿಡಿ ಚುನಾವಣೆಗಳನ್ನು ಸಮಯಕ್ಕೆ ನಡೆಸಲು ನಾವು ನ್ಯಾಯಾಲಯವನ್ನು ಸಂಪರ್ಕಿಸಬೇಕಾಗುತ್ತದೆ.

ಎಂಸಿಡಿ ಚುನಾವಣೆಗೆ ಕೇಂದ್ರ ಅಡ್ಡಿ, ನ್ಯಾಯಾಲಯದ ಮೊರೆ ಹೋಗುವುದಾಗಿ ಹೇಳಿದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್
TV9 Web
| Edited By: |

Updated on:Jul 05, 2022 | 7:13 PM

Share

ದೆಹಲಿ: ಬಿಜೆಪಿ (BJP) ನೇತೃತ್ವದಕೇಂದ್ರ ಸರ್ಕಾರ ಬಲ ಮತ್ತು ಗೂಂಡಾಗಿರಿ ಮಾಡಿ ದೆಹಲಿಯಲ್ಲಿ ಎಂಸಿಡಿ ಚುನಾವಣೆ (MCD elections) ನಡೆಯದಂತೆ ಅಡ್ಡಿಡಿಸುತ್ತಿದೆ. ಹಾಗಾಗಿ ನಾವು ನ್ಯಾಯಾಲಯದ ಮೊರೆ ಹೋಗಿ ತಕ್ಕ ಸಮಯಕ್ಕೆ ಚುನಾವಣೆ ನಡೆಸುವಂತೆ ಕೇಳಿಕೊಳ್ಳುತ್ತೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಹೇಳಿದ್ದಾರೆ. ದೆಹಲಿ ವಿಧಾನಸಭೆಯಲ್ಲಿ ಮುಂಗಾರು ಅಧಿವೇಶನದ ಎರಡನೇ ದಿನ ಮಾತನಾಡಿದ ಕೇಜ್ರಿವಾಲ್, ಈ ದೇಶಕ್ಕೆ ಮಾತ್ರವಲ್ಲದೆ ಇಡೀ ಜಗತ್ತಿಗೆ ಮೊಹಲ್ಲಾ ಕ್ಲಿನಿಕ್ ಪರಿಕಲ್ಪನೆಯನ್ನು ನೀಡಿದ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿದಾಗ ಅದು ದೇಶಕ್ಕೆ ಕರಾಳ ದಿನ ಎಂದು ನಾನು ಭಾವಿಸುತ್ತೇನೆ. ಅವರನ್ನು ಜೈಲಿಗೆ ಹಾಕಿದರೂ ಜನರು  ಅವರು ಪ್ರಾಮಾಣಿಕ ಎಂದು ಹೇಳುತ್ತಾರೆ ಎಂದಿದ್ದಾರೆ. ಎಂಸಿಡಿ ಚುನಾವಣೆ ಬಗ್ಗೆ ಮಾತನಾಡಿದ ಅವರು  ದೆಹಲಿಯನ್ನು ಸಂಪೂರ್ಣವಾಗಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡುವ ಬಗ್ಗೆ ಚಿಂತನೆ ನಡೆಯುತ್ತಿದೆ. ಹೀಗಾದರೆ ಯಾವುದೇ ಚುನಾವಣೆ ಇರಲ್ಲ.  ಕೇಂದ್ರ ಸರ್ಕಾರ ಎಂಸಿಡಿ ಚುನಾವಣೆಗಳನ್ನು ಅನುಮತಿಸದೆ ಬಲ, ಗೂಂಡಾಗಿರಿಯನ್ನು ಬಳಸುತ್ತಿದೆ. ಎಂಸಿಡಿ ಚುನಾವಣೆಗಳನ್ನು ಸಮಯಕ್ಕೆ ನಡೆಸಲು ನಾವು ನ್ಯಾಯಾಲಯವನ್ನು ಸಂಪರ್ಕಿಸಬೇಕಾಗುತ್ತದೆ. ನಾವು ಅದನ್ನು ಮಾಡುತ್ತೇವೆ ಕೇಜ್ರಿವಾಲ್ ಚರ್ಚೆಯ ಸಂದರ್ಭದಲ್ಲಿ ಹೇಳಿದರು.

ತಮ್ಮ ಭಾಷಣದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್ ಮೂರು ಎಂಸಿಡಿಗಳ ಏಕೀಕರಣದ ಪ್ರಕ್ರಿಯೆ ಸಮಯದಲ್ಲಿ ಕೇಂದ್ರವು ಡಿಲಿಮಿಟೇಶನ್ ಆಯೋಗವನ್ನು ರಚಿಸಲಾಗುವುದು ಎಂದು ಭರವಸೆ ನೀಡಿದೆ, ಅದರ ನಂತರ ಚುನಾವಣೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಎಂಸಿಡಿ ಏಕೀಕರಣವಾಗಿ ಒಂದೂವರೆ ತಿಂಗಳಾಯಿತು. ಆವರು ಡಿಲಿಮಿಟೇಶನ್ ಆಯೋಗವನ್ನು ರಚಿಸಿಲ್ಲ. ಅವರಿಗೆ ಚುನಾವಣೆ ನಡೆಯುವುದು ಬೇಕಾಗಿಲ್ಲ. ಇದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾದುದು. ಅಗತ್ಯವಿದ್ದರೆ ನಾವು ನ್ಯಾಯಾಲಯದ ಮೆಟ್ಟಿಲೇರುತ್ತೇವೆ ಎಂದು ಅವರು ಹೇಳಿದ್ದಾರೆ.

Published On - 7:12 pm, Tue, 5 July 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?