AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics: ಡಿಕೆ ಸುರೇಶ್ ರಾಜಕೀಯ ನಿವೃತ್ತಿ ಮಾತು: ಸ್ಫೋಟಕ ಕಾರಣ ಕೊಟ್ಟ ಆರ್ ಅಶೋಕ್

ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರು ರಾಜಕೀಯ ನಿವೃತ್ತಿ ಮಾತುಗಳನ್ನಾಡಿದ್ದಾರೆ. ಮತ್ತೊಂದೆಡೆ ಇದಕ್ಕೆ ಬಿಜೆಪಿ ನಾಯಕ ಆರ್ ಅಶೋಕ್ ಸ್ಪೋಟಕ ಕಾರಣ ಕೊಟ್ಟಿದ್ದಾರೆ.

Karnataka Politics: ಡಿಕೆ ಸುರೇಶ್ ರಾಜಕೀಯ ನಿವೃತ್ತಿ ಮಾತು: ಸ್ಫೋಟಕ ಕಾರಣ ಕೊಟ್ಟ ಆರ್ ಅಶೋಕ್
ಡಿಕೆ ಸುರೇಶ್, ಆರ್ ಅಶೋಕ್
Follow us
ರಮೇಶ್ ಬಿ. ಜವಳಗೇರಾ
|

Updated on: Jun 18, 2023 | 3:29 PM

ಬೆಂಗಳೂರು: ಕಾಂಗ್ರೆಸ್ ಸಂಸದ ಡಿಕೆ ಶಿವಕುಮಾರ್ ಅವರು ಅದ್ಯಾಕೋ ರಾಜಕಾರಣದ ಬಗ್ಗೆ ಮಾತುಗಳನ್ನಾಡುತ್ತಿದ್ದು, ರಾಜಕಾರಣವೇ ಬೇಡ ಎಂಬ ಅರ್ಥದಲ್ಲಿ ಹೇಳುತ್ತಿದ್ದಾರೆ. ಇನ್ನು ಇದಕ್ಕೆ ಬಿಜೆಪಿ ಶಾಸಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಮೇಲೆ ಒಳ ಜಗಳ ಹೊರ ಬರುತ್ತಿದೆ. ಗ್ಯಾರಂಟಿಯಾಗಿ ಹೇಳುತ್ತೇನೆ ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಲ್ಲ. ಕರ್ನಾಟಕದಲ್ಲಿ ಅವರಿಬ್ಬರಿಗಿಂತ ಸಿದ್ದರಾಮಯ್ಯ ಪವರ್ ಫುಲ್​. ಅಧಿಕಾರ ಹಂಚಿಕೆ ಒಂದು ನಾಟಕ ಅಷ್ಟೇ. ಅದಕ್ಕಾಗಿ ಡಿ.ಕೆ.ಸುರೇಶ್ ರಾಜಕೀಯ ನಿವೃತ್ತಿ ಹೇಳಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.

ಇದನ್ನೂ ಓದಿ: ಕಾಂಗ್ರೆಸ್​ಗೆ ಬಿಗ್ ಶಾಕ್: ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತಾರಾ ಡಿಕೆ ಸುರೇಶ್?

ಬೆಂಗಳೂರಿನಲ್ಲಿ ಟಿವಿ9 ಜೊತೆ ಮಾತನಾಡಿದ ಅಶೋಕ್, ಡಿ.ಕೆ.ಶಿವಕುಮಾರ್​ ಸಿಎಂ ಆಗಲ್ಲವೆಂದು ಡಿ.ಕೆ.ಸುರೇಶ್​ಗೆ ಗೊತ್ತಾಗಿದೆ. ಕಾಂಗ್ರೆಸ್​ ಒಂದು ರೀತಿ ಒಡೆದ ಮನೆ ಆಗಿದೆ. ಶ್ಯಾಡೋ ಮುಖ್ಯಮಂತ್ರಿಯಂತೆ ನಟಿಸಲು ಡಿಕೆ ಶಿವಕುಮಾರ್ ಹೋಗುತ್ತಿದ್ದಾರೆ. ಇನ್ನು 6 ತಿಂಗಳಲ್ಲಿ ಸಿದ್ದರಾಮಯ್ಯ, ಡಿಕೆ ಜಗಳ ಬಹಿರಂಗವಾಗುತ್ತದೆ ಎಂದು ಅಶೋಕ್ ಭವಿಷ್ಯ ನುಡಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅವರಲ್ಲಿನ ಒಳ ಜಗಳ ಒಂದೊಂದಾಗಿ ಹೊರ ಬರುತ್ತಿದೆ. ಕಾಂಗ್ರೆಸ್ ಗ್ಯಾರಂಟಿ ತರ ನಾನು ಗ್ಯಾರೆಂಟಿಯಾಗಿ ಹೇಳುತ್ತೇನೆ ಸಿದ್ದರಾಮಯ್ಯ ಅಧಿಕಾರವನ್ನು ಬಿಟ್ಟುಕೊಡಲ್ಲ. ರಾಜಸ್ಥಾನದಲ್ಲಿ ಶೇರಿಂಗ್ ಆಗಿದ್ದರೂ ಬಿಟ್ಟು ಕೊಟ್ಟಿಲ್ಲ. ಮಧ್ಯಪ್ರದೇಶದಲ್ಲಿ ಅಧಿಕಾರ ಬಿಟ್ಟು ಕೊಟ್ಟಿಲ್ಲ. ಕರ್ನಾಟಕದಲ್ಲಿ ಅವರಿಬ್ಬರಕ್ಕಿಂತ ಸಿದ್ದರಾಮಯ್ಯ ಪವರ್ ಪುಲ್ ಪವರ್ ಶೇರಿಂಗ್ ವಿಚಾರ ಒಂದು ನಾಟಕ ಅಷ್ಟೇ. ಡಿಕೆ ಶಿವಕುಮಾರ್ ಒಂದು ಕನಸು ಅಷ್ಟೇ. ಅದಕ್ಕೆ ಅವರ ಸಹೋದರ ಡಿಕೆ ಸುರೇಶ್ ರಾಜಕೀಯ ನಿವೃತ್ತಿ ಹೇಳುತ್ತಿದ್ದಾರೆ. ಡಿಕೆ ಸುರೇಶ್ ಗೆ ಡಿಕೆ ಶಿವಕುಮಾರ್ ಇನ್ಮುಂದೆ ಸಿಎಂ ಆಗೋದೇ ಇಲ್ಲ ಎಂದು ಗೊತ್ತಾಗಿದೆ. ಆದ್ದರಿಂದ ಈ ರೀತಿಯಾದ ಹೇಳಿಕೆಯನ್ನು ಕೊಟ್ಟಿದ್ದಾರೆ ಎಂದು ಹೇಳಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ