AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೊಮ್ಮಾಯಿಯವರೇ ಅವರನ್ನ ಮನೆವರೆಗೂ ಬಿಟ್ಟುಕೊಳ್ಳಬೇಡಿ: ಅಚ್ಚರಿ ಮೂಡಿಸಿದ ಯತ್ನಾಳ್ ಹೇಳೀಕೆ

ಡಿಕೆ ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭೇಟಿ ಬಗ್ಗೆ ಬಿಜೆಪಿ ಶಾಸಜ ಬಸನಗೌಡ ಪಾಟೀಲ್ ಪ್ರತಿಕ್ರಿಯಿಸಿದ್ದು, ಅವರನ್ನು ಮನೆಯವರೆಗೂ ಬಿಟ್ಟುಕೊಳ್ಳಬೇಡಿ ಎಂದು ಸಲಹೆ ನೀಡಿದ್ದಾರೆ.

ಬೊಮ್ಮಾಯಿಯವರೇ ಅವರನ್ನ ಮನೆವರೆಗೂ ಬಿಟ್ಟುಕೊಳ್ಳಬೇಡಿ: ಅಚ್ಚರಿ ಮೂಡಿಸಿದ ಯತ್ನಾಳ್ ಹೇಳೀಕೆ
ರಮೇಶ್ ಬಿ. ಜವಳಗೇರಾ
|

Updated on:Jun 25, 2023 | 4:06 PM

Share

ಬೆಳಗಾವಿ: ಸಿದ್ದರಾಮಯ್ಯ, ಡಿಕೆ ನೇತೃತ್ವದ ಕಾಂಗ್ರೆಸ್ (Congress)​ ಸರ್ಕಾರ 5 ವರ್ಷ ಪೂರೈಸಲ್ಲ. ಲೋಕಸಭಾ ಚುನಾವಣೆಗೂ ಮುನ್ನ ಅಥವಾ ನಂತರ ಆಕ್ಸಿಡೆಂಟ್ ಆಗುತ್ತೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​ ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಭವಿಷ್ಯ ನುಡಿದರು. ಬೆಳಗಾವಿಯಲ್ಲಿ ಇಂದು(ಜೂನ್ 25) ಮಾತನಾಡಿರುವ ಯತ್ನಾಳ್, ಯಡಿಯೂರಪ್ಪ, ಬೊಮ್ಮಾಯಿ ಮನೆಗೆ ಸೌಜನ್ಯದ ಭೇಟಿ ಅಂತಾರೆ. ಇವರು ಸೌಜನ್ಯದ ಭೇಟಿ ಕೊಡುತ್ತಿಲ್ಲ. ಸೋನಿಯಾ ಗಾಂಧಿ ಹೆದರಿಸುವ ಕೆಲಸ. ಬಸವರಾಜ ಬೊಮ್ಮಾಯಿಯವರೇ (Basavaraj Bommai) ಮನೆವರೆಗೂ ಅವರನ್ನ ಬಿಟ್ಟುಕೊಳ್ಳಬೇಡಿ ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಎರಡರಲ್ಲೂ ಸೋತು ನಿರುದ್ಯೋಗಿಯಾಗಿದ್ದೇನೆ ಎನ್ನುತ್ತಲ್ಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟ ಸೋಮಣ್ಣ

ಎಲ್ಲರೂ ಒಗ್ಗಟ್ಟಾಗಿ ಕೆಲಸಮಾಡಿ, ಇಲ್ಲದಿದ್ದರೆ ಪಕ್ಷದಿಂದ ಹೊರ ನಡೆಯಿರಿ. ನಾವ್ಯಾರು ಜಗಳ ಮಾಡಿತ್ತಿಲ್ಲ, ಪಕ್ಷ ನಿರ್ಣಯ ಮಾಡಿದವರ ಪರ ಕೆಲಸ ಮಾಡಿ. ಮುಂದಿನ 3 ತಿಂಗಳಲ್ಲಿ ಕಾಂಗ್ರೆಸ್​ ಪಕ್ಷದ ಗ್ಯಾರಂಟಿ ಬಣ್ಣ ಬಯಲಾಗಲಿದೆ. ಸಿದ್ದರಾಮಯ್ಯನವರು ಏನ್ ಹೇಳಿದ್ರು ಎನ್ನುವುದನ್ನು ಹೊರತೆಗೆಯುತ್ತೇವೆ. ನಾವು ದನ ಕಾಯುತ್ತಿಲ್ಲ, ಆರ್ಥಿಕ ಸ್ಥಿತಿಗತಿ ಬಗ್ಗೆ ಗೊತ್ತಿದೆ. ಇದು ಐದು ವರ್ಷ ನಡೆಯುವ ಸರ್ಕಾರ ಅಲ್ಲ. ಲೋಕಸಭಾ ಚುನಾವಣೆ ಮುನ್ನ, ಇಲ್ಲ ಆದ ಬಳಿಕ ಆಕ್ಸಿಡೆಂಟ್ ಆಗುತ್ತೆ. ಅಷ್ಟರಲ್ಲಿ ಇಬ್ಬರು (ಸಿದ್ದರಾಮಯ್ಯ- ಡಿಕೆ ಶಿವಕುಮಾರ್) ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ ಎಂದರು.

ನಾವು ವಿರೋಧ ಪಕ್ಷದವರ ಮನೆಗೆ ಹೋಗುವುದಿಲ್ಲ ಅಂತಾರೆ‌. ಅದೇ ರೀತಿ ನಾವು ಅವರ ಮನೆಗೆ ಹೋಗುವುದಿಲ್ಲ ಎಂದು ಹೇಳಿ. ಅವರನ್ನ ಸ್ವಾಗತಿಸಿಕೊಂಡ್ರೇ ನಮ್ಮ ಕಾರ್ಯಕರ್ತರು ಮಲಗಿ ಬಿಡುತ್ತಾರೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ. ಹಲ್ಕಟಗಿರಿ ಮಾಡುವುದಿದ್ರೆ ಬಿಟ್ಟು ಹೋಗಿ. ನಾವು ಯಾರು ಜಗಳ ಮಾಡುತ್ತಿಲ್ಲ, ಪಾರ್ಟಿ ನಿರ್ಣಯ ಮಾಡಿದವರ ಪರ ಕೆಲಸ ಮಾಡಿ. ಮೂರು ತಿಂಗಳಲ್ಲಿ ಗ್ಯಾರಂಟಿ ಬಣ್ಣ ಬಯಲು ಆಗಲಿದೆ. ದೇಶದಲ್ಲಿ ಸಮಾನ ನಾಗರಿಕ ಕಾಯ್ದೆ ಜಾರಿಯಾಗಲಿದೆ. ಪಕ್ಷ ನಿರ್ಣಯ ಮಾಡಿದವರು ವಿರೋಧ ಪಕ್ಷದ ನಾಯಕರು ಆಗಲಿದ್ದಾರೆ. ನಮ್ಮಲ್ಲಿ ಯಾವುದೇ ಒಳ ಪೈಪೋಟಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 4:03 pm, Sun, 25 June 23

Follow Us
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ