AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ಗೆ ಸೇರಲ್ಲ ಎಂದ ಮರುದಿನವೇ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಶಿವರಾಮ್​ ಹೆಬ್ಬಾರ್​

ಆಪರೇಷನ್​ ಹಸ್ತದ ಗಾಳಕ್ಕೆ ಸಿಲುಕಿ ಶಿವರಾಮ್​ ಹೆಬ್ಬಾರ್​ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವಂದತಿಗಳು ಎದ್ದಿದ್ದವು. ಈ ಕುರಿತು ಶಿವರಾಮ್​ ಹೆಬ್ಬಾರ್​ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್​ಗೆ ಸೇರುವುದಿಲ್ಲ ಎಂದು ಹೇಳಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಸಾಕಷ್ಟು ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

ಕಾಂಗ್ರೆಸ್​ಗೆ ಸೇರಲ್ಲ ಎಂದ ಮರುದಿನವೇ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಶಿವರಾಮ್​ ಹೆಬ್ಬಾರ್​
ಶಾಸಕ ಶಿವರಾಮ್​ ಹೆಬ್ಬಾರ್​​, ಸಿಎಂ ಸಿದ್ದರಾಮಯ್ಯ
TV9 Web
| Edited By: ವಿವೇಕ ಬಿರಾದಾರ|

Updated on: Aug 26, 2023 | 11:26 AM

Share

ಬೆಂಗಳೂರು: ಘರವಾಪಸಿ ಕೋಲಾಹಲದ ನಡುವೆ ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್​ ಹೆಬ್ಬಾರ್ (Shivaram Hebbar)​ ಶುಕ್ರವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಭೇಟಿ ಮಾಡಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಸಿಎಂ ಜೊತೆ ಹೆಬ್ಬಾರ್​ ಸುಮಾರು ಒಂದೂವರೆ ಗಂಟೆಗಳ ಕಾಲ ಚರ್ಚೆ ನಡೆಸಿದ್ದು, ರಾಜ್ಯ ರಾಜಕೀಯದಲ್ಲಿ ಮೊತ್ತೊಂದು ಚರ್ಚೆಗೆ ನಾಂದಿ ಹಾಡಿದೆ.

ಕ್ಷೇತ್ರದಲ್ಲಿ ಶೇ 70 ಕ್ಕಿಂತ ಕಡಿಮೆ ಮಳೆ ಆಗಿರುವ ಹಿನ್ನಲೆಯಲ್ಲಿ ಬರಪೀಡಿತ ತಾಲೂಕು ಘೋಷಣೆಗೆ ಮನವಿ ಮಾಡಲಾಗಿದೆ. ಯಲ್ಲಾಪುರ – ಮುಂಡಗೋಡ – ಶಿರಸಿ ಭಾಗದ ಬನವಾಸಿಯನ್ನು ಬರಪೀಡಿತ ಎಂದು ಘೋಷಿಸಿ. ಮಳೆಯಿಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ. ಕ್ಷೇತ್ರಕ್ಕೆ ಹೆಚ್ಚಿನ ಅನುಧಾನ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಸಜ್ಜಾದ್ರಾ ಶಾಸಕರು? ರಾಜ್ಯ ರಾಜಕಾರಣದಲ್ಲಾಗುತ್ತಿರುವ ಬೆಳವಣಿಗೆ ವಿವರ ಇಲ್ಲಿದೆ

ಆಪರೇಷನ್​ ಹಸ್ತದ ಗಾಳಕ್ಕೆ ಸಿಲುಕಿ ಶಿವರಾಮ್​ ಹೆಬ್ಬಾರ್​ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವಂದತಿಗಳು ಎದ್ದಿದ್ದವು. ಈ ಕುರಿತು ಶಿವರಾಮ್​ ಹೆಬ್ಬಾರ್​ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್​ಗೆ ಸೇರುವುದಿಲ್ಲ ಎಂದು ಹೇಳಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಸಾಕಷ್ಟು ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಬಿಜೆಪಿಯ ನಾಯಕ ಎಸ್​​​. ಟಿ ಸೋಮಶೇಖರ್,​​ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರನ್ನು ಭೇಟಿಯಾಗಿದ್ದು ಸೋಮಶೇಖರ್ ಕಾಂಗ್ರೆಸ್​ಗೆ ಸೇರುತ್ತಾರೆ ಎಂಬ ವಂದತಿ ದಟ್ಟವಾಗಿಸಿದೆ. ಇವರ ನಂತರ ಶುಕ್ರವಾರ ಒಂದೇ ದಿನ ಪ್ರತ್ಯೇಕವಾಗಿ ಶಿವರಾಮ್​​ ಹೆಬ್ಬಾರ್​ ಮತ್ತು ಎಂಪಿ ರೇಣುಕಾಚಾರ್ಯ ಭೇಟಿಯಾಗಿದ್ದು ಬಿಜೆಪಿ ವಲಯದಲ್ಲಿ ಕಳವಳ ಸೃಷ್ಟಿಸಿದೆ. ​​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ