AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ವಿರುದ್ಧ ಕನ್ಹಯ್ಯ ಕುಮಾರ್ ಹೇಳಿಕೆ: ಇವರ ತಾತ-ಮುತ್ತಾತ ಹೀಗೆ ಹೇಳಿ ಕಳೆದು ಹೋಗಿದ್ದಾರೆ ಎಂದ ಸಿಟಿ ರವಿ

Kanhaiya Kumar statement: ಬಿಜೆಪಿ ವಿರುದ್ಧ ಕನ್ಹಯ್ಯ ಕುಮಾರ್ ನೀಡಿರುವ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದು, ಇವರ ತಾತ-ಮುತ್ತಾತ ಹೀಗೆ ಹೇಳಿ ಕಳೆದು ಹೋಗಿದ್ದಾರೆ ಎಂದು ವ್ಯಾಖ್ಯಾನಿಸಿದ್ದಾರೆ.

ಬಿಜೆಪಿ ವಿರುದ್ಧ ಕನ್ಹಯ್ಯ ಕುಮಾರ್ ಹೇಳಿಕೆ: ಇವರ ತಾತ-ಮುತ್ತಾತ ಹೀಗೆ ಹೇಳಿ ಕಳೆದು ಹೋಗಿದ್ದಾರೆ ಎಂದ ಸಿಟಿ ರವಿ
ಕನ್ಹಯ್ಯ ಕುಮಾರ್ ತಾತ-ಮುತ್ತಾತ ಹೀಗೆ ಹೇಳಿ ಕಳೆದು ಹೋಗಿದ್ದಾರೆ ಎಂದ ಸಿಟಿ ರವಿ
TV9 Web
| Updated By: ಸಾಧು ಶ್ರೀನಾಥ್​|

Updated on:Oct 02, 2021 | 1:07 PM

Share

ಚಿಕ್ಕಮಗಳೂರು: ಬಿಜೆಪಿ ವಿರುದ್ಧ ಕನ್ಹಯ್ಯ ಕುಮಾರ್ ನೀಡಿರುವ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದು, ಇವರ ತಾತ-ಮುತ್ತಾತ ಹೀಗೆ ಹೇಳಿ ಕಳೆದು ಹೋಗಿದ್ದಾರೆ. ಅವರ ಸಮಾಧಿ ಮಣ್ಣಿನ ಮೇಲೆ ಸಂಘ, ಬಿಜೆಪಿ ಬಲವಾಗಿದೆ. ಕನ್ಹಯ್ಯ ಕುಮಾರ್ ತುಕ್ಡೆ ಗ್ಯಾಂಗಿನ ನಾಯಕ ಎಂದು ವ್ಯಾಖ್ಯಾನಿಸಿದ್ದಾರೆ.

ಹಿಟ್ಟು ಹಳಸಿತ್ತು, ಡ್ಯಾಶ್ ಕಾದಿತ್ತು ಅನ್ನೋ ಗಾದೆ ಮಾತಿದೆ. ಗಾದೆ ಮಾತಿನ ಪರಿಸ್ಥಿತಿ ಕಾಂಗ್ರೆಸ್​ನದ್ದಾಗಿದೆ ಎಂದು ಸಿ.ಟಿ.ರವಿ ಇದೇ ವೇಳೆ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್​ನಲ್ಲಿರೋದು ವಂಶ ಪಾರಂಪರ್ಯ ಮತ್ತು ಪರಿವಾರವಾದ. ಪರಿವಾರವಾದ ಬಂದರೆ ಅಲ್ಲಿ ಮಾಲೀಕತ್ವ ಬರುತ್ತೆ. ಅಲ್ಲಿ ಮಾಲೀಕರು, ನೌಕರರು, ಗುಲಾಮರು ಇರುತ್ತಾರೆ. ತುಕ್ಡೆ ಗ್ಯಾಂಗ್​ನವರಿಗೆ ಗತಿ ಇರ್ಲಿಲ್ಲ, ಎಲೆಕ್ಷನ್​ನಲ್ಲಿ ಸೋತ್ರು. ಕನ್ಹಯ್ಯ ಕುಮಾರ್​ನಂತವರು ಬಹಳ ಮಾತನಾಡಿದ್ದಾರೆ. ಬಹಳ ಮಾತನಾಡಿ ಮಣ್ಣಾಗಿದ್ದಾರೆ ಎಂದು ಸಿ.ಟಿ.ರವಿ ಹೇಳಿದರು.

ಮತಾಂತರ ಎಂಬುದು ದೇಶಾಂತರಕ್ಕೆ ಸಮ ಎಂದಿದ್ದರು ಗಾಂಧೀಜಿ: ಮತಾಂತರ ಎಂಬುದು ದೇಶಾಂತರಕ್ಕೆ ಸಮ ಎಂದು ಗಾಂಧೀಜಿ ಹೇಳಿದ್ದರು. ಮತಾಂತರಿಯಾದವ ತನ್ನ ಸಂಸ್ಕೃತಿಯನ್ನ ಬದಲಿಸ್ತಾನೆ. ಮುಂದೆ… ದೇಶಾಂತರದ ಬಗ್ಗೆ ಯೋಚಿಸ್ತಾನೆ ಎಂದಿದ್ದರು. ಗಾಂಧಿಯೇ ಹೇಳಿದ್ರು ಅಂದ್ರೆ ಅಪಾಯ ಗ್ರಹಿಸಿದ್ದರು ಎಂದರ್ಥ. ಹಣ, ಹೆಣ್ಣಿನ ಪ್ರಲೋಭನೆ, ಅಸಹಾಯಕತೆ ಬಳಸಿ ಮತಾಂತರ ನಡೆಯುತ್ತದೆ. ಮತಾಂತರದ ವಿರುದ್ಧ ಸರ್ಕಾರ ಕಠಿಣ ಕ್ರಮಕೈಗೊಂಡರೆ ಸ್ವಾಗತ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಈಗಿನ ಘೋಷವಾಕ್ಯ ‘ಭಾರತ್ ತೇರೇ ಟುಕ್ಡೇ ಹೋಂಗೆ’; ಕನ್ಹಯ್ಯ ಕುಮಾರ್ ಕಾಂಗ್ರೆಸ್ ಸೇರ್ಪಡೆಗೆ ಬಿಜೆಪಿ ಪೋಸ್ಟರ್

ಇದನ್ನೂ ಓದಿ: ಕನ್ಹಯ್ಯ ಕುಮಾರ್ ಕಾಂಗ್ರೆಸ್ ಪಕ್ಷದ ಆಶಾಕಿರಣವಾಗಿದ್ದಾರೆ ಅಂತ ರಾಜಕೀಯ ವಿಶ್ಲೇಷಕರು ಹೇಳುತ್ತಿರುವುದರಲ್ಲಿ ಹುರುಳಿದೆಯೇ?

EX CM Siddaramaiah Pressmeet | ಮಾಜಿ ಸಿಎಂ ಸಿದ್ದರಾಮಯ್ಯ​ ಸುದ್ದಿಗೋಷ್ಠಿ | TV9 Kannada

Published On - 12:28 pm, Sat, 2 October 21

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್