AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಮುಖಂಡರು ಹಾಗೆ ಮಾತನಾಡಿದ್ದು ತಪ್ಪು: ಡಿಕೆಶಿ ಪರ ಕುಮಾರ್​ ಬಂಗಾರಪ್ಪ ಹೇಳಿಕೆ

ಕಾಂಗ್ರೆಸ್ ಮುಖಂಡರು ಹಾಗೆ ಮಾತನಾಡಿದ್ದು ತಪ್ಪು. ಯಾವುದೇ ವೇದಿಕೆಗಳಲ್ಲಿ ಮಾತಾಡುವಾಗ ಎಚ್ಚರ ವಹಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡರು ಹಾಗೆ ಮಾತನಾಡಿದ್ದು ತಪ್ಪು: ಡಿಕೆಶಿ ಪರ ಕುಮಾರ್​ ಬಂಗಾರಪ್ಪ ಹೇಳಿಕೆ
ಬಿಜೆಪಿ ಶಾಸಕ ಕುಮಾರ ಬಂಗಾರಪ್ಪ
TV9 Web
| Edited By: |

Updated on: Oct 15, 2021 | 2:41 PM

Share

ಬೆಂಗಳೂರು: ಡಿ.ಕೆ.ಶಿವಕುಮಾರ್ ಕುರಿತು ಕಾಂಗ್ರೆಸ್ ಪಕ್ಷದ ನಾಯಕರು ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ, ಕಾಂಗ್ರೆಸ್ ಮುಖಂಡರು ಹಾಗೆ ಮಾತನಾಡಬಾರದಿತ್ತು ಎಂದು ಹೇಳಿದ್ದಾರೆ. ಡಿಕೆಶಿ ಪರ ಮೃಧು ಧೋರಣೆಯಲ್ಲಿ ಮಾತನಾಡಿರುವ ಅವರು, ಡಿಕೆಶಿ ಭ್ರಷ್ಟಾಚಾರ ಮಾಡಿದ್ದಾರೋ, ಇಲ್ಲವೋ ನನಗೆ ಗೊತ್ತಿಲ್ಲ. ಆದರೆ ಕಾಂಗ್ರೆಸ್ ಮುಖಂಡರು ಹಾಗೆ ಮಾತನಾಡಿದ್ದು ತಪ್ಪು. ಯಾವುದೇ ವೇದಿಕೆಗಳಲ್ಲಿ ಮಾತಾಡುವಾಗ ಎಚ್ಚರ ವಹಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ.

ಈಗ ಕಾಂಗ್ರೆಸ್ ಪಕ್ಷದವರೇ ನಮಗೆ ಅಸ್ತ್ರ ಕೊಟ್ಟಿದ್ದಾರೆ, ಬಾಣ ಕೊಟ್ಟಿದ್ದಾರೆ. ನಮ್ಮ ಬಳಿ ಬಿಲ್ಲಿದೆ, ನಾವು ಬಾಣ ಪ್ರಯೋಗ ಮಾಡುತ್ತೇವೆ ಎಂದು ಮಾರ್ಮಿಕವಾಗಿ ನುಡಿದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತೇನೆ ಎಂಬುದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ ಅವರು, ಕಾಂಗ್ರೆಸ್​ನ ಯಾವುದೇ ನಾಯಕರು ನನ್ನನ್ನು ಸಂಪರ್ಕಿಸಿಲ್ಲ. ನ.10ಕ್ಕೆ ಮಗಳ ಮದುವೆಗೆ ಆಹ್ವಾನಿಸಲು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದೆ. ಈ ವೇಳೆ ನನ್ನ ತಮ್ಮ ಮಧು ಅಲ್ಲಿಯೇ ಇದ್ದ. ಅವನನ್ನು ನೋಡಿ ಸಂತಸವಾಯ್ತು. ಸಿದ್ದರಾಮಯ್ಯ ಜತೆ ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ ಎಂದರು.

ನಾನು ಬಿಜೆಪಿಯಲ್ಲಿಯೇ ಇರುತ್ತೇನೆ. ಬಿಜೆಪಿಯಿಂದಲೇ ಸ್ಪರ್ಧೆ ಮಾಡುತ್ತೇನೆ. ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ತೀನಿ ಅನ್ನೋದು ಸತ್ಯಕ್ಕೆ ದೂರವಾದ ಮಾತು ಎಂದು ಸಿದ್ದರಾಮಯ್ಯ ಭೇಟಿ ನಂತರ ಎದ್ದಿದ್ದ ಊಹಾಪೋಹಗಳ ಬಗ್ಗೆ ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ದಿನಾಂಕ ನಿಗದಿ; ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸಮ್ಮುಖದಲ್ಲಿ ಕೈ ಪಕ್ಷಕ್ಕೆ ಸೇರ್ಪಡೆ

ಇದನ್ನೂ ಓದಿ: ನನ್ನನ್ನು ಬೆಳೆಸಿದ ಧೀಮಂತ ನಾಯಕ ಬಂಗಾರಪ್ಪ: ಡಿ.ಕೆ. ಶಿವಕುಮಾರ್

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ