AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ಗೆ ಸೇರಲ್ಲ ಎಂದ ಮರುದಿನವೇ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಶಿವರಾಮ್​ ಹೆಬ್ಬಾರ್​

ಆಪರೇಷನ್​ ಹಸ್ತದ ಗಾಳಕ್ಕೆ ಸಿಲುಕಿ ಶಿವರಾಮ್​ ಹೆಬ್ಬಾರ್​ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವಂದತಿಗಳು ಎದ್ದಿದ್ದವು. ಈ ಕುರಿತು ಶಿವರಾಮ್​ ಹೆಬ್ಬಾರ್​ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್​ಗೆ ಸೇರುವುದಿಲ್ಲ ಎಂದು ಹೇಳಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಸಾಕಷ್ಟು ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

ಕಾಂಗ್ರೆಸ್​ಗೆ ಸೇರಲ್ಲ ಎಂದ ಮರುದಿನವೇ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಶಿವರಾಮ್​ ಹೆಬ್ಬಾರ್​
ಶಾಸಕ ಶಿವರಾಮ್​ ಹೆಬ್ಬಾರ್​​, ಸಿಎಂ ಸಿದ್ದರಾಮಯ್ಯ
TV9 Web
| Edited By: ವಿವೇಕ ಬಿರಾದಾರ|

Updated on: Aug 26, 2023 | 11:26 AM

Share

ಬೆಂಗಳೂರು: ಘರವಾಪಸಿ ಕೋಲಾಹಲದ ನಡುವೆ ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್​ ಹೆಬ್ಬಾರ್ (Shivaram Hebbar)​ ಶುಕ್ರವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಭೇಟಿ ಮಾಡಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಸಿಎಂ ಜೊತೆ ಹೆಬ್ಬಾರ್​ ಸುಮಾರು ಒಂದೂವರೆ ಗಂಟೆಗಳ ಕಾಲ ಚರ್ಚೆ ನಡೆಸಿದ್ದು, ರಾಜ್ಯ ರಾಜಕೀಯದಲ್ಲಿ ಮೊತ್ತೊಂದು ಚರ್ಚೆಗೆ ನಾಂದಿ ಹಾಡಿದೆ.

ಕ್ಷೇತ್ರದಲ್ಲಿ ಶೇ 70 ಕ್ಕಿಂತ ಕಡಿಮೆ ಮಳೆ ಆಗಿರುವ ಹಿನ್ನಲೆಯಲ್ಲಿ ಬರಪೀಡಿತ ತಾಲೂಕು ಘೋಷಣೆಗೆ ಮನವಿ ಮಾಡಲಾಗಿದೆ. ಯಲ್ಲಾಪುರ – ಮುಂಡಗೋಡ – ಶಿರಸಿ ಭಾಗದ ಬನವಾಸಿಯನ್ನು ಬರಪೀಡಿತ ಎಂದು ಘೋಷಿಸಿ. ಮಳೆಯಿಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ. ಕ್ಷೇತ್ರಕ್ಕೆ ಹೆಚ್ಚಿನ ಅನುಧಾನ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಸಜ್ಜಾದ್ರಾ ಶಾಸಕರು? ರಾಜ್ಯ ರಾಜಕಾರಣದಲ್ಲಾಗುತ್ತಿರುವ ಬೆಳವಣಿಗೆ ವಿವರ ಇಲ್ಲಿದೆ

ಆಪರೇಷನ್​ ಹಸ್ತದ ಗಾಳಕ್ಕೆ ಸಿಲುಕಿ ಶಿವರಾಮ್​ ಹೆಬ್ಬಾರ್​ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವಂದತಿಗಳು ಎದ್ದಿದ್ದವು. ಈ ಕುರಿತು ಶಿವರಾಮ್​ ಹೆಬ್ಬಾರ್​ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್​ಗೆ ಸೇರುವುದಿಲ್ಲ ಎಂದು ಹೇಳಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಸಾಕಷ್ಟು ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಬಿಜೆಪಿಯ ನಾಯಕ ಎಸ್​​​. ಟಿ ಸೋಮಶೇಖರ್,​​ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರನ್ನು ಭೇಟಿಯಾಗಿದ್ದು ಸೋಮಶೇಖರ್ ಕಾಂಗ್ರೆಸ್​ಗೆ ಸೇರುತ್ತಾರೆ ಎಂಬ ವಂದತಿ ದಟ್ಟವಾಗಿಸಿದೆ. ಇವರ ನಂತರ ಶುಕ್ರವಾರ ಒಂದೇ ದಿನ ಪ್ರತ್ಯೇಕವಾಗಿ ಶಿವರಾಮ್​​ ಹೆಬ್ಬಾರ್​ ಮತ್ತು ಎಂಪಿ ರೇಣುಕಾಚಾರ್ಯ ಭೇಟಿಯಾಗಿದ್ದು ಬಿಜೆಪಿ ವಲಯದಲ್ಲಿ ಕಳವಳ ಸೃಷ್ಟಿಸಿದೆ. ​​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!