AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೇ ಮಾತನಾಡಿದರೂ ಜೈಲಿಗೆ ಹಾಕ್ತೀವಿ ಎನ್ನಲು ಇದು ತಾಲಿಬಾನ್ ಆಡಳಿತ ಅಲ್ಲ; ಎಂಬಿ ಪಾಟೀಲ್​ಗೆ ಯತ್ನಾಳ್ ತಿರುಗೇಟು

ಯಾರೇ ಮಾತಾಡಿದ್ರು ಜೈಲಿಗೆ ಹಾಕ್ತೀವಿ ಅಂತ ಹೇಳೋಕ್ಕೆ ಇದು ತಾಲಿಬಾನ್ ಆಡಳಿತ ಅಲ್ಲ, ಕರ್ನಾಟಕ ಎನ್ನುವುದನ್ನು ಎಂಬಿ ಪಾಟೀಲ್ ಮರೆಯಬಾರದು ಎಂದ ಯತ್ನಾಳ್.

ಯಾರೇ ಮಾತನಾಡಿದರೂ ಜೈಲಿಗೆ ಹಾಕ್ತೀವಿ ಎನ್ನಲು ಇದು ತಾಲಿಬಾನ್ ಆಡಳಿತ ಅಲ್ಲ; ಎಂಬಿ ಪಾಟೀಲ್​ಗೆ ಯತ್ನಾಳ್ ತಿರುಗೇಟು
ಬಸನಗೌಡ ಪಾಟೀಲ್ ಯತ್ನಾಳ್
Ganapathi Sharma
|

Updated on:Jun 06, 2023 | 7:27 PM

Share

ಬೆಂಗಳೂರು: ವಾಗ್ಮಿ ಚಕ್ರವರ್ತಿ ಸೂಲಿಬೆಲೆಗೆ ಸಚಿವ ಎಂಬಿ ಪಾಟೀಲ್ ಎಚ್ಚರಿಕೆ ನೀಡಿದ್ದಕ್ಕೆ ಖಾರವಾಗಿ ತಿರುಗೇಟು ನೀಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal), ಯಾರೇ ಮಾತನಾಡಿದರೂ ಜೈಲಿಗೆ ಹಾಕ್ತೀವಿ ಎನ್ನಲು ಇದು ತಾಲಿಬಾನ್ ಆಡಳಿತ ಅಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಹಿಟ್ಲರ್ ಆಡಳಿತವಿದೆ ಎಂದು ಹೇಳಿದ್ದ ಚಕ್ರವರ್ತಿ ಸೂಲಿಬೆಲೆಗೆ ಸಚಿವ ಎಂಬಿ ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದರು. ಈ ಹಿಂದೆ ಹಿಜಾಬ್, ಹಲಾಲ್ ವಿಚಾರದಲ್ಲಿ ಗಲಾಟೆ ಮಾಡಿದ ಹಾಗೆ ಈಗ ನಾಟಕ ಮಾಡಿದರೆ ಅದಕ್ಕೆ ತಡೆಯೊಡ್ಡಲಿದ್ದೇವೆ. ಇನ್ನು ಮುಂದೆ ಅಂಥದ್ದೆಲ್ಲ ನಡೆಯಲ್ಲ. ಏನಾದರೂ ಗಲಾಟೆ ಮಾಡಿದರೆ ಜೈಲು ಕಂಬಿ ಎಣಿಸಬೇಕಾಗುತ್ತದೆ ಎಂದು ಎಂಬಿ ಪಾಟೀಲ್ ಎಚ್ಚರಿಕೆ ನೀಡಿದ್ದರು.

ಎಂಬಿ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಯತ್ನಾಳ್, ಯಾರೇ ಮಾತಾಡಿದ್ರು ಜೈಲಿಗೆ ಹಾಕ್ತೀವಿ ಅಂತ ಹೇಳೋಕ್ಕೆ ಇದು ತಾಲಿಬಾನ್ ಆಡಳಿತ ಅಲ್ಲ, ಕರ್ನಾಟಕ ಎನ್ನುವುದನ್ನು ಎಂಬಿ ಪಾಟೀಲ್ ಮರೆಯಬಾರದು. ಎಫ್​ಐಆರ್ ಮಾಡಿಸ್ತೀವಿ, ಜೈಲಿಗೆ ಕಳುಹಿಸ್ತೀವಿ ಎಂದು ಪದೇ ಪದೇ ಅನ್ನುವುದಕ್ಕೆ ಇವರೇನು ನ್ಯಾಯಾಧೀಶರೇ? ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಇದೆಲ್ಲ ಸಲ್ಲದು, ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಅವರ ಮಂತ್ರಿಗಳು ಅಸಹಿಷ್ಣು ಆಗಬಾರದು ಎಂದು ಉಲ್ಲೇಖಿಸಿದ್ದಾರೆ.

ಭಾರತ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದ ಅಡಿ ನಡೆಯುವುದು. ಸಂವಿಧಾನದ ವಿಧಿ 19 ರ ಬಗ್ಗೆ ತಿಳಿದುಕೊಳ್ಳಬೇಕಾಗಿ ಪಾಟೀಲ್ ಅವರನ್ನು ತಾಕೀತು ಮಾಡುತ್ತೇನೆ ಎಂದು ಯತ್ನಾಳ್ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Chakravarthy Sulibele; ಜೈಲಿಗೆ ಹಾಕುವಂಥ ತಪ್ಪು ನನ್ನಿಂದ ಯಾವುದಾಗಿದೆ ಅಂತ ಸಚಿವ ಎಂಬಿ ಪಾಟೀಲರೇ ಸ್ಪಷ್ಟಪಡಿಸಬೇಕು: ಚಕ್ರವರ್ತಿ ಸೂಲಿಬೆಲೆ, ಚಿಂತಕ

ಸಚಿವ ಎಂಬಿ ಪಾಟೀಲ್ ಜೈಲಿಗೆ ಹಾಕಿಸಬೇಕಾಗುತ್ತದೆ ಅಂತ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಚಕ್ರವರ್ತಿ ಸೂಲಿಬೆಲೆ, ಜೈಲಿಗೆ ಹಾಕಿಸುವಂಥ ಯಾವ ಪ್ರಮಾದ ತನ್ನಿಂದ ಜರುಗಿದೆ ಅಂತ ಸಚಿವರೇ ಹೇಳಬೇಕು. ಅಸಲು ಸಂಗತಿಯೇನೆಂದರೆ ಅಧಿಕಾರದಲ್ಲಿರುವವರಿಗೆ ಅವರಿಗೆ ಸಹ್ಯವಾಗದ ಸತ್ಯಗಳನ್ನು ಮಾತಾಡಿದರೆ, ಆಡಳಿತದಲ್ಲಿನ ಅಪಸವ್ಯಗಳನ್ನು ಎತ್ತಿತೋರಿದರೆ ಪಥ್ಯವಾಗದು. ಅಧಿಕಾರ ತಮ್ಮ ಕೈಯಲ್ಲಿದೆ ಅನ್ನೋ ಕಾರಣಕ್ಕೆ ನಾಲಗೆಯನ್ನು ಬೇಕಾಬಿಟ್ಟಿ ಹರಿಬಿಡುತ್ತಾರೆ ಎಂದು ಹೇಳಿದ್ದರು. ಸರ್ಕಾರದಲ್ಲಿರುವವರು ಕೆಲಸಕ್ಕೆ ಬಾರದ ಮಾತುಗಳನ್ನಾಡುವ ಬದಲು ಜನರಿಗೆ ನೀಡಿದ ಗ್ಯಾರಂಟಿಗಳನ್ನು ಯಾವುದೇ ಗೊಂದಲವಿಲ್ಲದೆ ಈಡೇರಿಸುವ ಕಡೆ ಗಮನ ನೀಡಬೇಕೆಂದು ಅವರು ಒತ್ತಾಯಿಸಿದ್ದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:26 pm, Tue, 6 June 23

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ