AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ವಿಧಾನಪರಿಷತ್‌ನ ನೂತನ ಉಪಸಭಾಪತಿಯಾಗಿ ಬಿಜೆಪಿಯ ಎಂ.ಕೆ.ಪ್ರಾಣೇಶ್‌ ಆಯ್ಕೆ

ವಿಧಾನಪರಿಷತ್‌ನ ನೂತನ ಉಪಸಭಾಪತಿಯಾಗಿ ಬಿಜೆಪಿಯ ಎಂ.ಕೆ.ಪ್ರಾಣೇಶ್‌ ಆಯ್ಕೆಯಾಗಿದ್ದಾರೆ.

ಕರ್ನಾಟಕ ವಿಧಾನಪರಿಷತ್‌ನ ನೂತನ ಉಪಸಭಾಪತಿಯಾಗಿ ಬಿಜೆಪಿಯ ಎಂ.ಕೆ.ಪ್ರಾಣೇಶ್‌ ಆಯ್ಕೆ
ಎಂ.ಕೆ.ಪ್ರಾಣೇಶ್‌
TV9 Web
| Edited By: |

Updated on:Dec 23, 2022 | 2:34 PM

Share

ಬೆಳಗಾವಿ: ವಿಧಾನಪರಿಷತ್‌ನ ನೂತನ ಉಪಸಭಾಪತಿಯಾಗಿ ಬಿಜೆಪಿಯ ಎಂ.ಕೆ.ಪ್ರಾಣೇಶ್‌ (mk pranesh) ಆಯ್ಕೆಯಾಗಿದ್ದಾರೆ. ಇಂದು(ಡಿಸೆಂಬರ್ 23) ನಡೆದ ಉಪಸಭಾಪತಿ ಚುನಾವಣೆಯಲ್ಲಿ ಬಿಜೆಪಿಯ ಎಂ.ಕೆ.ಪ್ರಾಣೇಶ್‌ 39 ಮತಗಳನ್ನು ಪಡೆದರೆ ಕಾಂಗ್ರೆಸ್‌ನ ಅರವಿಂದ್‌ ಅರಳಿ 26 ಮತಗಳನ್ನ ಪಡೆದಿದ್ದಾರೆ.

ಜೆಡಿಎಸ್‌ ಸದಸ್ಯರು ಮತದಾನ ಮಾಡದೆ ತಟಸ್ಥರಾಗಿದ್ದರು. ಕೋಟಾ ಶ್ರೀನಿವಾಸ್ ಪೂಜಾರಿ, ಎಸ್. ರುದ್ರೇಗೌಡ,ತಳವಾರ್ ಸಾಬಣ್ಣ, ಅರುಣ್ ಡಿಎಸ್ ಅವರು ಬಿಜೆಪಿಯಿಂದ ಎಂ.ಕೆ ಪ್ರಾಣೇಶ್ ಹೆಸರು ಉಪಸಭಾಪತಿ ಸ್ಥಾನಕ್ಕೆ ಪ್ರಸ್ತಾಪ ಮಾಡಿದರು. ಇನ್ನು ಉಪಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಅರವಿಂದ ಕುಮಾರ್ ಅರಳಿ ಅವರ ಹೆಸರನ್ನು ಬಿ.ಕೆ. ಹರಿಪಸ್ರಾದ್ ಪ್ರಸ್ತಾಪ ಮಾಡಿದರು.

ಇದನ್ನೂ ಓದಿ: Basavaraj Horatti: ಮೇಲ್ಮನೆ ಅತ್ಯಂತ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಕರ್ನಾಟಕ ವಿಧಾನ ಪರಿಷತ್ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ

ಪ್ರಾಣೇಶ್ ಪರ ಮತ ಚಲಾಯಿಸುವವರು ಎದ್ದು ನಿಲ್ಲುವಂತೆ ಸೂಚಿಸಿದ್ದು ಪ್ರಾಣೇಶ್ ಪರ 39 ಮತಗಳು ಚಲಾವಣೆಗೊಂಡಿವೆ. ಇನ್ನೂ ಜೆಡಿಎಸ್ ಪಕ್ಷದಿಂದ ಯಾರೊಬ್ಬರೂ ಕೂಡ ಮತ ಚಲಾಯಿಸಿರಲಿಲ್ಲ. ಪ್ರಸ್ತಾವದ ಪರವಾಗಿ 39 ಮತಗಳು ಬಂದಿವೆ. ಪ್ರಸ್ತಾವದ ವಿರೋಧವಾಗಿ 26 ಮತಗಳು ಬಂದವು. ಅಂತಿಮವಾಗಿ ಪ್ರಾಣೇಶ್ ಅವರು ಉಪಸಭಾಪತಿಯಾಗಿ ಆಯ್ಕೆಯಾಗಿದ್ದಾರೆಂದು ಸಭಾಪತಿ ಬಸವರಾಜ್ ಹೊರಟ್ಟಿ ಘೋಷಣೆ ಮಾಡಿದರು.

ಗುರುವಾರ ಬಿಜೆಪಿ-ಕಾಂಗ್ರೆಸ್‌ ನಾಯಕರು ವಿಧಾನಪರಿಷತ್‌ ಕಾರ್ಯದರ್ಶಿ ಮಹಾಲಕ್ಷ್ಮೀರವರಿಗೆ ನಾಮಪತ್ರವನ್ನ ಸಲ್ಲಿಸಿದ್ದರು. ಸಂಖ್ಯಾಬಲದ ಪ್ರಕಾರ ಬಿಜೆಪಿ 39, ಕಾಂಗ್ರೆಸ್‌ 26, ಜೆಡಿಎಸ್‌ 8 ಹಾಗೂ ಪಕ್ಷೇತರರು 2 ಸದಸ್ಯರಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:28 pm, Fri, 23 December 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು