AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramesh Jarkiholi Audio: ಡಿ.ಕೆ.ಶಿವಕುಮಾರ್​​ ವಿರುದ್ಧ ಆಡಿಯೋ ಬಿಡುಗಡೆ ಮಾಡಿದ ರಮೇಶ್​ ಜಾರಕಿಹೊಳಿ: ಆ 18 ಸೆಕೆಂಡ್​ ಆಡಿಯೋದಲ್ಲೇನಿದೆ?

ರಾಜಕೀಯ ಬದ್ಧ ವೈರಿಗಳಾದ ರಮೇಶ್ ಜಾರಕಿಹೊಳಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಮತ್ತೊಂದು ಮಾತಿನ ಸಮರ ಶುರುವಾಗಿದೆ. ಇದೀಗ ರಮೇಶ್ ಜಾರಕಿಹೊಳಿ ಅವರು ಡಿಕೆಶಿ ವಿರುದ್ಧ ಆಡಿಯೋ ಬಾಂಬ್ ಸ್ಫೋಟಿಸಿದ್ದಾರೆ.

Ramesh Jarkiholi Audio: ಡಿ.ಕೆ.ಶಿವಕುಮಾರ್​​ ವಿರುದ್ಧ ಆಡಿಯೋ ಬಿಡುಗಡೆ ಮಾಡಿದ ರಮೇಶ್​ ಜಾರಕಿಹೊಳಿ: ಆ 18 ಸೆಕೆಂಡ್​ ಆಡಿಯೋದಲ್ಲೇನಿದೆ?
ಡಿ.ಕೆ.ಶಿವಕುಮಾರ್, ರಮೇಶ್​ ಜಾರಕಿಹೊಳಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jan 30, 2023 | 2:37 PM

ಬೆಂಗಳೂರು: ವಿಧಾನಸಭೆ ಚುನಾವಣೆ ಹೊತ್ತಲ್ಲೇ ಆಡಿಯೋ ಪಾಲಿಟಿಕ್ಸ್ ಶುರುವಾಗಿದೆ. ತಮ್ಮನ್ನು ಸಿ.ಡಿ ಪ್ರಕರಣದಲ್ಲಿ (CD Case) ಸಿಲುಕಿಸಿದ್ದೇ ಡಿ.ಕೆ ಶಿವಕುಮಾರ್ (KPCC President DK Shivakumar) ಆ್ಯಂಡ್ ​ ಕಂಪನಿ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಎಂದು ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ವಿರುದ್ಧ ಆಡಿಯೋ ಬಾಂಬ್ ಸಿಡಿಸಿದ್ದಾರೆ. ಇದರೊಂದಿಗೆ ಬೆಳಗಾವಿ ಸಾಹುಕಾರ್ ಡಿಕೆಶಿ ಮಾತನಾಡಿದ್ದಾರೆ ಎನ್ನಲಾದ 18 ಸೆಕೆಂಡ್​ ಆಡಿಯೋ ಬಿಡುಗಡೆ ಮಾಡಿ ರಾಜ್ಯ ರಾಜಕಾರಣದಲ್ಲಿ ಹಲ್ ಚಲ್ ಎಬ್ಬಿಸಿದ್ದಾರೆ.

ಇದನ್ನೂ ಓದಿ: ಸಿಡಿ ಷಡ್ಯಂತ್ರದಲ್ಲಿ ಡಿಕೆ ಶಿವಕುಮಾರ ಭಾಗಿ: ಶಾಸಕರು, ಅಧಿಕಾರಿಗಳ ಸೇರಿದಂತೆ 120 ಜನರ ಸಿಡಿಗಳಿವೆ- ರಮೇಶ ಜಾರಕಿಹೋಳಿ

ಇಂದು (ಜ.30) ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಮೇಶ್ ಜಾರಕಿಹೊಳಿ, ತಮ್ಮ ವಿರುದ್ಧದ ಸಿಡಿ ಬಗ್ಗೆ ಪ್ರಾಸ್ತಾಪಿಸಿದರು. ಅಲ್ಲದೇ ಡಿಕೆ ಶಿವಕುಮಾರ್ ವಿರುದ್ಧ ಆಡಿಯೋ ಬಿಡುಗಡೆ ಮಾಡಿದರು. ನಮ್ಮ ಮನೆಯಲ್ಲಿ ರೇಡ್​​ ಆದಾಗ 45 ಕೋಟಿ ರೂ. ಸೀಜ್‌ ಆಗಿತ್ತು. ನನಗೆ ದುಬೈ, ಲಂಡನ್, ಮುಂಬೈನಲ್ಲಿ ಫ್ಲ್ಯಾಟ್​​ ಇದೆ. ನಮ್ಮ ಮನೆಯ ಮೇಲೆ ದಾಳಿ ಆದಾಗ ಹಣ ಸೀಜ್​​ ಆಗಿತ್ತು ಎಂದು ಮಾತನಾಡಿರುವುದು ಈ ಆಡಿಯೋದಲ್ಲಿದ್ದು, ಇದು ಡಿಕೆ ಶಿವಕುಮಾರ ಅವರದ್ದೇ ಎಂದು ರಮೇಶ್ ಜಾರಕಿಹೊಳಿ ಆಡಿಯೋ ರಿಲೀಸ್ ಮಾಡಿದ್ದಾರೆ.

ಇನ್ನು ಡಿಕೆಶಿ ಅತ್ತ ಶ್ರೀನಗರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿದ್ದು, ಈ ಬಗ್ಗೆ ಇದುವರೆಗೂ ಯಾವುದೇ ಪ್ರತಿಕ್ರಿಯಿಸಿಲ್ಲ. ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಡಿಕೆ ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಆಡಿಯೋ ಅಸ್ತ್ರ ಪ್ರಯೋಗಿಸಿದ್ದು, ಇದು ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ತಲುಪಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

Published On - 2:31 pm, Mon, 30 January 23

Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್