AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಸ್ಟ್​ಮಾರ್ಟಮ್ ಆದ್ಮೇಲೆ ಇನ್ನೇನ್ ಮಾತಾಡ್ಲಿ: ವಿಧಾನ ಪರಿಷತ್ ಸೋಲಿನ ಅಸಮಾಧಾನ ಹೊರಹಾಕಿದ ಕವಟಗಿಮಠ

ಎಲ್ಲ ವಿಷಯವನ್ನೂ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಅತಿಯಾದ ಆತ್ಮವಿಶ್ವಾಸವೂ ಸೋಲಿಗೆ ಕಾರಣ ಎಂದರು.

ಪೋಸ್ಟ್​ಮಾರ್ಟಮ್ ಆದ್ಮೇಲೆ ಇನ್ನೇನ್ ಮಾತಾಡ್ಲಿ: ವಿಧಾನ ಪರಿಷತ್ ಸೋಲಿನ ಅಸಮಾಧಾನ ಹೊರಹಾಕಿದ ಕವಟಗಿಮಠ
ಮಹಾಂತೇಶ ಕವಟಗಿಮಠ ಮತ್ತು ನಳಿನ್ ಕುಮಾರ್ ಕಟೀಲ್
TV9 Web
| Edited By: |

Updated on: Dec 20, 2021 | 9:24 PM

Share

ಬೆಳಗಾವಿ: ಕರ್ನಾಟಕದಲ್ಲಿ ಈಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಸೋಲಿನ ಕುರಿತು ಸೋಮವಾರ ಆತ್ಮಾವಲೋಕನ ನಡೆಯಿತು. ಖಾಸಗಿ ಹೋಟೆಲ್​ನಲ್ಲಿ ನಡೆದ ಅವಲೋಕನ ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬಿಜೆಪಿ ಪರಾಜಿತ ಅಭ್ಯರ್ಥಿ ಮಹಾಂತೇಶ ಕವಟಗಿಮಠ, ಎಲ್ಲ ಪೋಸ್ಟ್​ಮಾರ್ಟಮ್ ಆದಮೇಲೆ ಇನ್ನೇನು ಮಾತಾಡಬೇಕು ಎಂದು ಅವರು ನೇರವಾಗಿ ತಮ್ಮ ಸೋಲಿನ ಕುರಿತ ಬೇಸರ ಹೊರಹಾಕಿದರು. ಎಲ್ಲಿ ತಪ್ಪಾಗಿದೆ ಎಂಬ ಬಗ್ಗೆ ರಾಜ್ಯಾಧ್ಯಕ್ಷರು ವಿವರ ಪಡೆದಿದ್ದಾರೆ. ಸಭೆಯಲ್ಲಿ ಯಾರ ಬಗ್ಗೆಯೂ ಶಿಸ್ತುಕ್ರಮ ಜರುಗಿಸುವ ಚರ್ಚೆ ಆಗಲಿಲ್ಲ. ಸಮನ್ವಯದ ಕೊರತೆಯೇ ನನ್ನ ಸೋಲಿಗೆ ಕಾರಣ. ಪಕ್ಷೇತರರ ಅಭ್ಯರ್ಥಿಯಿಂದಾಗಿ ಸೋಲೊಪ್ಪಬೇಕಾಯಿತು ಎಂದು ನಾನು ಹೇಳುವುದಿಲ್ಲ. ನಾನು ಹೇಳಬೇಕು ಎಂದುಕೊಂಡಿದ್ದ ಎಲ್ಲ ವಿವರಗಳನ್ನೂ ಪಕ್ಷದ ವೇದಿಕೆಯಲ್ಲಿ ಹೇಳಿದ್ದೇನೆ. ಎಲ್ಲ ವಿಷಯವನ್ನೂ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಪ್ರಥಮ ಪ್ರಾಶಸ್ತ್ಯ ಮತ ಕೇಳುವುದರಲ್ಲಿ ನಾವು ವಿಫಲರಾದೆವು ಎನ್ನಲು ಆಗುವುದಿಲ್ಲ. ಅತಿಯಾದ ಆತ್ಮವಿಶ್ವಾಸವೂ ಸೋಲಿಗೆ ಕಾರಣ ಎಂದರು.

ಅವಲೋಕನಾ ಸಭೆ ಬಳಿಕ ಮಾತನಾಡಿದ ಮಾಜಿ ಸಚಿವ ಲಕ್ಷ್ಮಣ ಸವದಿ, ಸೋಲಿನ‌ ಬಗ್ಗೆ ವರಿಷ್ಠರು ಅಂತರಿಕ ವರದಿ ತರಿಸಿಕೊಂಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ 15 ಕ್ಷೇತ್ರ ಗೆಲ್ಲುವ ಬಗ್ಗೆ ಚರ್ಚೆ ನಡೆಯಿತು. ಈ ಸಭೆಯಲ್ಲಿ ಕವಟಗಿಮಠ ಸೋಲಿನ ಬಗ್ಗೆ ಹೆಚ್ಚು ಚರ್ಚೆಯಾಗಲಿಲ್ಲ ಎಂದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಮಾತನಾಡಿ, ಸೋಲಿನ ಕುರಿತು ಸಭೆಯಲ್ಲಿ ಪರಾಮರ್ಶೆ ಮಾಡಲಾಗಿದೆ. ಸಭೆಯಲ್ಲಿ ಎಲ್ಲರ ಅಭಿಪ್ರಾಯವನ್ನೂ ಪಡೆದುಕೊಂಡಿದ್ದೇವೆ. ಮತ್ತಷ್ಟು ಜನರ ಅಭಿಪ್ರಾಯ ಸಂಗ್ರಹಿಸುವುದು ಬಾಕಿ ಇದೆ ಎಂದರು.

ಅಶಿಸ್ತಿನ ವರ್ತನೆ ತೋರಿದರೆ ಶಿಸ್ತು ಕ್ರಮ ಜರುಗಿಸಲಾಗುವುದು. ಮತ್ತೊಂದು ದೊಡ್ಡಮಟ್ಟದ ಅವಲೋಕನ ಸಭೆಯ ಬಳಿಕ ಕಾರಣ ಸೋಲಿಗೆ ಕಾರಣ ಹುಡುಕಲಾಗುತ್ತದೆ. ಮತದಾರ ಬೇರೆ ರೀತಿಯ ಆಲೋಚನೆ ಮಾಡಿದ್ದರಿಂದ ಬಿಜೆಪಿಗೆ ಸೋಲುಂಟಾಯಿತು ಎಂದು ಹೇಳಿದರು. ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆಯಿತು. ಬೆಳಗಾವಿ ಜಿಲ್ಲೆಯ ಬಿಜೆಪಿ ನಾಯಕರಾದ ರಮೇಶ್ ಜಾರಕಿಹೊಳಿ, ಉಮೇಶ್ ಕತ್ತಿ, ಪಿ.ರಾಜೀವ್, ಬಾಲಚಂದ್ರ ಜಾರಕಿಹೊಳಿ, ಲಕ್ಷ್ಮಣ ಸವದಿ ಸಭೆಯಿಂದ ದೂರವೇ ಉಳಿದಿದ್ದರು.

ಇದನ್ನೂ ಓದಿ: Karnataka Anti Conversion Bill 2021: ಮತಾಂತರ ನಿಷೇಧ ಮಸೂದೆಗೆ ಸಂಪುಟ ಒಪ್ಪಿಗೆ ಇದನ್ನೂ ಓದಿ: ವಿಧಾನ ಪರಿಷತ್​ನಲ್ಲಿ ಪ್ರತಿಧ್ವನಿಸಿದ ದುರ್ಬಲ ಗೃಹಮಂತ್ರಿ ಆಕ್ಷೇಪ: ಕಾವೇರಿದ ಚರ್ಚೆ, ಗದ್ದಲ, ಸಭಾತ್ಯಾಗ

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!