AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics: ಡಿಕೆ ಸುರೇಶ್ ರಾಜಕೀಯ ನಿವೃತ್ತಿ ಮಾತು: ಸ್ಫೋಟಕ ಕಾರಣ ಕೊಟ್ಟ ಆರ್ ಅಶೋಕ್

ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರು ರಾಜಕೀಯ ನಿವೃತ್ತಿ ಮಾತುಗಳನ್ನಾಡಿದ್ದಾರೆ. ಮತ್ತೊಂದೆಡೆ ಇದಕ್ಕೆ ಬಿಜೆಪಿ ನಾಯಕ ಆರ್ ಅಶೋಕ್ ಸ್ಪೋಟಕ ಕಾರಣ ಕೊಟ್ಟಿದ್ದಾರೆ.

Karnataka Politics: ಡಿಕೆ ಸುರೇಶ್ ರಾಜಕೀಯ ನಿವೃತ್ತಿ ಮಾತು: ಸ್ಫೋಟಕ ಕಾರಣ ಕೊಟ್ಟ ಆರ್ ಅಶೋಕ್
ಡಿಕೆ ಸುರೇಶ್, ಆರ್ ಅಶೋಕ್
ರಮೇಶ್ ಬಿ. ಜವಳಗೇರಾ
|

Updated on: Jun 18, 2023 | 3:29 PM

Share

ಬೆಂಗಳೂರು: ಕಾಂಗ್ರೆಸ್ ಸಂಸದ ಡಿಕೆ ಶಿವಕುಮಾರ್ ಅವರು ಅದ್ಯಾಕೋ ರಾಜಕಾರಣದ ಬಗ್ಗೆ ಮಾತುಗಳನ್ನಾಡುತ್ತಿದ್ದು, ರಾಜಕಾರಣವೇ ಬೇಡ ಎಂಬ ಅರ್ಥದಲ್ಲಿ ಹೇಳುತ್ತಿದ್ದಾರೆ. ಇನ್ನು ಇದಕ್ಕೆ ಬಿಜೆಪಿ ಶಾಸಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಮೇಲೆ ಒಳ ಜಗಳ ಹೊರ ಬರುತ್ತಿದೆ. ಗ್ಯಾರಂಟಿಯಾಗಿ ಹೇಳುತ್ತೇನೆ ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಲ್ಲ. ಕರ್ನಾಟಕದಲ್ಲಿ ಅವರಿಬ್ಬರಿಗಿಂತ ಸಿದ್ದರಾಮಯ್ಯ ಪವರ್ ಫುಲ್​. ಅಧಿಕಾರ ಹಂಚಿಕೆ ಒಂದು ನಾಟಕ ಅಷ್ಟೇ. ಅದಕ್ಕಾಗಿ ಡಿ.ಕೆ.ಸುರೇಶ್ ರಾಜಕೀಯ ನಿವೃತ್ತಿ ಹೇಳಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.

ಇದನ್ನೂ ಓದಿ: ಕಾಂಗ್ರೆಸ್​ಗೆ ಬಿಗ್ ಶಾಕ್: ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತಾರಾ ಡಿಕೆ ಸುರೇಶ್?

ಬೆಂಗಳೂರಿನಲ್ಲಿ ಟಿವಿ9 ಜೊತೆ ಮಾತನಾಡಿದ ಅಶೋಕ್, ಡಿ.ಕೆ.ಶಿವಕುಮಾರ್​ ಸಿಎಂ ಆಗಲ್ಲವೆಂದು ಡಿ.ಕೆ.ಸುರೇಶ್​ಗೆ ಗೊತ್ತಾಗಿದೆ. ಕಾಂಗ್ರೆಸ್​ ಒಂದು ರೀತಿ ಒಡೆದ ಮನೆ ಆಗಿದೆ. ಶ್ಯಾಡೋ ಮುಖ್ಯಮಂತ್ರಿಯಂತೆ ನಟಿಸಲು ಡಿಕೆ ಶಿವಕುಮಾರ್ ಹೋಗುತ್ತಿದ್ದಾರೆ. ಇನ್ನು 6 ತಿಂಗಳಲ್ಲಿ ಸಿದ್ದರಾಮಯ್ಯ, ಡಿಕೆ ಜಗಳ ಬಹಿರಂಗವಾಗುತ್ತದೆ ಎಂದು ಅಶೋಕ್ ಭವಿಷ್ಯ ನುಡಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅವರಲ್ಲಿನ ಒಳ ಜಗಳ ಒಂದೊಂದಾಗಿ ಹೊರ ಬರುತ್ತಿದೆ. ಕಾಂಗ್ರೆಸ್ ಗ್ಯಾರಂಟಿ ತರ ನಾನು ಗ್ಯಾರೆಂಟಿಯಾಗಿ ಹೇಳುತ್ತೇನೆ ಸಿದ್ದರಾಮಯ್ಯ ಅಧಿಕಾರವನ್ನು ಬಿಟ್ಟುಕೊಡಲ್ಲ. ರಾಜಸ್ಥಾನದಲ್ಲಿ ಶೇರಿಂಗ್ ಆಗಿದ್ದರೂ ಬಿಟ್ಟು ಕೊಟ್ಟಿಲ್ಲ. ಮಧ್ಯಪ್ರದೇಶದಲ್ಲಿ ಅಧಿಕಾರ ಬಿಟ್ಟು ಕೊಟ್ಟಿಲ್ಲ. ಕರ್ನಾಟಕದಲ್ಲಿ ಅವರಿಬ್ಬರಕ್ಕಿಂತ ಸಿದ್ದರಾಮಯ್ಯ ಪವರ್ ಪುಲ್ ಪವರ್ ಶೇರಿಂಗ್ ವಿಚಾರ ಒಂದು ನಾಟಕ ಅಷ್ಟೇ. ಡಿಕೆ ಶಿವಕುಮಾರ್ ಒಂದು ಕನಸು ಅಷ್ಟೇ. ಅದಕ್ಕೆ ಅವರ ಸಹೋದರ ಡಿಕೆ ಸುರೇಶ್ ರಾಜಕೀಯ ನಿವೃತ್ತಿ ಹೇಳುತ್ತಿದ್ದಾರೆ. ಡಿಕೆ ಸುರೇಶ್ ಗೆ ಡಿಕೆ ಶಿವಕುಮಾರ್ ಇನ್ಮುಂದೆ ಸಿಎಂ ಆಗೋದೇ ಇಲ್ಲ ಎಂದು ಗೊತ್ತಾಗಿದೆ. ಆದ್ದರಿಂದ ಈ ರೀತಿಯಾದ ಹೇಳಿಕೆಯನ್ನು ಕೊಟ್ಟಿದ್ದಾರೆ ಎಂದು ಹೇಳಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ