AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramesh Jarkiholi Audio: ಡಿ.ಕೆ.ಶಿವಕುಮಾರ್​​ ವಿರುದ್ಧ ಆಡಿಯೋ ಬಿಡುಗಡೆ ಮಾಡಿದ ರಮೇಶ್​ ಜಾರಕಿಹೊಳಿ: ಆ 18 ಸೆಕೆಂಡ್​ ಆಡಿಯೋದಲ್ಲೇನಿದೆ?

ರಾಜಕೀಯ ಬದ್ಧ ವೈರಿಗಳಾದ ರಮೇಶ್ ಜಾರಕಿಹೊಳಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಮತ್ತೊಂದು ಮಾತಿನ ಸಮರ ಶುರುವಾಗಿದೆ. ಇದೀಗ ರಮೇಶ್ ಜಾರಕಿಹೊಳಿ ಅವರು ಡಿಕೆಶಿ ವಿರುದ್ಧ ಆಡಿಯೋ ಬಾಂಬ್ ಸ್ಫೋಟಿಸಿದ್ದಾರೆ.

Ramesh Jarkiholi Audio: ಡಿ.ಕೆ.ಶಿವಕುಮಾರ್​​ ವಿರುದ್ಧ ಆಡಿಯೋ ಬಿಡುಗಡೆ ಮಾಡಿದ ರಮೇಶ್​ ಜಾರಕಿಹೊಳಿ: ಆ 18 ಸೆಕೆಂಡ್​ ಆಡಿಯೋದಲ್ಲೇನಿದೆ?
ಡಿ.ಕೆ.ಶಿವಕುಮಾರ್, ರಮೇಶ್​ ಜಾರಕಿಹೊಳಿ
TV9 Web
| Edited By: |

Updated on:Jan 30, 2023 | 2:37 PM

Share

ಬೆಂಗಳೂರು: ವಿಧಾನಸಭೆ ಚುನಾವಣೆ ಹೊತ್ತಲ್ಲೇ ಆಡಿಯೋ ಪಾಲಿಟಿಕ್ಸ್ ಶುರುವಾಗಿದೆ. ತಮ್ಮನ್ನು ಸಿ.ಡಿ ಪ್ರಕರಣದಲ್ಲಿ (CD Case) ಸಿಲುಕಿಸಿದ್ದೇ ಡಿ.ಕೆ ಶಿವಕುಮಾರ್ (KPCC President DK Shivakumar) ಆ್ಯಂಡ್ ​ ಕಂಪನಿ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಎಂದು ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ವಿರುದ್ಧ ಆಡಿಯೋ ಬಾಂಬ್ ಸಿಡಿಸಿದ್ದಾರೆ. ಇದರೊಂದಿಗೆ ಬೆಳಗಾವಿ ಸಾಹುಕಾರ್ ಡಿಕೆಶಿ ಮಾತನಾಡಿದ್ದಾರೆ ಎನ್ನಲಾದ 18 ಸೆಕೆಂಡ್​ ಆಡಿಯೋ ಬಿಡುಗಡೆ ಮಾಡಿ ರಾಜ್ಯ ರಾಜಕಾರಣದಲ್ಲಿ ಹಲ್ ಚಲ್ ಎಬ್ಬಿಸಿದ್ದಾರೆ.

ಇದನ್ನೂ ಓದಿ: ಸಿಡಿ ಷಡ್ಯಂತ್ರದಲ್ಲಿ ಡಿಕೆ ಶಿವಕುಮಾರ ಭಾಗಿ: ಶಾಸಕರು, ಅಧಿಕಾರಿಗಳ ಸೇರಿದಂತೆ 120 ಜನರ ಸಿಡಿಗಳಿವೆ- ರಮೇಶ ಜಾರಕಿಹೋಳಿ

ಇಂದು (ಜ.30) ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಮೇಶ್ ಜಾರಕಿಹೊಳಿ, ತಮ್ಮ ವಿರುದ್ಧದ ಸಿಡಿ ಬಗ್ಗೆ ಪ್ರಾಸ್ತಾಪಿಸಿದರು. ಅಲ್ಲದೇ ಡಿಕೆ ಶಿವಕುಮಾರ್ ವಿರುದ್ಧ ಆಡಿಯೋ ಬಿಡುಗಡೆ ಮಾಡಿದರು. ನಮ್ಮ ಮನೆಯಲ್ಲಿ ರೇಡ್​​ ಆದಾಗ 45 ಕೋಟಿ ರೂ. ಸೀಜ್‌ ಆಗಿತ್ತು. ನನಗೆ ದುಬೈ, ಲಂಡನ್, ಮುಂಬೈನಲ್ಲಿ ಫ್ಲ್ಯಾಟ್​​ ಇದೆ. ನಮ್ಮ ಮನೆಯ ಮೇಲೆ ದಾಳಿ ಆದಾಗ ಹಣ ಸೀಜ್​​ ಆಗಿತ್ತು ಎಂದು ಮಾತನಾಡಿರುವುದು ಈ ಆಡಿಯೋದಲ್ಲಿದ್ದು, ಇದು ಡಿಕೆ ಶಿವಕುಮಾರ ಅವರದ್ದೇ ಎಂದು ರಮೇಶ್ ಜಾರಕಿಹೊಳಿ ಆಡಿಯೋ ರಿಲೀಸ್ ಮಾಡಿದ್ದಾರೆ.

ಇನ್ನು ಡಿಕೆಶಿ ಅತ್ತ ಶ್ರೀನಗರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿದ್ದು, ಈ ಬಗ್ಗೆ ಇದುವರೆಗೂ ಯಾವುದೇ ಪ್ರತಿಕ್ರಿಯಿಸಿಲ್ಲ. ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಡಿಕೆ ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಆಡಿಯೋ ಅಸ್ತ್ರ ಪ್ರಯೋಗಿಸಿದ್ದು, ಇದು ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ತಲುಪಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

Published On - 2:31 pm, Mon, 30 January 23

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ