AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೊಮ್ಮಾಯಿಯವರೇ ಅವರನ್ನ ಮನೆವರೆಗೂ ಬಿಟ್ಟುಕೊಳ್ಳಬೇಡಿ: ಅಚ್ಚರಿ ಮೂಡಿಸಿದ ಯತ್ನಾಳ್ ಹೇಳೀಕೆ

ಡಿಕೆ ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭೇಟಿ ಬಗ್ಗೆ ಬಿಜೆಪಿ ಶಾಸಜ ಬಸನಗೌಡ ಪಾಟೀಲ್ ಪ್ರತಿಕ್ರಿಯಿಸಿದ್ದು, ಅವರನ್ನು ಮನೆಯವರೆಗೂ ಬಿಟ್ಟುಕೊಳ್ಳಬೇಡಿ ಎಂದು ಸಲಹೆ ನೀಡಿದ್ದಾರೆ.

ಬೊಮ್ಮಾಯಿಯವರೇ ಅವರನ್ನ ಮನೆವರೆಗೂ ಬಿಟ್ಟುಕೊಳ್ಳಬೇಡಿ: ಅಚ್ಚರಿ ಮೂಡಿಸಿದ ಯತ್ನಾಳ್ ಹೇಳೀಕೆ
ರಮೇಶ್ ಬಿ. ಜವಳಗೇರಾ
|

Updated on:Jun 25, 2023 | 4:06 PM

Share

ಬೆಳಗಾವಿ: ಸಿದ್ದರಾಮಯ್ಯ, ಡಿಕೆ ನೇತೃತ್ವದ ಕಾಂಗ್ರೆಸ್ (Congress)​ ಸರ್ಕಾರ 5 ವರ್ಷ ಪೂರೈಸಲ್ಲ. ಲೋಕಸಭಾ ಚುನಾವಣೆಗೂ ಮುನ್ನ ಅಥವಾ ನಂತರ ಆಕ್ಸಿಡೆಂಟ್ ಆಗುತ್ತೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​ ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಭವಿಷ್ಯ ನುಡಿದರು. ಬೆಳಗಾವಿಯಲ್ಲಿ ಇಂದು(ಜೂನ್ 25) ಮಾತನಾಡಿರುವ ಯತ್ನಾಳ್, ಯಡಿಯೂರಪ್ಪ, ಬೊಮ್ಮಾಯಿ ಮನೆಗೆ ಸೌಜನ್ಯದ ಭೇಟಿ ಅಂತಾರೆ. ಇವರು ಸೌಜನ್ಯದ ಭೇಟಿ ಕೊಡುತ್ತಿಲ್ಲ. ಸೋನಿಯಾ ಗಾಂಧಿ ಹೆದರಿಸುವ ಕೆಲಸ. ಬಸವರಾಜ ಬೊಮ್ಮಾಯಿಯವರೇ (Basavaraj Bommai) ಮನೆವರೆಗೂ ಅವರನ್ನ ಬಿಟ್ಟುಕೊಳ್ಳಬೇಡಿ ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಎರಡರಲ್ಲೂ ಸೋತು ನಿರುದ್ಯೋಗಿಯಾಗಿದ್ದೇನೆ ಎನ್ನುತ್ತಲ್ಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟ ಸೋಮಣ್ಣ

ಎಲ್ಲರೂ ಒಗ್ಗಟ್ಟಾಗಿ ಕೆಲಸಮಾಡಿ, ಇಲ್ಲದಿದ್ದರೆ ಪಕ್ಷದಿಂದ ಹೊರ ನಡೆಯಿರಿ. ನಾವ್ಯಾರು ಜಗಳ ಮಾಡಿತ್ತಿಲ್ಲ, ಪಕ್ಷ ನಿರ್ಣಯ ಮಾಡಿದವರ ಪರ ಕೆಲಸ ಮಾಡಿ. ಮುಂದಿನ 3 ತಿಂಗಳಲ್ಲಿ ಕಾಂಗ್ರೆಸ್​ ಪಕ್ಷದ ಗ್ಯಾರಂಟಿ ಬಣ್ಣ ಬಯಲಾಗಲಿದೆ. ಸಿದ್ದರಾಮಯ್ಯನವರು ಏನ್ ಹೇಳಿದ್ರು ಎನ್ನುವುದನ್ನು ಹೊರತೆಗೆಯುತ್ತೇವೆ. ನಾವು ದನ ಕಾಯುತ್ತಿಲ್ಲ, ಆರ್ಥಿಕ ಸ್ಥಿತಿಗತಿ ಬಗ್ಗೆ ಗೊತ್ತಿದೆ. ಇದು ಐದು ವರ್ಷ ನಡೆಯುವ ಸರ್ಕಾರ ಅಲ್ಲ. ಲೋಕಸಭಾ ಚುನಾವಣೆ ಮುನ್ನ, ಇಲ್ಲ ಆದ ಬಳಿಕ ಆಕ್ಸಿಡೆಂಟ್ ಆಗುತ್ತೆ. ಅಷ್ಟರಲ್ಲಿ ಇಬ್ಬರು (ಸಿದ್ದರಾಮಯ್ಯ- ಡಿಕೆ ಶಿವಕುಮಾರ್) ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ ಎಂದರು.

ನಾವು ವಿರೋಧ ಪಕ್ಷದವರ ಮನೆಗೆ ಹೋಗುವುದಿಲ್ಲ ಅಂತಾರೆ‌. ಅದೇ ರೀತಿ ನಾವು ಅವರ ಮನೆಗೆ ಹೋಗುವುದಿಲ್ಲ ಎಂದು ಹೇಳಿ. ಅವರನ್ನ ಸ್ವಾಗತಿಸಿಕೊಂಡ್ರೇ ನಮ್ಮ ಕಾರ್ಯಕರ್ತರು ಮಲಗಿ ಬಿಡುತ್ತಾರೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ. ಹಲ್ಕಟಗಿರಿ ಮಾಡುವುದಿದ್ರೆ ಬಿಟ್ಟು ಹೋಗಿ. ನಾವು ಯಾರು ಜಗಳ ಮಾಡುತ್ತಿಲ್ಲ, ಪಾರ್ಟಿ ನಿರ್ಣಯ ಮಾಡಿದವರ ಪರ ಕೆಲಸ ಮಾಡಿ. ಮೂರು ತಿಂಗಳಲ್ಲಿ ಗ್ಯಾರಂಟಿ ಬಣ್ಣ ಬಯಲು ಆಗಲಿದೆ. ದೇಶದಲ್ಲಿ ಸಮಾನ ನಾಗರಿಕ ಕಾಯ್ದೆ ಜಾರಿಯಾಗಲಿದೆ. ಪಕ್ಷ ನಿರ್ಣಯ ಮಾಡಿದವರು ವಿರೋಧ ಪಕ್ಷದ ನಾಯಕರು ಆಗಲಿದ್ದಾರೆ. ನಮ್ಮಲ್ಲಿ ಯಾವುದೇ ಒಳ ಪೈಪೋಟಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 4:03 pm, Sun, 25 June 23

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!