AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೇ ಮಾತನಾಡಿದರೂ ಜೈಲಿಗೆ ಹಾಕ್ತೀವಿ ಎನ್ನಲು ಇದು ತಾಲಿಬಾನ್ ಆಡಳಿತ ಅಲ್ಲ; ಎಂಬಿ ಪಾಟೀಲ್​ಗೆ ಯತ್ನಾಳ್ ತಿರುಗೇಟು

ಯಾರೇ ಮಾತಾಡಿದ್ರು ಜೈಲಿಗೆ ಹಾಕ್ತೀವಿ ಅಂತ ಹೇಳೋಕ್ಕೆ ಇದು ತಾಲಿಬಾನ್ ಆಡಳಿತ ಅಲ್ಲ, ಕರ್ನಾಟಕ ಎನ್ನುವುದನ್ನು ಎಂಬಿ ಪಾಟೀಲ್ ಮರೆಯಬಾರದು ಎಂದ ಯತ್ನಾಳ್.

ಯಾರೇ ಮಾತನಾಡಿದರೂ ಜೈಲಿಗೆ ಹಾಕ್ತೀವಿ ಎನ್ನಲು ಇದು ತಾಲಿಬಾನ್ ಆಡಳಿತ ಅಲ್ಲ; ಎಂಬಿ ಪಾಟೀಲ್​ಗೆ ಯತ್ನಾಳ್ ತಿರುಗೇಟು
ಬಸನಗೌಡ ಪಾಟೀಲ್ ಯತ್ನಾಳ್
ಗಣಪತಿ ಶರ್ಮಾ
|

Updated on:Jun 06, 2023 | 7:27 PM

Share

ಬೆಂಗಳೂರು: ವಾಗ್ಮಿ ಚಕ್ರವರ್ತಿ ಸೂಲಿಬೆಲೆಗೆ ಸಚಿವ ಎಂಬಿ ಪಾಟೀಲ್ ಎಚ್ಚರಿಕೆ ನೀಡಿದ್ದಕ್ಕೆ ಖಾರವಾಗಿ ತಿರುಗೇಟು ನೀಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal), ಯಾರೇ ಮಾತನಾಡಿದರೂ ಜೈಲಿಗೆ ಹಾಕ್ತೀವಿ ಎನ್ನಲು ಇದು ತಾಲಿಬಾನ್ ಆಡಳಿತ ಅಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಹಿಟ್ಲರ್ ಆಡಳಿತವಿದೆ ಎಂದು ಹೇಳಿದ್ದ ಚಕ್ರವರ್ತಿ ಸೂಲಿಬೆಲೆಗೆ ಸಚಿವ ಎಂಬಿ ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದರು. ಈ ಹಿಂದೆ ಹಿಜಾಬ್, ಹಲಾಲ್ ವಿಚಾರದಲ್ಲಿ ಗಲಾಟೆ ಮಾಡಿದ ಹಾಗೆ ಈಗ ನಾಟಕ ಮಾಡಿದರೆ ಅದಕ್ಕೆ ತಡೆಯೊಡ್ಡಲಿದ್ದೇವೆ. ಇನ್ನು ಮುಂದೆ ಅಂಥದ್ದೆಲ್ಲ ನಡೆಯಲ್ಲ. ಏನಾದರೂ ಗಲಾಟೆ ಮಾಡಿದರೆ ಜೈಲು ಕಂಬಿ ಎಣಿಸಬೇಕಾಗುತ್ತದೆ ಎಂದು ಎಂಬಿ ಪಾಟೀಲ್ ಎಚ್ಚರಿಕೆ ನೀಡಿದ್ದರು.

ಎಂಬಿ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಯತ್ನಾಳ್, ಯಾರೇ ಮಾತಾಡಿದ್ರು ಜೈಲಿಗೆ ಹಾಕ್ತೀವಿ ಅಂತ ಹೇಳೋಕ್ಕೆ ಇದು ತಾಲಿಬಾನ್ ಆಡಳಿತ ಅಲ್ಲ, ಕರ್ನಾಟಕ ಎನ್ನುವುದನ್ನು ಎಂಬಿ ಪಾಟೀಲ್ ಮರೆಯಬಾರದು. ಎಫ್​ಐಆರ್ ಮಾಡಿಸ್ತೀವಿ, ಜೈಲಿಗೆ ಕಳುಹಿಸ್ತೀವಿ ಎಂದು ಪದೇ ಪದೇ ಅನ್ನುವುದಕ್ಕೆ ಇವರೇನು ನ್ಯಾಯಾಧೀಶರೇ? ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಇದೆಲ್ಲ ಸಲ್ಲದು, ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಅವರ ಮಂತ್ರಿಗಳು ಅಸಹಿಷ್ಣು ಆಗಬಾರದು ಎಂದು ಉಲ್ಲೇಖಿಸಿದ್ದಾರೆ.

ಭಾರತ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದ ಅಡಿ ನಡೆಯುವುದು. ಸಂವಿಧಾನದ ವಿಧಿ 19 ರ ಬಗ್ಗೆ ತಿಳಿದುಕೊಳ್ಳಬೇಕಾಗಿ ಪಾಟೀಲ್ ಅವರನ್ನು ತಾಕೀತು ಮಾಡುತ್ತೇನೆ ಎಂದು ಯತ್ನಾಳ್ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Chakravarthy Sulibele; ಜೈಲಿಗೆ ಹಾಕುವಂಥ ತಪ್ಪು ನನ್ನಿಂದ ಯಾವುದಾಗಿದೆ ಅಂತ ಸಚಿವ ಎಂಬಿ ಪಾಟೀಲರೇ ಸ್ಪಷ್ಟಪಡಿಸಬೇಕು: ಚಕ್ರವರ್ತಿ ಸೂಲಿಬೆಲೆ, ಚಿಂತಕ

ಸಚಿವ ಎಂಬಿ ಪಾಟೀಲ್ ಜೈಲಿಗೆ ಹಾಕಿಸಬೇಕಾಗುತ್ತದೆ ಅಂತ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಚಕ್ರವರ್ತಿ ಸೂಲಿಬೆಲೆ, ಜೈಲಿಗೆ ಹಾಕಿಸುವಂಥ ಯಾವ ಪ್ರಮಾದ ತನ್ನಿಂದ ಜರುಗಿದೆ ಅಂತ ಸಚಿವರೇ ಹೇಳಬೇಕು. ಅಸಲು ಸಂಗತಿಯೇನೆಂದರೆ ಅಧಿಕಾರದಲ್ಲಿರುವವರಿಗೆ ಅವರಿಗೆ ಸಹ್ಯವಾಗದ ಸತ್ಯಗಳನ್ನು ಮಾತಾಡಿದರೆ, ಆಡಳಿತದಲ್ಲಿನ ಅಪಸವ್ಯಗಳನ್ನು ಎತ್ತಿತೋರಿದರೆ ಪಥ್ಯವಾಗದು. ಅಧಿಕಾರ ತಮ್ಮ ಕೈಯಲ್ಲಿದೆ ಅನ್ನೋ ಕಾರಣಕ್ಕೆ ನಾಲಗೆಯನ್ನು ಬೇಕಾಬಿಟ್ಟಿ ಹರಿಬಿಡುತ್ತಾರೆ ಎಂದು ಹೇಳಿದ್ದರು. ಸರ್ಕಾರದಲ್ಲಿರುವವರು ಕೆಲಸಕ್ಕೆ ಬಾರದ ಮಾತುಗಳನ್ನಾಡುವ ಬದಲು ಜನರಿಗೆ ನೀಡಿದ ಗ್ಯಾರಂಟಿಗಳನ್ನು ಯಾವುದೇ ಗೊಂದಲವಿಲ್ಲದೆ ಈಡೇರಿಸುವ ಕಡೆ ಗಮನ ನೀಡಬೇಕೆಂದು ಅವರು ಒತ್ತಾಯಿಸಿದ್ದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:26 pm, Tue, 6 June 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ