AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಣಿಯಲಾರದವನಿಗೆ ನೆಲ ಡೊಂಕು ಎಂಬಂತಿದೆ ಕಾಂಗ್ರೆಸ್ ಸ್ಥಿತಿ: ಟ್ವೀಟ್ ಮೂಲಕ ಹರಿಹಾಯ್ದ ಸಚಿವ ಸುಧಾಕರ

‘ಇಲ್ಲಸಲ್ಲದ ಆರೋಪ ಮಾಡಿ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿರುವುದು ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಸವರಿದ ಕಥೆಯನ್ನು ನೆನಪಿಸುತ್ತದೆ’ ಎಂದು ಅವರು ಹೇಳಿದ್ದಾರೆ.

ಕುಣಿಯಲಾರದವನಿಗೆ ನೆಲ ಡೊಂಕು ಎಂಬಂತಿದೆ ಕಾಂಗ್ರೆಸ್ ಸ್ಥಿತಿ: ಟ್ವೀಟ್ ಮೂಲಕ ಹರಿಹಾಯ್ದ ಸಚಿವ ಸುಧಾಕರ
ಆರೋಗ್ಯ ಸಚಿವ ಡಾ ಕೆ.ಸುಧಾಕರ್
TV9 Web
| Edited By: |

Updated on:Nov 20, 2022 | 11:08 AM

Share

ಬೆಂಗಳೂರು: ಮತದಾರರ ಗುರುತಿನ ಚೀಟಿ ರದ್ದುಪಡಿಸುವ ಅವ್ಯವಹಾರ ಇದೀಗ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ದೊಡ್ಡಮಟ್ಟದ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ. ಎರಡೂ ಪಕ್ಷಗಳು ಪರಸ್ಪರ್​ ಆನ್​ಲೈನ್-ಆಫ್​ಲೈನ್​ನಲ್ಲಿ ಹರಿಹಾಯುತ್ತಲೇ ಇವೆ. ಇದೀಗ ಅರೋಗ್ಯ ಸಚಿವ ಡಾ ಕೆ.ಸುಧಾಕರ್ ಕಾಂಗ್ರೆಸ್ ವಿರುದ್ಧ ಸರಣಿ ಟ್ವೀಟ್​ಗಳನ್ನು ಮಾಡಿ ಹಳೆಯ ವಿಚಾರಗಳನ್ನು ಮತ್ತೊಮ್ಮೆ ಕೆದಕಿದ್ದಾರೆ. ‘ಸುಳ್ಳುಗಳ ಸರಮಾಲೆ ಹೆಣೆಯುತ್ತಿದೆ ಕಾಂಗ್ರೆಸ್’ ಎಂದು ಹಳೆಯ ಪತ್ರವೊಂದರ ಫೋಟೊವನ್ನು ಟ್ವೀಟ್ ಮಾಡಿದ್ದಾರೆ.

‘ಕುಣಿಯಲಾರದವನಿಗೆ ನೆಲ ಡೊಂಕು ಎಂಬಂತೆ ಜನರ ವಿಶ್ವಾಸ ಕಳೆದುಕೊಂಡು ಹತಾಶಗೊಂಡಿರುವ ಕಾಂಗ್ರೆಸ್ ಪಕ್ಷವು ಮತಯಂತ್ರಗಳ ಮೇಲೆ ಸಂಶಯ ಮೂಡಿಸುವುದು, ಚುನಾವಣಾ ಆಯೋಗದ ಬಗ್ಗೆ ಅಪಸ್ವರ ಎತ್ತುವುದು ಹೀಗೆ ಒಂದಲ್ಲಾ ಒಂದು ಕ್ಯಾತೆ ತೆಗೆಯುತ್ತಲೇ ಬಂದಿದೆ. ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಆರೋಪ ಈ ಸುಳ್ಳುಗಳ ಸರಮಾಲೆಗೆ ಹೊಸ ಸೇರ್ಪಡೆಯಷ್ಟೆ’ ಎಂದು ಸುಧಾಕರ್ ಹೇಳಿದ್ದಾರೆ.

‘ಬಿಜೆಪಿ ಸರ್ಕಾರದ ವಿರುದ್ಧ ರಚನಾತ್ಮಕ ಹೋರಾಟ ಮಾಡಲು ಯಾವುದೇ ವಿಷಯಗಳಲ್ಲಿದೆ ಹತಾಶಗೊಂಡಿರುವ ಕಾಂಗ್ರೆಸ್ ನಾಯಕರು ದಿನಕ್ಕೊಂದು ಕಟ್ಟುಕಥೆ ಸೃಷ್ಟಿಸುವ ಹುನ್ನಾರ ನಡೆಸುತ್ತಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸರ್ಕಾರದ ವರ್ಚಸ್ಸಿಗೆ ಮಸಿ ಬಳಿಯುವ ಭರಾಟೆಯಲ್ಲಿ ತಮಗೆ ತಾವೇ ಮಸಿ ಬಳಿದುಕೊಳ್ಳುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.

‘ದಿಟ್ಟ ನಾಯಕತ್ವ, ಅಭಿವೃದ್ಧಿ, ಸುಶಾಸನ, ಭ್ರಷ್ಟಾಚಾರ-ಮುಕ್ತ ಆಡಳಿತ ನೀಡುವ ಮೂಲಕ ದೇಶಾದ್ಯಂತ ಜನಮನ್ನಣೆ ಪಡೆಯುತ್ತಿರುವ ನಮ್ಮ ಪಕ್ಷಕ್ಕೆ ಚುನಾವಣೆ ಗೆಲ್ಲಲು ಯಾವುದೇ ವಾಮಮಾರ್ಗದ ಅವಶ್ಯಕತೆಯೂ ಇಲ್ಲ. ನಮಗೆ ಅದರ ಬಗ್ಗೆ ನಂಬಿಕೆಯೂ ಇಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

‘ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ 2017ರಲ್ಲಿ ಅಂದಿನ ಕಾಂಗ್ರೆಸ್ ಸರಕಾರವೇ ಅನುಮತಿ ಕೊಟ್ಟ ಒಂದು ಸಂಸ್ಥೆಯ ಮೇಲೆ ಈಗ ಇಲ್ಲಸಲ್ಲದ ಆರೋಪ ಮಾಡಿ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿರುವುದು ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಸವರಿದ ಕಥೆಯನ್ನು ನೆನಪಿಸುತ್ತದೆ’ ಎಂದು ಅವರು ಹೇಳಿದ್ದಾರೆ.

Published On - 11:08 am, Sun, 20 November 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ