AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಾ ಹುದ್ದೆ ತಮ್ಮ ಮಕ್ಕಳಿಗೆ ಬೇಕು, ಇನ್ನೂ ಏನಾದರೂ ಉಳಿದಿದ್ದರೇ ಮನೆಯ ಬೆಕ್ಕುಗಳಿಗೆ ಕೊಡಿ: ಬಿಎಸ್​ವೈ ವಿರುದ್ಧ ಯತ್ನಾಳ್​ ಕಿಡಿ

ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ ಮತ್ತೆ ವಾಗ್ದಾಳಿ ಮಾಡಿದ್ದಾರೆ. ಬಿವೈ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಪಟ್ಟ ದೊರೆತಿದ್ದಕ್ಕೆ ಬಿಎಸ್ ಯಡಿಯೂರಪ್ಪ ವಿರುದ್ಧ ಯತ್ನಾಳ ವ್ಯಂಗ್ಯವಾಡಿದ್ದಾರೆ.

ಎಲ್ಲಾ ಹುದ್ದೆ ತಮ್ಮ ಮಕ್ಕಳಿಗೆ ಬೇಕು, ಇನ್ನೂ ಏನಾದರೂ ಉಳಿದಿದ್ದರೇ ಮನೆಯ ಬೆಕ್ಕುಗಳಿಗೆ ಕೊಡಿ: ಬಿಎಸ್​ವೈ ವಿರುದ್ಧ ಯತ್ನಾಳ್​ ಕಿಡಿ
ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Dec 02, 2023 | 11:49 AM

Share

ವಿಜಯಪುರ ಡಿ.02: ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ (BS Yediyurappa) ಮತ್ತು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ (Basangouda Patil Yatnal) ಮತ್ತೆ ಬುಸುಗೂಡಿದ್ದಾರೆ. ಬಿವೈ ವಿಜಯೇಂದ್ರ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾದ ಬಳಿಕ ಬಸನಗೌಡ ಪಾಟೀಲ್​ ಯತ್ನಾಳ್​ ನಿಗಿ ನಿಗಿ ಕೆಂಡದಂತಾಗಿದ್ದು, ನಮ್ಮ ಮನೆಗೆ ಬರಬೇಡ ಎಂದು ಬಹಿರಂಗವಾಗಿಯೇ ಹೇಳಿದ್ದರು. ಇದೀಗ ಮಗ ಬಿವೈ​ ವಿಜಯೇಂದ್ರ ಅವರಿಗೆ ಅಧ್ಯಕ್ಷ ಪಟ್ಟ ಸಿಕ್ಕಿದ್ದಕ್ಕೆ ಬಿಎಸ್​ ಯಡಿಯೂರಪ್ಪ ವಿರುದ್ಧ ಯತ್ನಾಳ್​ ಕಿಡಿಕಾರಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮೊದಲು ಮಾಜಿ ಮುಖ್ಯಮಂತ್ರಿ ಅಂತಿದ್ದರು. ಮುಖಭಂಗ ಆಗುತ್ತೆ ಅಂತಾ ಈಗ ನಿಕಟಪೂರ್ವ ಎಂದು ಹೇಳುತ್ತಾರೆ. ಅಪ್ಪ, ಮಗ ನಾಟಕ ಮಾಡಬೇಡಿ ಅಂತಾ ಈ ಹಿಂದೆ ನಾನು ಹೇಳಿದ್ದೆ. ಎಲ್ಲಾ ನಾಟಕ ಮಾಡೋದು, ಎಲ್ಲಾ ಹುದ್ದೆ ತಮ್ಮ ಮಕ್ಕಳಿಗೆ ಬೇಕು. ಯಾಕಂದ್ರೆ ಆ ಖುರ್ಚಿ ಬಿಡಬಾರದು‌ ಅಂತ. ರೈತರ ಬಗ್ಗೆ ಕಣ್ಣೀರು ಹಾಕೋದು ನೋಡಿದರೇ ಎಲ್ಲಾ ನಾಟಕ ಮಾಡೋದು, ಎಲ್ಲಾ ಹುದ್ದೆ ತಮ್ಮ ಮಕ್ಕಳಿಗೆ ಬೇಕು. ಇನ್ನು ಏನಾದರೂ ಉಳಿದಿದ್ದರೇ ಮನೆಯ ಬೆಕ್ಕುಗಳಿಗೆ ಕೊಟ್ಟು ಬಿಡಿ ಅಂತ ಹೇಳಿದ್ದೇನೆ. ಪ್ರಧಾನ ಕಾರ್ಯದರ್ಶಿ, ಉಪ ಕಾರ್ಯದರ್ಶಿ ಅಂತ ಮಾಡಿಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ನನ್ನ ಭೇಟಿಗೆ ಬರೋದು ಬೇಡ ಅಂತ ವಿಜಯೇಂದ್ರನಿಗೆ ಹೇಳಿದ್ದೇನೆ: ಬಸನಗೌಡ ಪಾಟೀಲ್ ಯತ್ನಾಳ್

ವಿಜಯಪುರದ ಆನಂದ ನಗರದಲ್ಲಿ ಶುಕ್ರವಾರ (ಡಿ.01)ರ ರಾತ್ರಿ ನಡೆದ ದಾನಮ್ಮದೇವಿ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನನ್ನನ್ನು ಹೆದರಿಸಬೇಕು ಅಂತಾ ಬ್ಲ್ಯಾಕ್​ಮೇಲ್ ಮಾಡ್ತಾರೆ. ನನಗೆ ಬ್ಲ್ಯಾಕ್​ಮೇಲ್​ ಮಾಡಲು ಬಂದರೂ ನಿಮ್ಮದು ನನ್ನ ಬಳಿ ಇದೆ. ಈಗ ಡಿ.ಕೆ.ಶಿವಕುಮಾರ್​ ಅವರದ್ದು ತೆಗೆದಿದ್ದೇನೆ. ರಾಜ್ಯವನ್ನು ಲೂಟಿ ಮಾಡಿ 10 ರಿಂದ 20ಸಾವಿರ ಕೋಟಿ ರೂ. ಲೂಟಿ ಮಾಡಿದ್ದರೂ ಇನ್ನೂ ಸಮಾಧಾನ ಇಲ್ಲ. ಡಿ.ಕೆ.ಶಿವಕುಮಾರ್​ ವಿರುದ್ಧ ಮತ್ತೊಂದು ಕೇಸ್​ ದಾಖಲಿಸುತ್ತಿದ್ದೇವೆ ಎಂದು ಹೇಳಿದರು.

ಮತ್ತಷ್ಟು ರಾಜಕೀಯ ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More