AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ರಾಜ್ಯವನ್ನು ದಿವಾಳಿ ಎಬ್ಬಿಸಿ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ: ಅರವಿಂದ ಬೆಲ್ಲದ್

ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಕೇಂದ್ರದ ಬಿಜೆಪಿ ಸರ್ಕಾರದ ನಡುವೆ ಜಿಎಸ್​ಟಿ ಅನುದಾನ ವಿಚಾರವಾಗಿ ಆರೋಪ ಪ್ರತ್ಯಾರೋಪ ನಡೆಯುತ್ತಿದೆ. ಇದರ ಜೊತೆಗೆ ಅಧಿಕಾರಿಗಳಿಗೆ, ಶಾಸಕರಿಗೆ ವೇತನ ನೀಡಲು ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಇತ್ಯಾದಿ ಆರೋಪಗಳನ್ನು ರಾಜ್ಯ ಬಿಜೆಪಿ ನಾಯಕರು ಮಾಡಲಾರಂಭಿಸಿದ್ದಾರೆ. ಇದೀಗ ಹುಬ್ಬಳ್ಳಿಯಲ್ಲಿ ಮಾತನಾಡಿದ ಅರವಿಂದ ಬೆಲ್ಲದ್, ಸಿದ್ದರಾಮಯ್ಯ ರಾಜ್ಯವನ್ನು ದಿವಾಳಿ ಎಬ್ಬಿಸಿ ಕೇಂದ್ರ ಸರ್ಕಾರದ ಮೇಲೆ ಹಾಕುತ್ತಿದ್ದಾರೆ ಎಂದರು.

ಸಿದ್ದರಾಮಯ್ಯ ರಾಜ್ಯವನ್ನು ದಿವಾಳಿ ಎಬ್ಬಿಸಿ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ: ಅರವಿಂದ ಬೆಲ್ಲದ್
ಸಿದ್ದರಾಮಯ್ಯ ರಾಜ್ಯವನ್ನು ದಿವಾಳಿ ಎಬ್ಬಿಸಿ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್
ಶಿವಕುಮಾರ್ ಪತ್ತಾರ್
| Edited By: Rakesh Nayak Manchi|

Updated on: Feb 24, 2024 | 3:25 PM

Share

ಹುಬ್ಬಳ್ಳಿ, ಫೆ.24: ಈ ಹಿಂದೆ ಹಣಕಾಸು ಸಚಿವರಾಗಿದ್ದ ಸಿದ್ದರಾಮಯ್ಯ (Siddaramaiah)  ರಾಜ್ಯ ಹಳ್ಳ ಹಿಡಿಸಿದ್ದರು. ಇದೀಗ ಮತ್ತೆ ರಾಜ್ಯವನ್ನು ದಿವಾಳಿ ಎಬ್ಬಿಸಿ ಕೇಂದ್ರ ಸರ್ಕಾರದ ಮೇಲೆ ಹಾಕುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ್ (Arvind Bellad) ಆರೋಪಿಸಿದ್ದಾರೆ. ಬಿಜೆಪಿ ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾರಾಯಿ ಕುಡಿಯುವವರು ಅತೀ ಹೆಚ್ಚು ತೆರಿಗೆ ಕಟ್ಟುತ್ತಿದ್ದಾರೆ. ನಮ್ಮ ಸಾರಾಯಿ ನಮ್ಮ ತೆರಿಗೆ ಅನ್ನೋಕೆ ಆಗತ್ತಾ ಎಂದು ಹೇಳುವ ಮೂಲಕ ಕಾಂಗ್ರೆಸ್​ನ ‘ನಮ್ಮ ತೆರಿಗೆ ನಮ್ಮ ಹಕ್ಕು’ ಅಭಿಯಾನಕ್ಕೆ ತಿರುಗೇಟು ನೀಡಿದರು. ತಿಪ್ಪರಲಾಗ ಹಾಕಿದರೂ ಬಿಜೆಪಿಯನ್ನು ಏನೂ‌ ಮಾಡಲು ಆಗಲ್ಲ. ಇದು ಜೋಶಿ, ಮೋದಿ ಚುನಾವಣೆ ಅಲ್ಲ ಇದು ದೇಶದ ಚುನಾವಣೆ. ಭಾರತದ ಸಾರ್ವಭೌಮಕ್ಕಾಗಿ ಚುನಾವಣೆ ಎಂದು ಬೆಲ್ಲದ್ ಹೇಳಿದರು.

ಇದನ್ನೂ ಓದಿ: Karnataka Budget Session: ಅರವಿಂದ್ ಬೆಲ್ಲದ್ ಮತ್ತು ಪ್ರದೀಪ್ ಈಶ್ವರ್ ನಡುವೆ ಪ್ರೀತಿ ವಿನಿಮಯ ಆಗಿದ್ದು ಯಾಕೆ ಗೊತ್ತಾ?

ಸಿದ್ದರಾಮಯ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಗೂಬೆ ಕುರಿಸುವ ‌ಕೆಲಸ ಮಾಡುತ್ತಿದೆ. ರಾಜ್ಯ ಸರ್ಕಾರ ವರ್ಸಸ್ ಕೇಂದ್ರ ಸರ್ಕಾರ ಎಂಬುದು ಅವರ ಪ್ಲ್ಯಾನ್ ಆಗಿದೆ ಎಂದು ಹೇಳಿದ ಬೆಲ್ಲದ್, ಅವರ ಬಳಿ ದುಡ್ಡು ಇಲ್ಲ, ನಾವ ಒಂದೇ ಒಂದು ಕಡಿ ಹಾಕಿಲ್ಲ. ದೊಡ್ಡ ಪ್ರಮಾಣದಲ್ಲಿ ವರ್ಗಾವಣೆ ದಂಧೆ ಮಾಡಿದ್ದಾರೆ. ಟಾಪ್ ಟು ಬಾಟಮ್ ದಂಧೆ ಮಾಡಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಜನರ ಬೇಡಿಕೆ ಈಡೇರಿಸಲು ಆಗುತ್ತಿಲ್ಲ. ಸಂಪೂರ್ಣವಾಗಿ ಭರವಸೆ ಕಳೆದುಕೊಂಡಿದೆ ಎಂದರು.

ಪ್ರಲ್ಹಾದ್ ಜೋಸಿ ಅವರನ್ನು ಹೊಗಳಿದ ಅರವಿಂದ ಬೆಲ್ಲದ್

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದ ಬೆಲ್ಲದ್, ಕ್ಷೇತ್ರದಲ್ಲಿ ಎಲ್ಲ ಅಭಿವೃದ್ಧಿ ಕೆಲಸ ಮಾಡಿದವರು ಜೋಶಿ. ಅಂಗನವಾಡಿ, ಶಾಲೆಯನ್ನು ಮಾಡಿದ ಶ್ರೇಯಸ್ಸು ಜೋಶಿ ಅವರಿಗೆ ಸಲ್ಲುತ್ತದೆ. IIT, IIIT ಮಾಡಿಸಿದ್ದು ಜೋಶಿ. ವಿಮಾನ ನಿಲ್ದಾಣ, ಏರಪೋರ್ಟ್ ಮಾಡಿಸಿದ್ದು ಜೋಶಿ. ಒಬ್ಬ ಜನ‌ ಪ್ರತಿನಿಧಿಯಾಗಿ ಎಲ್ಲ ಕೆಲಸವನ್ನು ಮಾಡಿದ್ದು ಜೋಶಿ ಎಂದರು.

ಸಾರ್ವಜನಿಕ ಜೀವನದಲ್ಲಿ ಇರುವವರಿಗೆ ಜೋಶಿ ಮಾದರಿ ಎಂದು ಹೇಳಿದ ಬೆಲ್ಲದ್, ಜೋಶಿ ಅವರಿಗೆ ಜಾವ ಜಾತಿ ಇಲ್ಲ, ಅವರು ಜನ ಮನಸ್ಸಿನಲ್ಲಿ ಇದ್ದಾರೆ. ಸಂಪೂರ್ಣವಾಗಿ ಈ ಭಾಗದ ಜನ ಜೋಶಿ ಅವರೇ ಸಂಸದರು ಎಂದು ನಿರ್ಧಾರ ಮಾಡಿದ್ದಾರೆ. ಜೋಶಿ ಅವರ ವಿರುದ್ಧ ಯಾರೇ ಇರಲಿ ಜೋಶಿ ಅವರೇ ಗೆಲುವು ಸಾಧಿಸುತ್ತಾರೆ. ಅತ್ಯಂತ ಹೆಚ್ಚಿನ ಮತಗಳಿಂದ ಜೋಶಿ ಗೆಲ್ಲುತ್ತಾರೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!