AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ವಿಧಾನಪರಿಷತ್‌ನ ನೂತನ ಉಪಸಭಾಪತಿಯಾಗಿ ಬಿಜೆಪಿಯ ಎಂ.ಕೆ.ಪ್ರಾಣೇಶ್‌ ಆಯ್ಕೆ

ವಿಧಾನಪರಿಷತ್‌ನ ನೂತನ ಉಪಸಭಾಪತಿಯಾಗಿ ಬಿಜೆಪಿಯ ಎಂ.ಕೆ.ಪ್ರಾಣೇಶ್‌ ಆಯ್ಕೆಯಾಗಿದ್ದಾರೆ.

ಕರ್ನಾಟಕ ವಿಧಾನಪರಿಷತ್‌ನ ನೂತನ ಉಪಸಭಾಪತಿಯಾಗಿ ಬಿಜೆಪಿಯ ಎಂ.ಕೆ.ಪ್ರಾಣೇಶ್‌ ಆಯ್ಕೆ
ಎಂ.ಕೆ.ಪ್ರಾಣೇಶ್‌
TV9 Web
| Edited By: |

Updated on:Dec 23, 2022 | 2:34 PM

Share

ಬೆಳಗಾವಿ: ವಿಧಾನಪರಿಷತ್‌ನ ನೂತನ ಉಪಸಭಾಪತಿಯಾಗಿ ಬಿಜೆಪಿಯ ಎಂ.ಕೆ.ಪ್ರಾಣೇಶ್‌ (mk pranesh) ಆಯ್ಕೆಯಾಗಿದ್ದಾರೆ. ಇಂದು(ಡಿಸೆಂಬರ್ 23) ನಡೆದ ಉಪಸಭಾಪತಿ ಚುನಾವಣೆಯಲ್ಲಿ ಬಿಜೆಪಿಯ ಎಂ.ಕೆ.ಪ್ರಾಣೇಶ್‌ 39 ಮತಗಳನ್ನು ಪಡೆದರೆ ಕಾಂಗ್ರೆಸ್‌ನ ಅರವಿಂದ್‌ ಅರಳಿ 26 ಮತಗಳನ್ನ ಪಡೆದಿದ್ದಾರೆ.

ಜೆಡಿಎಸ್‌ ಸದಸ್ಯರು ಮತದಾನ ಮಾಡದೆ ತಟಸ್ಥರಾಗಿದ್ದರು. ಕೋಟಾ ಶ್ರೀನಿವಾಸ್ ಪೂಜಾರಿ, ಎಸ್. ರುದ್ರೇಗೌಡ,ತಳವಾರ್ ಸಾಬಣ್ಣ, ಅರುಣ್ ಡಿಎಸ್ ಅವರು ಬಿಜೆಪಿಯಿಂದ ಎಂ.ಕೆ ಪ್ರಾಣೇಶ್ ಹೆಸರು ಉಪಸಭಾಪತಿ ಸ್ಥಾನಕ್ಕೆ ಪ್ರಸ್ತಾಪ ಮಾಡಿದರು. ಇನ್ನು ಉಪಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಅರವಿಂದ ಕುಮಾರ್ ಅರಳಿ ಅವರ ಹೆಸರನ್ನು ಬಿ.ಕೆ. ಹರಿಪಸ್ರಾದ್ ಪ್ರಸ್ತಾಪ ಮಾಡಿದರು.

ಇದನ್ನೂ ಓದಿ: Basavaraj Horatti: ಮೇಲ್ಮನೆ ಅತ್ಯಂತ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಕರ್ನಾಟಕ ವಿಧಾನ ಪರಿಷತ್ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ

ಪ್ರಾಣೇಶ್ ಪರ ಮತ ಚಲಾಯಿಸುವವರು ಎದ್ದು ನಿಲ್ಲುವಂತೆ ಸೂಚಿಸಿದ್ದು ಪ್ರಾಣೇಶ್ ಪರ 39 ಮತಗಳು ಚಲಾವಣೆಗೊಂಡಿವೆ. ಇನ್ನೂ ಜೆಡಿಎಸ್ ಪಕ್ಷದಿಂದ ಯಾರೊಬ್ಬರೂ ಕೂಡ ಮತ ಚಲಾಯಿಸಿರಲಿಲ್ಲ. ಪ್ರಸ್ತಾವದ ಪರವಾಗಿ 39 ಮತಗಳು ಬಂದಿವೆ. ಪ್ರಸ್ತಾವದ ವಿರೋಧವಾಗಿ 26 ಮತಗಳು ಬಂದವು. ಅಂತಿಮವಾಗಿ ಪ್ರಾಣೇಶ್ ಅವರು ಉಪಸಭಾಪತಿಯಾಗಿ ಆಯ್ಕೆಯಾಗಿದ್ದಾರೆಂದು ಸಭಾಪತಿ ಬಸವರಾಜ್ ಹೊರಟ್ಟಿ ಘೋಷಣೆ ಮಾಡಿದರು.

ಗುರುವಾರ ಬಿಜೆಪಿ-ಕಾಂಗ್ರೆಸ್‌ ನಾಯಕರು ವಿಧಾನಪರಿಷತ್‌ ಕಾರ್ಯದರ್ಶಿ ಮಹಾಲಕ್ಷ್ಮೀರವರಿಗೆ ನಾಮಪತ್ರವನ್ನ ಸಲ್ಲಿಸಿದ್ದರು. ಸಂಖ್ಯಾಬಲದ ಪ್ರಕಾರ ಬಿಜೆಪಿ 39, ಕಾಂಗ್ರೆಸ್‌ 26, ಜೆಡಿಎಸ್‌ 8 ಹಾಗೂ ಪಕ್ಷೇತರರು 2 ಸದಸ್ಯರಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:28 pm, Fri, 23 December 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?