AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್​​ ಭೇಟಿ ಮಾಡಿದ ಶಾಸಕ ಅರವಿಂದ್ ಬೆಲ್ಲದ್

ಇಂದು ಕೊನೆಗೂ ಭೇಟಿ ನಡೆಸಿದ ಶಾಸಕ ಅರವಿಂದ್ ಬೆಲ್ಲದ್, ಅರುಣ್ ಸಿಂಗ್ ಕರ್ನಾಟಕಕ್ಕೆ ಆಗಮಿಸುವ ಮುನ್ನವೇ ಸಿಎಂ ಯಡಿಯೂರಪ್ಪರನ್ನು ಪದವಿಯಿಂದ ಕೆಳಗಿಳಿಸಲು ಯೋಜನೆ ರೂಪಿಸಿದ್ದಾರೆ ಎಂದು ಹೇಳಲಾಗಿದೆ.

ಕೊನೆಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್​​ ಭೇಟಿ ಮಾಡಿದ ಶಾಸಕ ಅರವಿಂದ್ ಬೆಲ್ಲದ್
ಅರವಿಂದ್ ಬೆಲ್ಲದ್ ಮತ್ತು ಅರುಣ್ ಸಿಂಗ್
TV9 Web
| Updated By: guruganesh bhat|

Updated on:Jun 14, 2021 | 3:58 PM

Share

ದೆಹಲಿ: ಬಿಜೆಪಿಯ ಕರ್ನಾಟಕ ರಾಜ್ಯ ಉಸ್ತುವಾರಿ ಅರುಣ್ ಸಿಂಗ್​ರನ್ನು ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ್​ ದೆಹಲಿಯ ಜಿಆರ್​ಜಿ ರಸ್ತೆಯ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದರು. ತಮ್ಮ ದೆಹಲಿ ಭೇಟಿಯನ್ನು ಈಮೊದಲು ಖಾಸಗಿ ಭೇಟಿ ಎಂದು ಹೇಳಿದ್ದ ಶಾಸಕ ಅರವಿಂದ್ ಬೆಲ್ಲದ್ ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ತಂಗಿದ್ದರು. ಮೊದಲ ಎರಡು ದಿನಗಳಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಶಾಸಕ ಅರವಿಂದ್ ಬೆಲ್ಲದ್​ರನ್ನು ಭೇಟಿಯಾಗಲು ನಿರಾಕರಿಸಿದ್ದರು. ಆದರೆ ಇಂದು ಕೊನೆಗೂ ಭೇಟಿ ನಡೆಸಿದ ಶಾಸಕ ಅರವಿಂದ್ ಬೆಲ್ಲದ್, ಅರುಣ್ ಸಿಂಗ್ ಕರ್ನಾಟಕಕ್ಕೆ ಆಗಮಿಸುವ ಮುನ್ನವೇ ಸಿಎಂ ಯಡಿಯೂರಪ್ಪರನ್ನು ಪದವಿಯಿಂದ ಕೆಳಗಿಳಿಸಲು ಯೋಜನೆ ರೂಪಿಸಿದ್ದಾರೆ ಎಂದು ಹೇಳಲಾಗಿದೆ.

ಇತ್ತ ರಾಜ್ಯದ ಮುಖ್ಯಮಂತ್ರಿ ಸ್ಥಾನದಿಂದ ಬಿ ಎಸ್​ ಯಡಿಯೂರಪ್ಪ ಅವರನ್ನು ಕೆಳಗಿಳಿಸಬಾರದು ಎಂದು ವೀರಶೈವ ಲಿಂಗಾಯತ ಮಠಾಧೀಶರು ಬಿಜೆಪಿ ಹೈಕಮಾಂಡ್​ಗೆ ಒಕ್ಕೊರಲಿನ ಒತ್ತಾಯದ ಸಂದೇಶ ರವಾನಿಸಿದ್ದಾರೆ.  ತುಮಕೂರು ಜಿಲ್ಲೆ ತಿಪಟೂರಿನ ಷಡಕ್ಷರಿ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿದ 10ಕ್ಕೂ ಹೆಚ್ಚು ಮಠಾಧೀಶರು ಸಿಎಂ ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಕೆಲವು ವ್ಯಕ್ತಿಗಳು ಸಿಎಂ ಸ್ಥಾನಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿದ್ದಾರೆ. ಇಂತಹ ಹೇಳಿಕೆಗಳಿಂದ ಮಾನಸಿಕವಾಗಿ ನೋವುಂಟಾಗುತ್ತಿದೆ. ಆದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಬಿಎಸ್​ವೈ ಅವರು ಕಾರಣ ಎಂದು ಒಕ್ಕೊರಲ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಷಡಕ್ಷರಿ ಮಠದ ರುದ್ರಮುನಿ ಸ್ವಾಮಿಜಿ, ಜಂಗಮ ಮಠದ ಸಿದ್ದಲಿಂಗ ಸ್ವಾಮಿಜಿ, ಬೆಳ್ಳಾವಿ ಕಾರದ ಮಠದ ವೀರಬಸವ ಸ್ವಾಮಿಜಿ ಸೇರಿದಂತೆ ಹತ್ತಕ್ಕೂ ಹೆಚ್ಚು ಸ್ವಾಮಿಜಿಗಳು ಯಡಿಯೂರಪ್ಪ ಪರ  ಬಿಜೆಪಿ ಹೈಕಮಾಂಡ್​ಗೆ ಒಕ್ಕೊರಲಿನ ಸಂದೇಶ ರವಾನಿಸಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿನ ಹಾಲಿಗೆ ನೀರು ಬೆರೆಸಿ ವಂಚನೆ ಪ್ರಕರಣ ಸಿಐಡಿ ತನಿಖೆಗೆ : ಸಿಎಂ ಯಡಿಯೂರಪ್ಪ ಘೋಷಣೆ

ಕೊವಿಡ್ ಲಸಿಕೆ ಪಡೆದ ನಂತರ ದೇಹದಲ್ಲಿ ಅಯಸ್ಕಾಂತ ಶಕ್ತಿ ಉಂಟಾಗಿದೆ ಎಂದ ಉಲ್ಲಾಸನಗರ ವ್ಯಕ್ತಿಯ ವಾದ; ವಿಡಿಯೊ ವೈರಲ್

 (BJP MLA Arvind Bellad meets Karnataka BJP in charge Arun Singh in Delhi about leadership change)

Published On - 3:56 pm, Mon, 14 June 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ